ಕಲ್ಪ ಮೀಡಿಯಾ ಹೌಸ್ | ಚಂದ್ರಗುತ್ತಿ |
ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ Shri Renukamba Temple ಶರನ್ನವರಾತ್ರಿ ಆಯುಧ ಪೂಜೆಯೆಂದು ಸೋಮವಾರ ಸಾವಿರಾರು ಭಕ್ತರು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.
ತಾಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಶಿಕಾರಿಪುರ, ಹರಿಹರ, ಹಾನಗಲ್, ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ರಾಯಚೂರು, ಸೇರಿದಂತೆ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಮಲೆನಾಡಿನ ಆರಾಧ್ಯ ದೇವಿ ರೇಣುಕಾದೇವಿಯನ್ನು ದರ್ಶನ ಪಡೆದು ಉದೋ ಉದೋ ಎಂದು ಜೈಕಾರ ಹಾಕಿ ಭಕ್ತಿ ಸಮರ್ಪಿಸಿ ಶರನ್ನವರಾತ್ರಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು.
ಶರನ್ನವರಾತ್ರಿ Sharannavarathri ಪ್ರಯುಕ್ತ 9 ದಿನಗಳ ಕಾಲ ದೇವಾಲಯದಲ್ಲಿ ಪ್ರತಿನಿತ್ಯ ಧಾರ್ಮಿಕ ಪೂಜಾ ವಿಧಿ-ವಿಧಾನಗಳು ನಡೆದು ಬಂದಿದ್ದು. ಮಂಗಳವಾರ ಚಂಡಿಕಾ ಹೋಮ, ಆಯುಧ ಪೂಜೆ, ವಿವಿಧ ಪೂಜಾ ವಿಧಾನಗಳು ಜರುಗಿದವು. ಇನ್ನು ಮಂಗಳವಾರದಂದು ಸಮೀಪದ ನಾರ್ಶಿ ಬನ್ನಿಕಟ್ಟೆಯಿಂದ ನಾಲ್ಕು ಕಾಲು ಮಂಟಪದವರೆಗೆ ಧಾರ್ಮಿಕ ಸಾಂಪ್ರದಾಯದಂತೆ ಶ್ರೀ ರೇಣುಕಾಂಬ ದೇವಿ ಪಲ್ಲಕ್ಕಿ ಉತ್ಸವ ನಡೆಯಲಿದೆ.
Also read: ‘ವ್ಯೂಹ’ ಚಿತ್ರದ ಪದೆ ಪದೆ ನೆನಪಾಗಿದೆ ಹಾಡು ಬಿಡುಗಡೆ
ಪರಿವಾರ ದೇವರುಗಳಾದ ನಾಗದೇವತೆ, ಮಾತಂಗಿ, ಕಾಲಭೈರವ, ಪರಶುರಾಮ ತ್ರಿಶೂಲದ ಭೈರಪ್ಪ ದೇವರುಗಳಿಗೆ ಶರನ್ನರಾತ್ರಿ ಅಂಗವಾಗಿ ವಿಶೇಷ ಪೂಜೆ ನೆರವೇರಿದವು.
ತಾಲೂಕು ದಂಡಾಧಿಕಾರಿ ಹುಸೇನ್ ಸರಕಾವಸ್ ದೇವಾಲಯಕ್ಕೆ ಭೇಟಿ ನೀಡಿದರು ಶ್ರೀ ರೇಣುಕಾಂಬ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ವಿ.ಎಲ್ ಶಿವಪ್ರಸಾದ್ ಸೇರಿದಂತೆ ದೇವಸ್ಥಾನ ಸಿಬ್ಬಂದಿಗಳು ಹಾಗೂ ಕಂದಾಯ ಇಲಾಖೆಯ ಗ್ರಾಮ ಸಹಾಯಕರು ದೇವಾಲಯದಲ್ಲಿ ಕಾರ್ಯನಿರ್ವಹಿಸಿದರು. ಪೊಲೀಸ್ ಆರಕ್ಷಕರಿಂದ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.
ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post