ಚಿಕ್ಕ ವಯಸ್ಸಿನಲ್ಲೇ ಮಕ್ಕಳಿಗೆ ದಂತ ಅರೋಗ್ಯದ ಬಗ್ಗೆ ಅರಿವು ಹಾಗೂ ಮಾಹಿತಿ ನೀಡುವ ಅವಶ್ಯಕತೆಯಿದೆ ಎಂದು ರೋಟರಿ ಸಂಸ್ಥಾಪಕ ಅಧ್ಯಕ್ಷರಾದ ದಂತ ವೈದ್ಯ ಡಾ.ಜ್ಞಾನೇಶ್ ಹೇಳಿದರು.

Also read: ವಿದ್ಯೆ- ಗುರು ಪರಂಪರೆಗೆ ಗೌರವಿಸುವವರಿಗೆ ಮಾತ್ರ ಕಲೆ ಸಿದ್ಧಿ: ವಿದ್ವಾಂಸ ಚೆಲುವರಾಜು ಅಭಿಪ್ರಾಯ
ರೋಟರಿ ಸಂಸ್ಥೆಯ ಅಧ್ಯಕ್ಷ ಡಾ . ನಾಗರಾಜ್ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ರೋಟರಿ ಸಂಸ್ಥೆಯು ಹಲವಾರು ಕಾರ್ಯಕ್ರಮ ಹಮ್ಮಿಕೊಂಡಿದ್ದು ಹಂತ, ಹಂತವಾಗಿ ಬೇರೆ ಬೇರೆ ರೀತಿಯ ಕಾರ್ಯಕ್ರಮ ನಡೆಸಲಿದೆ ಎಂದರು.

ಈ ಸಂದರ್ಭದಲ್ಲಿ ರೋಟರಿ ಸಂಸ್ಥೆಯ ವತಿಯಿಂದ 71 ಮಕ್ಕಳಿಗೆ ಉಚಿತ ಟೂಥ್ ಪೇಸ್ಟ್ ಹಾಗೂ ಬ್ರಷ್ ವಿತರಿಸಲಾಯಿತು.
ವರದಿ: ಮಧುರಾಮ್, ಸೊರಬ









Discussion about this post