ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಗಿಗುಡ್ಡದಲ್ಲಿ ನಡೆದ ಘಟನೆಯನ್ನು ನೋಡಿದರೆ ರಾಜ್ಯ ಸರ್ಕಾರ ಬದುಕಿದೆಯೇ ಎಂಬ ಪ್ರಶ್ನೆ ಮೂಡುತ್ತದೆ ಎಂದು ಮಾಜಿ ಸಚಿವ ಅಶ್ವತ್ ನಾರಾಯಣ್ Ashwathnarayan ಹೇಳಿದರು.
ಬಿಜೆಪಿ ಸತ್ಯಶೋಧನಾ ಸಮಿತಿ ಗಲಭೆ ಪೀಡಿತ ರಾಗಿಗುಡ್ಡಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸ್ಥಳೀಯರಿಂದ ಘಟನೆ ಕುರಿತು ಮಾಹಿತಿ ಪಡೆದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ನಿಜಕ್ಕೂ ಅಲ್ಲಿ ಭಯದ ವಾತಾವರಣವಿದೆ. ಜನರು ಕೂಡ ಅಸಹಾಯಕರಾಗಿದ್ದಾರೆ. ಭಯ ಬೀತಗೊಂಡಿದ್ದಾರೆ. ಸುಮಾರು 200 ರಿಂದ 300ಕ್ಕೂ ಹೆಚ್ಚು ಜನ ಹಿಂದುಗಳ ಮನೆಗಳಿಗೆ ನುಗ್ಗಿ ಸುಖ ಸುಮ್ಮನೆ ಹಲ್ಲೆ ನಡೆಸಿದ್ದಾರೆ. ಇದು ನಿಜಕ್ಕೂ ಖಂಡನೀಯ ಎಂದರು.
Also read: ಅ.8ರಂದು ಕೆಡ್ಲ್ಯೂಜೆ ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿ ಪ್ರದಾನ, ಸರ್ವ ಸದಸ್ಯರ ಸಭೆ
ರಾಗಿಗುಡ್ಡದಲ್ಲಿ Shivamogga Raagigudda ಅಮಾಯಕರ ಮೇಲೆ ಹಲ್ಲೆ ನಡೆಸಿದ್ದಾರೆ. ಜನರು ಭಯಗೊಂಡಿದ್ದಾರೆ. ರಾಜ್ಯ ಸರ್ಕಾರ ಬದುಕಿದೆಯಾ ಎಂದು ಪ್ರಶ್ನಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಕೆಲ ಸಚಿವರು ರಾಜಕೀಯ ಪ್ರೇರಿತ ಹೇಳಿಕೆ ನೀಡುತ್ತಿದ್ದಾರೆ. ಇದು ನಿಜಕ್ಕೂ ಖಂಡನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಘಟನೆಯನ್ನು ನೋಡಿದರೆ ಇದು ಪೂರ್ವ ನಿಯೋಜಿತ ಕೃತ್ಯ ಎಂದಿನಿಸುತ್ತದೆ. ಇದು ನಿಜಕ್ಕೂ ಶಕ್ತಿ ಪ್ರದರ್ಶನವಲ್ಲದೆ ಬೇರೇನು ಅಲ್ಲ. ಪ್ರಚೋದನೆ ಇಲ್ಲದೆ ಈ ರೀತಿ ಏಕಾಏಕಿ ಹಲ್ಲೆ ನಡೆಸುವುದಕ್ಕೆ, ದೊಂಬಿ ನಡೆಸುವುದಕ್ಕೆ ಸಾಧ್ಯವಿಲ್ಲ. ಇವರಿಗೆ ಸರ್ಕಾರವೇ ಒಂದು ರೀತಿಯಲ್ಲಿ ಉತ್ತೇಜನ ನೀಡುತ್ತಿದೆ ಎಂಬ ಅನುಮಾನವ ವ್ಯಕ್ತವಾಗುತ್ತಿದೆ ಎಂದು ಆರೋಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post