ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನಗರ ಜಿಲ್ಲೆಯ ಆನೇಕಲ್’ನಲ್ಲಿ ಪಟಾಕಿ ಅನ್ ಲೋಡ್ ಮಾಡುವ ವೇಳೆ ಸಂಭವಿಸಿದ ಭಾರೀ ಸ್ಫೋಟದಲ್ಲಿ ಸಾವಿಗೀಡಾದವರ ಸಂಖ್ಯೆ 13ಕ್ಕೇರಿದೆ.
ಇಲ್ಲಿನ ನವೀನ್ ಎನ್ನುವವರಿಗೆ ಸೇರಿದ ಪಟಾಕಿ ಅಂಗಡಿಗೆ ಅನ್ ಲೋಡ್ ಮಾಡುವಾಗ ಆಕಸ್ಮಿಕವಾಗಿ ಸ್ಪೋಟ ಸಂಭವಿಸಿದ್ದು, ಇದು ಅಕ್ಕಪಕ್ಕದ 4-5 ಅಂಗಡಿಗಳಿಗೂ ಸಹ ವ್ಯಾಪಿಸಿದೆ. ಸುಮಾರು 4-5 ಅಂಗಡಿಗಳು ಸುಟ್ಟು ಭಸ್ಮವಾಗಿವೆ.

ಸುಮಾರು 20 ಕಾರ್ಮಿಕರ ಇಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, 13 ಮಂದಿ ಸಜೀವವಾಗಿ ದಹನಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಇನ್ನೂ ಕೆಲವರು ಸಿಲುಕಿರಬಹುದು ಎನ್ನಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post