ಕಲ್ಪ ಮೀಡಿಯಾ ಹೌಸ್ | ತಿರುವನಂತಪುರಂ |
ಚಕ್ಕುಲಿ ತಿನ್ನುವ ವೇಳೆ ಅದು ಗಂಟಲಲ್ಲಿ ಸಿಲುಕಿ ಒಂದೂವರೆ ವರ್ಷದ ಪುಟ್ಟ ಕಂದಮ್ಮ ಸಾವನ್ನಪ್ಪಿರುವ ಘಟನ ಕೇರಳದ ತಿರುವನಂತಪುರಂನಲ್ಲಿ ನಡೆದಿದೆ.
ಮೃತ ಬಾಲಕನನ್ನು ವೈಷ್ಣವ್ ಎಂದು ಗುರುತಿಸಲಾಗಿದ್ದು, ನಿನ್ನೆ ಬೆಳಗ್ಗೆ ಈ ದುರ್ಘಟನೆ ನಡೆದಿದೆ.
ಮನೆಯಲ್ಲಿ ಬಾಲಕ ಹಾಗೂ ತಾಯಿ ಮಾತ್ರ ಇದ್ದರು. ಈ ವೇಳೆ ಬಾಲಕ ಚಕ್ಕುಲಿಯನು ತಿನ್ನುತ್ತಾ ತನ್ನ ಪಾಡಿಗೆ ಆಟವಾಡುತ್ತಿದ್ದನು. ಈ ವೇಳೆ ಏಕಾಏಕಿ ಚಕ್ಕುಲಿಯನ್ನು ನುಂಗಿಬಿಟ್ಟಿದ್ದು, ಪರಿಣಾಮ ಚಕ್ಕುಲಿ ಗಂಟಲಲ್ಲಿ ಸಿಲುಕಿಕೊಂಡು ಆತನಿಗೆ ಉಸಿರಾಡಲು ಕಷ್ಟವಾಗಿದೆ. ತತಕ್ಷಣವೇ ಆತನನ್ನು ಕೊಲ್ಲಂನಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ, ಬಾಲಕ ಬದುಕಲಿಲ್ಲ ಎಂದು ವರದಿಯಾಗಿದೆ.
Also read: ಬೆಂಗಳೂರು ಮಾತ್ರವಲ್ಲ | ಈ ಎಲ್ಲ ದೇಶಗಳ ನೂರಾರು ಶಾಲೆಗಳಿಗೆ ಬಂದಿದೆ ಬಾಂಬ್ ಬೆದರಿಕೆ
ಮೃತ ವೈಷ್ಣವ್, ಮಂಕಂಕುಜಿ ಮಲಯಿಲ್ ಪಾಡೆತತ್ತಿಲ್ ಹೌಸ್ನ ವಿಜೀಶ್ ಮತ್ತು ದಿವ್ಯಾ ದಾಸ್ ಅವರ ಅವಳಿ ಮಕ್ಕಳಲ್ಲಿ ಒಬ್ಬನಾಗಿದ್ದಾನೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post