Tuesday, July 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಏಕೀಕರಣಗೊಂಡು 68 ವರ್ಷವಾದರೂ ಗಡಿನಾಡ ಕನ್ನಡಿಗರ ಸಮಸ್ಯೆ ಜೀವಂತ: ಡಾ. ಕಲೀಂ ಉಲ್ಲಾ ಬೇಸರ

ರಾಷ್ಟ್ರೀಯ ಶಿಕ್ಷಣ ಸಮಿತಿ ಕಾನೂನು ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ

December 5, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕರ್ನಾಟಕ ಏಕೀಕರಣಗೊಂಡು ಅರವತ್ತೆಂಟು ವರ್ಷಗಳೇ ಕಳೆದರು ಇಂದಿಗೂ ಗಡಿನಾಡ ಕನ್ನಡಿಗರು ಅನೇಕ ಸವಾಲುಗಳನ್ನು ಎದುರಿಸುತ್ತಿರುವುದು ದುರಂತ ಎಂದು ಖ್ಯಾತ ಲೇಖಕ ಡಾ.ಕಲೀಂ ಉಲ್ಲಾ ಬೇಸರ ವ್ಯಕ್ತಪಡಿಸಿದರು.

ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ National Education Trust ಸಿ. ಭೀಮಸೇನರಾವ್ ರಾಷ್ಟ್ರೀಯ ಕಾನೂನು ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಕಾನೂನು ಅಧ್ಯಯನ ಕೇಂದ್ರದ ವತಿಯಿಂದ ಮಂಗಳವಾರ ಕಾಲೇಜಿನ ಆವರಣದಲ್ಲಿ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ KannadaRajyothsava ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಅಂಜತಾ ಎಲ್ಲೋರಾದಲ್ಲಿರುವ ಎಲ್ಲೋರ ಇತಿಹಾಸದ ಫಲಕದಲ್ಲಿ ಕನ್ನಡ ಎಂಬ ಪದದ ಉಲ್ಲೇಖವಿದೆ. ಮಹಾರಾಷ್ಟ್ರದಲ್ಲಿ ಕನ್ನಡ ಎಂಬ ಹೆಸರಿನ ಹಳ್ಳಿಯಿದೆ. ಇಂದಿಗೂ ಕರ್ನಾಟಕದ ಹೊರತಾಗಿ ಗಡಿನಾಡಿನ ಇತರೇ ಪ್ರದೇಶಗಳಲ್ಲಿ ಸುಮಾರು ಮೂರು ಕೋಟಿ ಕನ್ನಡಿಗರಿದ್ದಾರೆ. ಕರ್ನಾಟಕಕ್ಕೆ ಸೇರಿಕೊಳ್ಳಲು ಅನೇಕ ಹೋರಾಟಗಳನ್ನು ನಡೆಸುತ್ತಿದ್ದಾರೆ. ಇದರಿಂದ ಸ್ಥಳೀಯ ಸಂಸ್ಥೆಗಳಿಂದ ಅನೇಕ ಶೋಷಣೆಗಳನ್ನು ಎದುರಿಸುತ್ತಿದ್ದು, ಗಡಿನಾಡ ಕನ್ನಡಿಗರ ಸ್ಥಿತಿಗತಿ ಬದಲಾಗಬೇಕಿದೆ.

ಹರಿದು ಹಂಚಿ ಹೋಗಿದ್ದ ಕನ್ನಡಿಗರನ್ನು ಒಂದೆಡೆ ಸೇರಿಸುವ ದೊಡ್ಡ ಹೋರಾಟವೇ ಏಕೀಕರಣ ಹೋರಾಟ. ಕರ್ನಾಟಕ ಶಬ್ದದ ಪರಿಕಲ್ಪನೆ ತಂದು ಕೊಟ್ಟವರು ಕುವೆಂಪು. ಸ್ವಾತಂತ್ರ ಪೂರ್ವದಲ್ಲಿಯೇ ಅವರು ರಚಿಸಿದ್ದ ನಾಡಗೀತೆಯ ಮೊದಲ ಸಾಲುಗಳು ಕರ್ನಾಟಕದ ಏಕೀಕರಣದ ಅವಶ್ಯಕತೆಯನ್ನು ಸಾರಿ ಹೇಳುತ್ತಿದೆ.
ಕನ್ನಡಕ್ಕೆ ಕನ್ನಡೇತರರ ಕೊಡುಗೆ ಅಪಾರ. ಕನ್ನಡ ಬಹುಮುಖಿಯಾಗಿ ಬೆಳೆಯಲು ಎಲ್ಲಾ ಧರ್ಮದವರು, ಕನ್ನಡೇತರರು ತಮ್ಮ ಬದುಕನ್ನು ಶ್ರಮಿಸಿದ್ದಾರೆ. ಮಾತೃಭಾಷೆ ಬೇರೆಯದೇ ಆದರೂ ಕನ್ನಡದಲ್ಲಿ ಮಹತ್ತರ ಕೊಡುಗೆಗಳನ್ನು ನೀಡಿದ ಸಾಹಿತಿಗಳು, ಚಲನಚಿತ್ರ ನಟರು, ಗಾಯಕರು, ಹೋರಾಟಗರಾರು ಕನ್ನಡದ ಅಸ್ಮಿತೆಗಳಾಗಿ ನಮ್ಮ ಮನದಲ್ಲಿ ಉಳಿದಿದ್ದಾರೆ ಎಂದು ಹೇಳಿದರು.

Also read: ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಅಮೃತ ಸಂಭ್ರಮಕ್ಕೆ ರಾಜ್ಯಪಾಲರ ಚಾಲನೆ

ಮುಖ್ಯ ಅತಿಥಿಗಳಾಗಿದ್ದ ಸಿಮ್ಸ್ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಕೆ.ಎಸ್.ಗಂಗಾಧರ ಮಾತನಾಡಿ, ವಿವಿಧ ಸಂಸ್ಕೃತಿಯ ಜನರನ್ನು ಒಂದೆಡೆ ಸೇರಿಸುವಲ್ಲಿ ಭಾಷೆ ಕೊಂಡಿಯಾಗಿದೆ. ಯುವ ಸಮೂಹ ಹೆಚ್ಚುಗಾರಿಕೆಗಳ ತೋರ್ಪಡಿಕೆಯ ಹಂಬಲದಲ್ಲಿ ಇತರೇ ಭಾಷೆಗಳ ಮೇಲೆ ಪ್ರಭಾವಕ್ಕೊಳಗಾಗುತ್ತಿದ್ದಾರೆ. ಕನ್ನಡ ನಾಡಿನಲ್ಲಿ ಕನ್ನಡ ಕಲಿಕೆಯ ಅನಿವಾರ್ಯತೆ ಸೃಷ್ಟಿಸಬೇಕಿದೆ. ಕನ್ನಡಕ್ಕೆ ತನ್ನದೇ ಲಿಪಿಯ ಶ್ರೀಮಂತಿಕೆಯಿದ್ದು, ಬರೆದಂತೆ ಉಚ್ಚರಿಸಬಹುದಾದ ಅವಕಾಶವಿದೆ ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿದ ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ವರ್ಷಪೂರ್ತಿ ಕನ್ನಡ ರಾಜ್ಯೋತ್ಸವ ಆಚರಿಸುವ ಪ್ರಸ್ತುತತೆಯಿದೆ. ನಮ್ಮ ಮಕ್ಕಳು ಆಡುವ ಮತ್ತು ಕಲಿಯುವ ಭಾಷೆಗಳ ನಡುವೆ ಗೊಂದಲವಿದೆ. ಯಾವ ಭಾಷೆಯಲ್ಲಿಯು ಪರಿಪಕ್ವವಾಗದೇ ಅತಂತ್ರರಾಗುತ್ತಿದ್ದಾರೆ‌. ಮಾತೃಭಾಷೆಯನ್ನು ಪರಿಪಕ್ವವಾಗಿ ಕಲಿಯದ ವ್ಯಕ್ತಿ ಎಂದಿಗೂ ಇತರ ಭಾಷೆಗಳನ್ನು ಸಮರ್ಥವಾಗಿ ಕಲಿಯಲಾರ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಿ.ಭೀಮಸೇನರಾವ್ ರಾಷ್ಟ್ರೀಯ ಕಾನೂನು ಮಹಾವಿದ್ಯಾಲಯ ಕಾಲೇಜಿನ ಪ್ರಾಂಶುಪಾಲರಾದ ಡಾ.ಎ.ಅನಲ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಯೋಜಕರಾದ ಡಾ.ಕಾಂತರಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
  

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಅಮೃತ ಸಂಭ್ರಮಕ್ಕೆ ರಾಜ್ಯಪಾಲರ ಚಾಲನೆ

Next Post

ಅಗ್ನಿ ಅವಘಡ ಸಂಭವಿಸಿದಾಗ ಯಾವ ರೀತಿಯ ಕ್ರಮ ಕೈಗೊಳ್ಳಬೇಕು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಗ್ನಿ ಅವಘಡ ಸಂಭವಿಸಿದಾಗ ಯಾವ ರೀತಿಯ ಕ್ರಮ ಕೈಗೊಳ್ಳಬೇಕು?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

File Image

ದಾವಣಗೆರೆ | ಕೆಎಸ್’ಆರ್’ಟಿಸಿಯಿಂದ ವೀಕೆಂಡ್ ಸ್ಪೆಷಲ್ ಟೂರ್ ಪ್ಯಾಕೇಜ್ | ಇಲ್ಲಿದೆ ವಿವರ

July 8, 2025
Internet Image

ಗಮನಿಸಿ! ಜು. 9ರಂದು ಶಿವಮೊಗ್ಗ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ಕರೆಂಟ್ ಇರಲ್ಲ

July 8, 2025

ಶಿವಮೊಗ್ಗ | ವಿಪ್ರ ಯುವ ಮಹೋತ್ಸವ | ಹೊಸದಿಸೆಗೆ ಮುನ್ನುಡಿಯಾದ ಕಾರ್ಯಕ್ರಮ

July 8, 2025

ಮಡಿಕೇರಿ | ಜುಲೈ 9ರಂದು ಉದ್ಯೋಗ ಮೇಳ | ಯಾವೆಲ್ಲಾ ಕಂಪೆನಿ ಭಾಗಿ? ಯಾರೆಲ್ಲಾ ಪಾಲ್ಗೊಳ್ಳಬಹುದು?

July 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Image

ದಾವಣಗೆರೆ | ಕೆಎಸ್’ಆರ್’ಟಿಸಿಯಿಂದ ವೀಕೆಂಡ್ ಸ್ಪೆಷಲ್ ಟೂರ್ ಪ್ಯಾಕೇಜ್ | ಇಲ್ಲಿದೆ ವಿವರ

July 8, 2025
Internet Image

ಗಮನಿಸಿ! ಜು. 9ರಂದು ಶಿವಮೊಗ್ಗ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ಕರೆಂಟ್ ಇರಲ್ಲ

July 8, 2025

ಶಿವಮೊಗ್ಗ | ವಿಪ್ರ ಯುವ ಮಹೋತ್ಸವ | ಹೊಸದಿಸೆಗೆ ಮುನ್ನುಡಿಯಾದ ಕಾರ್ಯಕ್ರಮ

July 8, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!