ಕಲ್ಪ ಮೀಡಿಯಾ ಹೌಸ್ | ಚಂದ್ರಗುತ್ತಿ |
ಭಾಷೆ ಹಬ್ಬ ಕಾರ್ಯಕ್ರಮವು ಮಕ್ಕಳಲ್ಲಿ ಭಾಷೆಯ ಒಂದು ಪ್ರಭುತ್ವವನ್ನು ಹೆಚ್ಚಿಸುವುದಕ್ಕೆ ಸಹಕಾರಿಯಾಗಿದೆ ಎಂದು ಕ್ಲಸ್ಟರ್ನ ಸಿ.ಆರ್.ಪಿ. ಎಂ.ಎಲ್ ರಾಘವೇಂದ್ರ ಹೇಳಿದರು.
ಚಂದ್ರಗುತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರ್ಕಾರದ ಆದೇಶದಂತೆ ಹಮ್ಮಿಕೊಂಡಿದ್ದು ಭಾಷೆ ಹಬ್ಬ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

Also read: ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ, 17 ದ್ವಿಚಕ್ರ ವಾಹನ ವಶಕ್ಕೆ: ಎಸ್ಪಿ ಮಿಥುನ್ ಕುಮಾರ್
ಮುಂದಿನ ದಿನಗಳಲ್ಲಿ ಚಂದ್ರಗುತ್ತಿ ಕ್ಲಸ್ಟರ್ ಹಂತದಲ್ಲಿ ಬರುವ ಎಲ್ಲಾ ಶಾಲೆಗಳ ಮಕ್ಕಳಿಗೆ ಪೂರಕವಾಗುವಂತೆ ಭಾಷೆ ಹಬ್ಬ ಕಾರ್ಯಕ್ರಮವನ್ನು ಆಚರಿಸಲಾಗುವುದು ಎಂದು ತಿಳಿಸಿದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪನವರು Minister Madhu Bangarappa ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮವಾದ ಚಟುವಟಿಕೆಗಳನ್ನು ಕಾರ್ಯರೂಪಕ್ಕೆ ತರುವುದರ ಮೂಲಕ ಮಕ್ಕಳ ಭೌದ್ಧಿಕ ಮತ್ತು ಶೈಕ್ಷಣಿಕ ಪ್ರಗತಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುವುದರ ಜೊತೆಗೆ ಯಶಸ್ವಿಯ ದಿಕ್ಸೂಚಿಯನ್ನು ತೋರಿಸಿದ್ದಾರೆ. ಎಂದು ಶಾಲಾ ಅಭಿವೃದ್ಧಿ ಸಮಿತಿಯವರು ಪ್ರಶಂಸೆ ವ್ಯಕ್ತಪಡಿಸಿದ್ದರು.
ಶಾಲೆಯ ಮುಖ್ಯ ಶಿಕ್ಷಕಿ ಶಾಂತಲಾ, ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಭವಾನಿ ಚಂದ್ರಕಾಂತ್, ಸದಸ್ಯರಾದ ಗಣೇಶ್ ಮರಡಿ, ಪ್ರಶಾಂತ್ ನಾಯ್ಕ್, ಪ್ರಕಾಶ್ ಭಟ್, ಗಣಪತಿ ಎಂ.ಜಿ, ಉ?, ಯಾಸ್ಮಿನ್, ಸಲ್ಮಾ, ಶಿಕ್ಷಕರಾದ ಮಮತಾ, ನೂರ್ ಫಾತಿಮಾ, ಕಾವ್ಯ, ಭವ್ಯ, ಸೇರಿದಂತೆ ಪೋ?ಕರು ಉಪಸ್ಥಿತರಿದ್ದರು.
ವರದಿ: ಮಧುರಾಮ್, ಸೊರಬ









Discussion about this post