ತಂತ್ರಜ್ಞಾನದ ಮೂಲ ನೀತಿ ತತ್ವಗಳನ್ನು ಅರಿತು ಸಮಾಜದ ಉನ್ನತಿಗಾಗಿ ತಂತ್ರಜ್ಞಾನಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ NES ಕಾರ್ಯದರ್ಶಿ ಎಸ್.ಎನ್. ನಾಗರಾಜ ಹೇಳಿದರು.
Also read: ಮೈತ್ರಿ ವಿಷಯದಲ್ಲಿ ಯಾವುದೇ ಅಸಮಾಧಾನ ಇಲ್ಲ: ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಸ್ಪಷ್ಟನೆ
ಸೈಬರ್ ಕ್ಷೇತ್ರ ಸದಾ ಒಂದಿಲ್ಲೊಂದು ಭದ್ರತಾ ಸವಾಲುಗಳನ್ನು ಎದುರಿಸುತ್ತಲೆ ಬರುತ್ತಿದೆ. ಯುವ ಸಮೂಹ ಅಂತಹ ಸವಾಲುಗಳನ್ನು ಪರಿಹರಿಸುವತ್ತ ಯೋಜಿಸಬೇಕಿದೆ. ತಾಂತ್ರಿಕ ಜ್ಞಾನದ ಜೊತೆಗೆ ಭಾರತ ಸರ್ಕಾರ ನೂತನವಾಗಿ ಅನುಷ್ಠಾನಗೊಳಿಸಿರುವ ಸೈಬರ್ ಭದ್ರತಾ ನಿಯಮಾವಳಿಗಳನ್ನು, ಕಾನೂನಿತ್ಮಾಕ ವಿಚಾರಗಳನ್ನು ಅರಿಯಿರಿ ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಪಿ.ಮಂಜುನಾಥ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ಲೇಸ್ಮೆಂಟ್ ಅಧಿಕಾರಿ ಜಿ.ಸುರೇಶ್, ಐಸಿಟಿ ಅಕಾಡೆಮಿ ಸಂವಹನಾಧಿಕಾರಿ ಜಕಾವುಲ್ಲ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post