ಕಲ್ಪ ಮೀಡಿಯಾ ಹೌಸ್ | ಮೈಸೂರು |
ಪಿಜಿಎಲ್ ಸಂಸ್ಮರಣಾ ವೇದಿಕೆ ಡಿ.13 ಮತ್ತು 14ರಂದು ವಿಶೇಷ ಶಾಸ್ತ್ರೀಯ ಸಂಗೀತ #ClassicalMusic ಕಾರ್ಯಕ್ರಮ ಆಯೋಜಿಸಿದೆ.
ಖ್ಯಾತ ಮೃದಂಗ #Mridanga ವಿದ್ವಾಂಸರಾಗಿದ್ದ ದಿ.ಪಿ.ಜಿ. ಲಕ್ಷ್ಮೀನಾರಾಯಣ ಅವರ 17ನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ನಗರದ ನಾದಬ್ರಹ್ಮ ಸಂಗೀತ ಸಭಾದಲ್ಲಿ ಎರಡೂ ದಿನ ಸಂಜೆ 6ಕ್ಕೆ ಹಿರಿಯ ವಿದ್ವಾಂಸರಿಂದ ಗಾಯನ, ವಾದನ ಕಛೇರಿಗಳನ್ನು ಹಮ್ಮಿಕೊಳ್ಳಲಾಗಿದೆ.

14ರ ಸಂಜೆ 6ಕ್ಕೆ ಹಿರಿಯ ಮೃದಂಗ ವಿದ್ವಾಂಸ ಬೆಂಗಳೂರಿನ ಸಿ. ಚೆಲುವರಾಜು ಅವರಿಗೆ ಸಂಸ್ಥೆ ವತಿಯಿಂದ ಗೌರವ ಸಮರ್ಪಣೆ ನಡೆಯಲಿದೆ.

ನಂತರ ವಿದ್ವಾನ್ ಸಂಪಗೋಡು ವಿಘ್ನರಾಜ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಕಛೇರಿ ನಡೆಯಲಿದೆ. ಪಕ್ಕವಾದ್ಯದಲ್ಲಿ ವಿದುಷಿ ಸಿಂಧೂ ಸುಚೇತನ (ವಯೋಲಿನ್), ವಿದ್ವಾನ್ ಚೆಲುವರಾಜು (ಮೃದಂಗ) ಮತ್ತು ವಿದ್ವಾನ್ ಶರತ್ ಕೌಶಿಕ್ (ಘಟ) ಸಹಕಾರವಿದೆ ಎಂದು ಪಿಜಿಎಲ್ ಸಂಸ್ಮರಣಾ ವೇದಿಕೆ ಮುಖ್ಯಸ್ಥ ಪ್ರೊ. ರಾಮಾನುಜನ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post