ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗದ್ದೆಯಲ್ಲಿದ್ದ ವೇಳೆ ಸಿಡಿಲು ಬಡಿದ ಸಹೋದರರಿಬ್ಬರು ದುರ್ಮರಣವನ್ನಪ್ಪಿರುವ ಘಟನೆ ಭದ್ರಾವತಿಯ ಜಂಕ್ಷನ್ ಬಳಿಯಲ್ಲಿ ನಡೆದಿದೆ.
ಭದ್ರಾವತಿ ತಾಲೂಕಿನ ಹುಣಸೇಕಟ್ಟೆ ಜಂಕ್ಷನ್ ಬಳಿಯಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದ್ದು, ಮೃತರನ್ನು ಗೌಳಿಗರ ಕ್ಯಾಂಪ್’ನ ವಿಠ್ಠಲ್ ಎಂಬುವರ ಪುತ್ರರಾದ ಬೀರು (32) ಹಾಗೂ ಸುರೇಶ್ (35) ಎಂದು ಗುರುತಿಸಲಾಗಿದೆ.
ಭತ್ತದ ಕಟಾವು ಮಾಡಿ ಗದ್ದೆಯಲ್ಲೇ ಬಿಟ್ಟಿದ್ದು ಮಳೆ ಆರಂಭವಾದ ಹಿನ್ನೆಲೆ ನೀರು ಬಸಿ ತೆಗೆಯಲು ಹೋದ ವೇಳೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
Also read: ಶಿವಮೊಗ್ಗ | ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಅದ್ದೂರಿ ಸ್ವಾಗತ | ಮುಗಿಲುಮುಟ್ಟಿದ ಹರ್ಷೋದ್ಗಾರ
ನಿನ್ನೆ ಸಂಜೆಯಿಂದ ರಾತ್ರಿಯವರೆಗೂ ಭದ್ರಾವತಿ ತಾಲೂಕು ಹಾಗೂ ಗ್ರಾಮಾಂತರ ಭಾಗದಲ್ಲಿ ಭಾರೀ ಮಳೆಯಾಗಿದ್ದು, ಈ ವೇಳೆಯಲ್ಲಿ ಈ ಘಟನೆ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post