ಕಲ್ಪ ಮೀಡಿಯಾ ಹೌಸ್ | ಚಾಮರಾಜನಗರ (ಹನೂರು) |
ಕಾವೇರಿ Cauvery ನೀರು ನಿಯಂತ್ರಣ ಸಮಿತಿಯು 3000 ಕ್ಯೂಸೆಕ್ ನೀರನ್ನು ಹರಿಸಲು ಆದೇಶಿಸಿದೆ. ಈ ಬಗ್ಗೆ ಕಾನೂನು ತಂಡದೊಂದಿಗೆ ಚರ್ಚಿಸಿದ್ದು ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಕಾನೂನು ತಂಡ ಸಲಹೆ ನೀಡಿದೆ. ನೀರು ಬಿಡಲು ನಮ್ಮ ಬಳಿ ನೀರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ತಿಳಿಸಿದರು.
ಅವರು ಶ್ರೀ ಮಲೈ ಮಹದೇಶ್ವರ ಬೆಟ್ಟದ Shri Male Mahadeshwara hill ಬಳಿ ಮಾಧ್ಯಮದವರಿಗೆ ಇಂದು ಪ್ರತಿಕ್ರಿಯೆ ನೀಡಿ, ಇಂದು ಮಹದೇಶ್ವರ ದೇವಸ್ಥಾನದ ಪ್ರಾಧಿಕಾರದ ಸಭೆಯಿದ್ದು, ಪ್ರಾಧಿಕಾರದ ಅಧ್ಯಕ್ಷನಾಗಿ ಸಭೆಯಲ್ಲಿ ಪಾಲ್ಗೊಳ್ಳುತ್ತಿರುವುದಾಗಿ ತಿಳಿಸಿದರು.
ಮಹದೇಶ್ವರನಲ್ಲಿ ಪ್ರಾರ್ಥನೆ
ಮಳೆ ಕೈಕೊಟ್ಟು 195 ತಾಲ್ಲೂಕು ಗಳನ್ನು ಬರಪೀಡಿತ ಎಂದು ಘೋಷಿಸಿದ್ದು, ಮಹದೇಶ್ವರನಲ್ಲಿ ಮಳೆಗಾಗಿ, ರಾಜ್ಯದ ಜನರಿಗೆ, ರೈತರಿಗೆ ಸೌಖ್ಯವಾಗಲಿ ಎಂದು ಪ್ರಾರ್ಥಿಸಿರುವುದಾಗಿ ತಿಳಿಸಿದರು.
Also read: ಜಾತ್ಯಾತೀತ ಎಂದು ಹೇಳಿಕೊಳ್ಳುವ ಜೆಡಿಎಸ್ ಕೋಮುವಾದಿ ಪಕ್ಷ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೂಢನಂಬಿಕೆ, ಮೌಢ್ಯ, ಕಂದಾಚಾರದಲ್ಲಿ ನಂಬಿಕೆ ಇಲ್ಲ
ಮೂಢನಂಬಿಕೆ, ಮೌಢ್ಯ, ಕಂದಾಚಾರದಲ್ಲಿ ನಂಬಿಕೆ ಇಲ್ಲ. ಅದಕ್ಕಾಗಿಯೇ ಹಿಂದೆ ಮುಖ್ಯಮಂತ್ರಿ ಯಾದ ಕೂಡಲೇ ಚಾಮರಾಜನಗರಕ್ಕೆ ಭೇಟಿ ನೀಡಿದೆ. ಸುಮಾರು 12 ಬಾರಿ ಭೇಟಿ ನೀಡಿದ್ದು, 5 ವರ್ಷ ಗಟ್ಟಿಯಾಗಿ ಇದ್ದೆ. ಚಾಮರಾಜನಗರ ಕ್ಕೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯ ಈಗ ಹೋಗಿದೆ ಎಂದರು.
ಬಂದ್ : ಯಾರಿಗೂ ತೊಂದರೆಯಾಗಬಾರದು
ಸೆಪ್ಟೆಂಬರ್ 29 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿರುವ ಬಗ್ಗೆ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಗೆ ಅವಕಾಶವಿದೆ. ಆದರೆ ಇತರರಿಗೆ ತೊಂದರೆಯಾಗಬಾರದು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ನಾವು ಈ ಆದೇಶ ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸುತ್ತೇವೆ ಎಂದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















