ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ Central Minister Shobha Karandlaje ಹೆಸರು ಕೇಳಿಬಂದಿದ್ದು, ಶೀಘ್ರದಲ್ಲಿ ಬಿಜೆಪಿ ವರಿಷ್ಠರು ಅಂತಿಮ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಕುರಿತಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ BSYadiyurappa ಅವರು ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ Jagathprakash Nadda ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದು, ಈ ಸಂದರ್ಭದಲ್ಲಿ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ, MPRaghavendra ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ Shikaripura MLA Vijayendra ಅವರ ಹೆಸರುಗಳು ಮುನ್ನಲೆಗೆ ಬಂದಿದೆ ಎನ್ನಲಾಗಿದೆ.
ಅಂತಿಮವಾಗಿ ರಾಜ್ಯ ಬಿಜೆಪಿ ಸಾರಥ್ಯ ವಹಿಸಲು ಒಮ್ಮತದ ಅಭ್ಯರ್ಥಿಯ ಅವಶ್ಕತೆ ಇದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯಾಧ್ಯಕ್ಷರಾಗುವ ಸಾಧ್ಯತೆ ಕಂಡುಬಂದಿದೆ.
Also read: 5ನೇ ಹಣಕಾಸು ಆಯೋಗದ ಅಧ್ಯಕ್ಷರಾಗಿ ಸಿ. ನಾರಾಯಣಸ್ವಾಮಿ ಅಧಿಕಾರ ಸ್ವೀಕಾರ
ಶಾಸಕಾಂಗ ಪಕ್ಷದ ನಾಯಕರ ಸ್ಥಾನಕ್ಕೂ ಆಯ್ಕೆ ಪ್ರಕ್ರಿಯೆ ನಡೆಯಬೇಕಾಗಿದ್ದು, ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೆಸರನ್ನು ಯಡಿಯೂರಪ್ಪ ಸೂಚಿಸಿದ್ದರೆ, ಇನ್ನೊಂದಡೆ ಬಿಎಸ್ವೈ ವಿರೋಧಿ ಬಣದವರು ಬಸವರಾಜ್ ಯತ್ನಾಳ್ ಅವರ ಆಯ್ಕೆಗಾಗಿ ಪಟ್ಟುಹಿಡಿದ್ದಾರೆ.
ಒಟ್ಟಾರೆ, ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನ ಹಾಗೂ ಶಾಸಕಾಂಗ ಪಕ್ಷದ ನಾಯಕರ ಆಯ್ಕೆ ಮಾಡಲು ಬಿಜೆಪಿ ವರಿಷ್ಠರು ತೆರೆಮರೆಯ ಕಸರತ್ತು ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post