Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಳಗಾವಿ

ರಾಜ್ಯದ ಬರ ಪರಿಸ್ಥಿತಿಯನ್ನು ಸದನದಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದೇನು?

December 8, 2023
in ಬೆಳಗಾವಿ, ರಾಜಕೀಯ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   | ಸುವರ್ಣ ವಿಧಾನಸೌಧ/ ಬೆಳಗಾವಿ |

ತೀವ್ರ ಬರದಿಂದ ಕಂಗೆಟ್ಟಿರುವ ರೈತರ 2 ಲಕ್ಷ ರೂಪಾಯಿ ವರೆಗಿನ ಕೃಷಿ ಸಾಲ ಮನ್ನಾ ಮಾಡಬೇಕು ಹಾಗೂ ರಾಜ್ಯ ಕೃಷಿ ವಲಯವನ್ನು ಬರದ ಸಂಕಷ್ಟದಿಂದ ಪಾರು ಮಾಡಲು ತಕ್ಷಣವೇ 10,000 ಕೋಟಿ ರೂಪಾಯಿ ಬಿಡುಗಡೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ HDKumaraswamy ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಕಲಾಪದಲ್ಲಿ ಬರದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಈ ಸರಕಾರಕ್ಕೆ ಪ್ರಚಾರದ ಮೇಲೆ ಇರುವ ಹುಚ್ಚು ರೈತರ ಬಗ್ಗೆ ಇಲ್ಲ ಎಂದು ಹೆಚ್.ಡಿ. ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು.

ಬರ ಪರಿಸ್ಥಿತಿ ನಿರ್ವಹಣೆ ಬಗ್ಗೆ ಸರಕಾರದ ಅಸಡ್ಡೆ, ನಿರ್ಲಕ್ಷ್ಯ ನನಗೆ ಅಚ್ಚರಿ, ಕಳವಳ ತಂದಿದೆ. ಕಳೆದ ಆರು ತಿಂಗಳಿನಿಂದ ಕೇವಲ ಗ್ಯಾರಂಟಿಗಳ ಬಗ್ಗೆಯೇ ಕೆಲಸ ಮಾಡುತ್ತಿರುವ ಈ ಸರಕಾರ, ಆರ್ಥಿಕ ಹೊರೆಯನ್ನು ತನ್ನ ಮೇಲೆ ಎಳೆದುಕೊಂಡು ರೈತರಿಗೆ ಪ್ರತಿಯೊಂದಕ್ಕೂ ಬರೆ ಎಳೆಯುತ್ತದೆ. ಬೆಳೆನಾಶದಿಂದ ಅತೀವ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸರಕಾರ ಸಾಲಮನ್ನಾ ಮೂಲಕ ಸಹಾಯಕ್ಕೆ ಬರಬೇಕು ಎಂದು ಅವರು ಒತ್ತಾಯ ಮಾಡಿದರು.

2001ರಿಂದ ಇಲ್ಲಿಯ ತನಕ ರಾಜ್ಯದಲ್ಲಿ ಬರಗಾಲ ಎದುರಿಸಿದ್ದೇವೆ. ಭಾರೀ ಪ್ರವಾಹ ಸಮಸ್ಯೆಯನ್ನು ಎದುರಿಸಿದ್ದೇವೆ. ಹೊಸ ಸರಕಾರ ಕಾಂಗ್ರೆಸ್ ನಾಯಕತ್ವದಲ್ಲಿ ಬಂದಿದೆ. ಗ್ಯಾರಂಟಿಗಳ ಅನುಷ್ಠಾನಕ್ಕೆ ತರುವ ಭರದಲ್ಲಿ ಉಳಿದ ಕಾರ್ಯಗಳ ಕಡಗಣನೆ ಮಾಡಲಾಗಿದೆ. ಗ್ಯಾರಂಟಿಗಳ ಜಾರಿಗೆ ಹೆಚ್ಚು ಸಮಯ ಕೊಟ್ಟು ಆರ್ಥಿಕ ಹೊರೆ ಅವರೇ ತಂದು ಕೊಂಡಿದ್ದಾರೆ. ಮುಂಗಾರು ಪ್ರಾರಂಭ ಆಗಿದೆ ಅಂತ ರೈತರು ಬಿತ್ತನೆ ಮಾಡಿದ್ದರು. ನಂತರ ಮಳೆ ಕೈ ಕೊಟ್ಟಿದೆ. ಆಗಸ್ಟ್ ತಿಂಗಳಿನಿಂದಲೇ ಈ ವರ್ಷ ಬರಗಾಲದ ಛಾಯೆ ಮೂಡಿದೆ ಎಂದು ಅವರು ಇಡೀ ಬರದ ಚಿತ್ರಣವನ್ನು ಬಿಡಿಸಿಟ್ಟರು.
ಹಣ ಸಾಲದು ಎಂದ ಮಾಜಿ ಸಿಎಂ:
ಜಿಲ್ಲಾಧಿಕಾರಿಗಳ ಪಿಡಿಓ ಅಕೌಂಟ್ ನಲ್ಲಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು 800 ಕೋಟಿ ರೂಪಾಯಿ ಇಡಲಾಗಿದೆ. ಕೇಂದ್ರ ಸರಕಾರಕ್ಕೆ ಬರಪೀಡಿತ 216 ತಾಲೂಕುಗಳ ನಷ್ಟದ ಬಗ್ಗೆ ಕೇಂದ್ರಕ್ಕೆ ಮಾಹಿತಿ ಕೊಟ್ಟಿದೆ ಸರಕಾರ. ಸರಕಾರ ಕೊಟ್ಟಿರುವ ಅಂದಾಜಿನ ಪ್ರಕಾರ ರೈತರು ಅನುಭವಿಸಿರುವ ಬೆಳೆ ನಷ್ಟದ 10% ಬೆಳೆ ನಷ್ಟಕ್ಕೂ ಪರಿಹಾರ ಕೊಡಲು ಆಗುವುದಿಲ್ಲ. ಹೀಗಾಗಿ ರೈತರು ಸರಕಾರದಿಂದ ನೆರವು ಬಯಸುತ್ತಿದ್ದಾರೆ ಎಂದರು ಮಾಜಿ ಮುಖ್ಯಮಂತ್ರಿಗಳು.

ಇವರು ಹಣಕಾಸು ತಜ್ಞರು. ಸಾಕಷ್ಟು ಅನುಭವ ಇರುವವರು. ಹದಿನಾಲ್ಕು ಬಜೆಟ್ ಮಂಡಿಸಿರುವವರು ಎಂದು ಮಾತಿನಲ್ಲಿಯೇ ಸಿಎಂ ಸಿದ್ದರಾಮಯ್ಯ ಅವರನ್ನು ಕುಟುಕಿದ ಅವರು; ಇನ್ನೊಬ್ಬರು ಇದ್ದಾರೆ. ‘ಬೈ ಬರ್ತ್ ಫಾರ್ಮರ್, ಬೈ ಪ್ರೊಫೆಷನ್ ಬಿಸ್ನೆಸ್ ಮ್ಯಾನ್, ಬೈ ಪ್ಯಾಷನ್ ಪೊಲಿಟಿಷಿಯನ್ ‘ ಎಂದು ಅನೇಕ ಬಾರಿ ಹೇಳಿದ್ದಾರೆ. ಇಷ್ಟೊಂದು ಅನುಭವ ಇರುವವರು ಇದ್ದರೂ ಹೀಗ್ಯಾಕೆ ಆಗುತ್ತಿದೆ ಎಂದು ಅವರು ಸಿಎಂ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ ಅವರ ವಿರುದ್ಧ ಟೀಕಾಪ್ರಹಾರ ನಡೆಸಿದರು.
ಕೊಬರಿ ಖರೀದಿ ಕೇಂದ್ರ ಪುನಾರಂಭ ಮಾಡಲು ಆಗ್ರಹ:
ಕೊಬರಿ ಬೆಳೆಗಾರರ ಸಂಕಷ್ಟವನ್ನು ಸದನದಲ್ಲಿ ಎಳೆಎಳೆಯಾಗಿ ಬಿಡಿಸಿಟ್ಟ ಕುಮಾರಸ್ವಾಮಿ ಅವರು; ರೈತರನ್ನು ಉಳಿಸಲು ಕೂಡಲೇ ಕೊಬರಿ ಖರೀದಿ ಕೇಂದ್ರಗಳನ್ನು ಮರು ಆರಂಭ ಮಾಡಬೇಕು ಎಂದು ಆಗ್ರಹಪಡಿಸಿದರು.

Also read: ರಾಜ್ಯಮಟ್ಟದ ರಸ ಪ್ರಶ್ನೆ ಸ್ಪರ್ಧೆ: ಜೈನ್ ಪಬ್ಲಿಕ್ ಶಾಲೆ ವಿದ್ಯಾರ್ಥಿಗೆ ತೃತೀಯ ಬಹುಮಾನ

ಕೊಬರಿ ಬೆಲೆ ಹಿಂದೆ ಕ್ವಿಂಟಾಲ್ ಗೆ 18,000 ರೂಪಾಯಿ ಬೆಲೆ ಇತ್ತು, ಈಗ 7,500 ರೂಪಾಯಿಗೆ ಬಂದಿದೆ, ತೆಂಗು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ, ನಾಫೆಡ್ ಗೆ ಎಷ್ಟ್ ಪತ್ರ ಬರೆದರೂ ಉಪಯೋಗ ಇಲ್ಲದಾಗಿದೆ. ಕೇಂದ್ರದ ಅಧಿಕಾರಿಗಳ ಜತೆ ಕೂಡ ಮಾತನಾಡಿದ್ದೇನೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಹಿಂದೆ ಖರೀದಿ ಕೇಂದ್ರಗಳ ಮೂಲಕ ನಾಫೆಡ್ ಪ್ರತಿ ಕ್ವಿಂಟಲ್ ಗೆ 11,750 ರೂಪಾಯಿ ಕೊಟ್ಟು ಕೊಬರಿ ಖರೀದಿ ಮಾಡಿತ್ತು. ಅಂದಾಜು ಒಟ್ಟು 50,000 ಮೆಟ್ರಿಕ್ ಟನ್ ಕೊಬರಿ ಖರೀದಿಗೆ 580 ಕೋಟಿ ರೂಪಾಯಿ ವೆಚ್ಚ ಮಾಡಿದೆ. ಕೆಲ ದಿನಗಳ ನಂತರ ಖರೀದಿ ಕೇಂದ್ರಗಳು ಸ್ಥಗಿತವಾದವು. ಕೊಬರಿ ದರವೂ 7500 ರೂಪಾಯಿಗೆ ಕುಸಿಯಿತು. ನಾಫೆಡ್ ಅಂದು ಕ್ವಿಂಟಾಲ್ ಕೊಬರಿಯನ್ನು 11,750 ರೂಪಾಯಿಗೆ ಖರೀದಿ ಮಾಡಿದ್ದು, ಈಗ ಅದನ್ನು ಖಾಸಗಿ ಎಣ್ಣೆ ಕಂಪನಿಗಳಿಗೆ 7,500 ರೂಪಾಯಿಗೆ ಮಾರಾಟ ಮಾಡುತ್ತಿದೆ. ಅವರಿಗೆ 200 ಕೋಟಿ ನಷ್ಟ ಆಗುತ್ತಿದೆ, ಅದೇನು ದೊಡ್ಡ ವಿಷಯ ಅಲ್ಲ, ಭರಿಸಬಹುದು ಎಂದು ಕುಮಾರಸ್ವಾಮಿ ಅವರು ಪ್ರತಿಪಾದಿಸಿದರು.
ನಾನು ಕೂಡ ತೆಂಗು ಬೆಳೆಗಾರ. ಸುಮಾರು ಒಂದೂವರೆ ಲಕ್ಷ ದಷ್ಟು ಕೊಬರಿಯನ್ನು ಒಂದೂವರೆ ವರ್ಷದಿಂದ ಮಾರಾಟ ಮಾಡಲಾಗದೆ ಹಾಗೆಯೇ ಇಟ್ಟಿದ್ದೇನೆ. ಬೆಳೆಗಾರನಿಗೆ ಎಷ್ಟು ಕಷ್ಟ ಇದೆ ಎಂದು ನನಗೆ ಸ್ವತಃ ಗೊತ್ತು. ಆದರೆ, ಸರಕಾರಗಳ ಚೌಕಾಸಿ ನೋಡಿದರೆ ಬಹಳ ನೋವಾಗುತ್ತದೆ. ಈ ಖರೀದಿ ಯಾವ ಲೆಕ್ಕ? ಇಷ್ಟು ಲಕ್ಷದ ಕೋಟಿ ಬಜೆಟ್ ಮಂಡನೆ ಮಾಡುತ್ತವೆ ಸರಕಾರಗಳು. ರೈತನಿಗೆ ಸಣ್ಣ ಪ್ರಮಾಣದ ಬೆಂಬಲ ಬೆಲೆ ನೀಡುವುದಕ್ಕೆ ಇಷ್ಟು ಮೀನಾಮೇಷ ಏಕೆ? ಎಂದು ಅವರು ಅತೃಪ್ತಿ ವ್ಯಕ್ತಪಡಿಸಿದರು.

ಪ್ರಚಾರದ ಮೇಲೆ ಅಕ್ಕರೆ, ರೈತರ ಬಗ್ಗೆ ಅಸಡ್ಡೆ:
ರಾಜ್ಯ ಕಾಂಗ್ರೆಸ್ ಸರಕಾರ ಪ್ರಚಾರಕ್ಕೆ ಕೊಡುವಷ್ಟು ಮಹತ್ವ ರೈತರ ಬಗ್ಗೆ ನೀಡುತ್ತಿಲ್ಲ. ಸಚಿವರೊಬ್ಬರು ಸಿಎಂಗೆ ಪತ್ರ ಬರೆದಿದ್ದಾರೆ, ಪ್ರಚಾರಕ್ಕೆ ಕೊಟ್ಟ ಜಾಹೀರಾತಿನ ಮೊತ್ತ 140 ಕೋಟಿ ರೂಪಾಯಿ ಕೂಡಲೇ ಬಿಡುಗಡೆ ಮಾಡಿ ಎಂದು ಅವರು ಪತ್ರ ಬರೆದಿದ್ದಾರೆ. ಅವರು ರೈತರ ಬಗ್ಗೆ ಇಂಥ ಪತ್ರಗಳನ್ನು ಬರೆದಿದ್ದಾರೆಯೇ? ಎಂದು ಪ್ರಶ್ನಿಸಿದರು ಮಾಜಿ ಮುಖ್ಯಮಂತ್ರಿಗಳು.

ಸಚಿವರಿಗೆ ನಾನು ದೋಷ ಕೊಡುವ ಉದ್ದೇಶದಿಂದ ನಾನು ಈ ಮಾತು ಹೇಳುತ್ತಿಲ್ಲ. ಆದರೆ, ಅವರಿಗೆ ರೈತರಿಗಿಂತ ಪ್ರಚಾರದ ಮೇಲೆ ಮಹತ್ವ ಜಾಸ್ತಿ ಇದ್ದಂತೆ ಕಾಣುತ್ತಿದೆ, ಯಾಕೆ ಹೀಗೆ? ಎಂದು ಅಸಮಾಧಾನ ವ್ಯಕ್ತಪಡಿಸಿದರು.
Kalahamsa Infotech private limitedಗ್ಯಾರಂಟಿ ಕಾರ್ಯಕ್ರಮಗಳಿಗೆ ಕೊಟ್ಟ ಮಹತ್ವ ರೈತರ ನಷ್ಟಗಳಿಗೆ ಯಾಕೆ ಕೊಡಲು ಆಗ್ತಾ ಇಲ್ಲ. ಕೇಂದ್ರದ ವರದಿ ಬಳಿಕ ಬೆಳೆ ಹಾನಿ ಪರಿಹಾರ ಅಂತ ಸಚಿವರು ಹೇಳಿಕೆ ಕೊಟ್ಟಿದ್ದಾರೆ. ಕಲಬುರಗಿ, ರಾಯಚೂರು ಎಲ್ಲಾ ಕಡೆ ಕೈಗೆ ಬರಬೇಕಿದ್ದ ಬೆಳೆ ಹಾಳಾಗಿದೆ. ಪದೇ ಪದೇ ಕೇಂದ್ರದ ಕಡೆ ಬೆರಳು ತೋರಿಸಲಾಗ್ತಿದೆ. ಕೇಂದ್ರದಿಂದ ಮೊದಲನೆ ಕಂತಿನ ಹಣ ಬಂದಿರಬಹುದು. ಕೇಂದ್ರದ ತಂಡ ಬರ ಅದ್ಯಯನ ಮಾಡುತ್ತಿದ್ದಾಗ ಗದಗ ಜಿಲ್ಲೆಯ ಅಧಿಕಾರಿಗಳು ನಿದ್ದೆ ಮಾಡ್ತಾ ಇದ್ದರು ಎನ್ನುವ ವಿಚಾರ ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ಆಡಳಿತ ಇಷ್ಟೊಂದು ಜಿಡ್ಡುಗಟ್ಟಿದೆಯೇ? ಎಂದು ಮಾಜಿ ಮುಖ್ಯಮಂತ್ರಿ ಅವರು ಆಕ್ರೋಶ ವ್ಯಕ್ತಪಡಿಸಿದರು.

(ವರದಿ: ಡಿ.ಎಲ್. ಹರೀಶ್)  

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaSuvarna Vidhanasoudha/Belagaviಸುವರ್ಣ ವಿಧಾನಸೌಧ/ ಬೆಳಗಾವಿ
Previous Post

ರಾಜ್ಯಮಟ್ಟದ ರಸ ಪ್ರಶ್ನೆ ಸ್ಪರ್ಧೆ: ಜೈನ್ ಪಬ್ಲಿಕ್ ಶಾಲೆ ವಿದ್ಯಾರ್ಥಿಗೆ ತೃತೀಯ ಬಹುಮಾನ

Next Post

ಗುಣಮಟ್ಟದ ವಸ್ತುಗಳನ್ನು ತಯಾರಿಸುವ ಶಕ್ತಿ ಉತ್ಪಾದಕರಿಗೆ ಇರಬೇಕು: ಮುಖ್ಯಮಂತ್ರಿ ಸಿದ್ಧರಾಮಯ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗುಣಮಟ್ಟದ ವಸ್ತುಗಳನ್ನು ತಯಾರಿಸುವ ಶಕ್ತಿ ಉತ್ಪಾದಕರಿಗೆ ಇರಬೇಕು: ಮುಖ್ಯಮಂತ್ರಿ ಸಿದ್ಧರಾಮಯ್ಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!