No Result
View All Result
Landmark Heart Surgery in Davanagere | SS Narayana hospital completes first modified Bentall procedure
English Articles

Landmark Heart Surgery in Davanagere | SS Narayana hospital completes first modified Bentall procedure

by ಕಲ್ಪ ನ್ಯೂಸ್
May 2, 2026
0

Kalpa Media House  |  Davanagere  | In a milestone for healthcare in Central Karnataka, the SS Narayana Superspeciality Centre here...

Read moreDetails
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
  • Advertise With Us
  • Grievances
  • About Us
  • Contact Us
Sunday, May 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಮೂರು ಕ್ರಿಮಿನಲ್ ಜಸ್ಟೀಸ್ ಬಿಲ್’ಗಳಿಂದ ಭಾರತದಲ್ಲಿ ಹೊಸ `ನ್ಯಾಯ’ಯುಗ ಆರಂಭ: ಅಮಿತ್ ಶಾ

ಗುಲಾಮಗಿರಿ ಚಿಹ್ನೆ ಕಿತ್ತು ಹಾಕಲು ಮತ್ತು ಶಿಕ್ಷೆಯ ಬದಲು ಜನರಿಗೆ ನ್ಯಾಯ ಒದಗಿಸಲು ಸಂಪೂರ್ಣ ಸಿದ್ಧತೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 21, 2023
in Special Articles
0
ಮೂರು ಕ್ರಿಮಿನಲ್ ಜಸ್ಟೀಸ್ ಬಿಲ್’ಗಳಿಂದ ಭಾರತದಲ್ಲಿ ಹೊಸ `ನ್ಯಾಯ’ಯುಗ ಆರಂಭ: ಅಮಿತ್ ಶಾ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಕೇಂದ್ರ ಸರ್ಕಾರ ಮಂಡಿಸಿರುವ ಮೂರು ಕ್ರಿಮಿನಲ್ ಜಸ್ಟೀಸ್ ಬಿಲ್’ಗಳಿಂದ #CriminalJusticeBills ಭಾರತದಲ್ಲಿ ಹೊಸ ನ್ಯಾಯಯುಗ ಆರಂಭವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ #AmitShah ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಗುರುವಾರ ಲೋಕಸಭೆಯಲ್ಲಿ ಮೂರು ಹೊಸ ಕ್ರಿಮಿನಲ್ ಮಸೂದೆಗಳನ್ನು #CriminalBill ಮಂಡಿಸಿದರು.

ಎಲ್ಲಾ ಮೂರು ಕ್ರಿಮಿನಲ್ ಮಸೂದೆಗಳನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಈಗ ರಾಜ್ಯಸಭೆಯಲ್ಲಿ ಮಂಡನೆಯಾಗಲಿದೆ. ಇಲ್ಲಿ ಅಂಗೀಕಾರವಾದ ನಂತರ ರಾಷ್ಟ್ರಪತಿಗಳ ಅನುಮೋದನೆಗೆ ಕಳುಹಿಸಲಾಗುವುದು.
ನ್ಯಾಯ, ಪಾರದರ್ಶಕತೆ ಮತ್ತು ನ್ಯಾಯಸಮ್ಮತತೆಯ ಆಧಾರದ ಮೇಲೆ ನವ ಭಾರತದ ನವೀನ ಕಾನೂನುಗಳಲ್ಲ ನಮ್ಮನ್ನು ಗುಲಾಮಗಿರಿಯ ಮನಸ್ಥಿತಿ ಮತ್ತು ಬ್ರಿಟಿಷ್ ಆಳ್ವಿಕೆಯ ಕುರುಹುಗಳಿಂದ ಮುಕ್ತಿ ಕೊಡಿಸಲಿದೆ ಎಂಬುದು ಖಚಿತ. ನವ ಭಾರತದ ಹೊಸ ಕಾನೂನು ಶಿಕ್ಷೆಯ ಬದಲು ನ್ಯಾಯವನ್ನು ಒದಗಿಸಲಿದೆ ಎಂಬುದು ಶಾರವರ ಪ್ರತಿಪಾದನೆ.

ಅಮೃತ ಕಾಲದ ಈ ಬದಲಾವಣೆಗಳೊಂದಿಗೆ, ನವ ಭಾರತದ ಹೊಸ ಕಾನೂನು ಅಂದರೆ ಕ್ರಿಮಿನಲ್ ಜಸ್ಟಿಸ್ ಸಿಸ್ಟಮ್ ಹೊಸ ಯುಗವನ್ನು ಪ್ರವೇಶಿಸಲಿದೆ, ಅಲ್ಲಿ ಕಾನೂನಿನ ಉದ್ದೇಶವು ಶಿಕ್ಷೆಯನ್ನು ನೀಡುವುದಲ್ಲ, `ನ್ಯಾಯ’ವನ್ನು ನೀಡುವುದು ಆಗಿರುತ್ತದೆ. ನರೇಂದ್ರ ಮೋದಿ #NarendraModi ಸರ್ಕಾರವು ನುಡಿದಂತೆ ನಡೆದುಕೊಳ್ಳುತ್ತದೆ ಎಂಬುದಕ್ಕೆ ಇದು ಸಾಕ್ಷಿ.

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಈ ಅಮೃತ ಗಳಿಗೆಯಲ್ಲಿ ಗುಲಾಮಗಿರಿಯ ಚಿಹ್ನೆಗಳನ್ನು ಕಿತ್ತುಹಾಕಲು ಮತ್ತು ಶಿಕ್ಷೆಯ ಬದಲು ಜನರಿಗೆ ನ್ಯಾಯ ಒದಗಿಸಲು ಸಂಪೂರ್ಣ ಸಿದ್ಧತೆ ಮಾಡಿಕೊಂಡಿದ್ದಾರೆ.
Kalahamsa Infotech private limitedಆ ಸಮಯದಲ್ಲಿ ಬ್ರಿಟಿಷರು ವಿಧಿಸಿದ್ದ ಭಾರತೀಯ ದಂಡ ಸಂಹಿತೆ #IPC ಕ್ರಿಮಿನಲ್ ಪ್ರೊಸೀಜರ್ ಕೋಡ್ ಮತ್ತು ಭಾರತೀಯ ಸಾಕ್ಷ್ಯ ಸಂಹಿತೆಗಳು ನ್ಯಾಯ ನಿರ್ಣಯಕ್ಕಲ್ಲದೇ, ಶಿಕ್ಷೆಗಾಗಿ ಮಾಡಲ್ಪಟ್ಟಿದ್ದವು ಎಂಬುದು ಶಾರವರ ವಾದ.

ಅವರ ಈ ದಿಟ್ಟ ಹೆಜ್ಜೆಯೊಂದಿಗೆ, ಈಗ ಭಾರತೀಯ ದಂಡ ಸಂಹಿತೆ, 1860 ಅನ್ನು ಭಾರತೀಯ ನ್ಯಾಯಾಂಗ ಸಂಹಿತೆ #IndianJudiciaryCode 2023 ಎಂದು ಮರುನಾಮಕರಣ ಮಾಡಲಾಗುವುದು, ಕ್ರಿಮಿನಲ್ ಪ್ರೊಸೀಜರ್ ಕೋಡ್ #CriminalProcedureCode 1898 ಅನ್ನು ಭಾರತೀಯ ನಾಗರಿಕ ರಕ್ಷಣಾ ಸಂಹಿತೆ, 2023 ಮತ್ತು ಇಂಡಿಯನ್ ಎವಿಡೆನ್ಸ್ ಆಕ್ಟ್ #IndianEvidenceAct 1872 ಅನ್ನು ಭಾರತೀಯ ಸಾಕ್ಷ್ಯ ಕಾಯ್ದೆ, 2023 ಎಂದು ಮರುನಾಮಕರಣ ಮಾಡಲಾಗಿದೆ.

ಕಳೆದ 9 ವರ್ಷಗಳಲ್ಲಿ, ಮೋದಿಯವರ ನಾಯಕತ್ವ ಮತ್ತು ಅಮಿತ್ ಶಾರ ಸಮರ್ಥ ಮಾರ್ಗದರ್ಶನದಲ್ಲಿ, ಭಾರತೀಯ ಜನತಾ ಪಕ್ಷವು ತನ್ನ ಪ್ರಣಾಳಿಕೆ ಮತ್ತು ಭರವಸೆಗಳನ್ನು ಉತ್ತಮವಾಗಿ ಈಡೇರಿಸುತ್ತಾ ಬರುತ್ತಿದೆ. ಸರ್ಕಾರ ರಚನೆಯಾದ ಕೂಡಲೇ 370 ಮತ್ತು 35ಎ ವಿಧಿಗಳನ್ನು ತೆಗೆದು ಹಾಕಲಾಗುವುದು ಎಂದು ಮೋದಿ ಸರ್ಕಾರ ಭರವಸೆ ನೀಡಿತ್ತು.

ರಾಜಕೀಯದ ಚಾಣಕ್ಯ, ರಾಷ್ಟ್ರೀಯವಾದಿ ಮೌಲ್ಯಗಳ ಪ್ರಬಲ ಬೆಂಬಲಿಗ ಶಾ ಅವರ ಕಟ್ಟುನಿಟ್ಟಿನ ನೀತಿಗಳಿಂದಾಗಿ 370 ಮತ್ತು 35ಎ ವಿಧಿಗಳನ್ನು ತೆಗೆದುಹಾಕಲಾಗಿದೆ. ಪರಿಣಾಮವಾಗಿ, J&K ಭಾರತದ ಅವಿಭಾಜ್ಯ ಅಂಗವಾಗಿದೆ.
ಒಂದೆಡೆ, ಮುಸ್ಲಿಂ ಮಹಿಳೆಯರಿಗೆ ಸಂಬಂಧಿಸಿದಂತೆ ತ್ರಿವಳಿ ತಲಾಖ್ ಅನ್ನು ತೆಗೆದುಹಾಕುವ ಭರವಸೆಯನ್ನು ಈಡೇರಿಸಿದ ಮೋದಿ-ಶಾ ಜೋಡಿ, ಇನ್ನೊಂದೆಡೆ ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಮೂಲಕ ದೇಶದ ಮಾತೃಶಕ್ತಿಯನ್ನು ಗೌರವಿಸುವ ಕೆಲಸ ಮಾಡಿದ್ದಾರೆ.

ಭಯೋತ್ಪಾದನೆ ಮತ್ತು ಉಗ್ರವಾದದ ವಿರುದ್ಧ ಶೂನ್ಯ ಸಹಿಷ್ಣುತೆಯ ನೀತಿಯನ್ನು ಪಾಲಿಸುವ ಭರವಸೆಯನ್ನು ಬಿಜೆಪಿ ಈಡೇರಿಸಿದೆ, ಇದು ಭಯೋತ್ಪಾದಕ ಘಟನೆಗಳಲ್ಲಿ ಶೇ.65ರಷ್ಟು ಕಡಿತ ಮತ್ತು ಮೂರು ಭಯೋತ್ಪಾದಕ ಹಾಟ್ ಸ್ಪಾಟ್’ಗಳಾದ ಜಮ್ಮು ಕಾಶ್ಮೀರ #JammuKashmir ಎಡಪಂಥೀಯ ಉಗ್ರಗಾಮಿ ಪ್ರದೇಶಗಳು, ಮತ್ತು ಈಶಾನ್ಯ ರಾಜ್ಯಗಳಲ್ಲಿನ ಸಾವುಗಳಲ್ಲಿ ಶೇ.73ರಷ್ಟು ಕಡಿತಕ್ಕೆ ಕಾರಣವಾಯಿತು. ಶೇ.70ರಕ್ಕಿಂತ ಹೆಚ್ಚು ಈಶಾನ್ಯ ಪ್ರದೇಶಗಳನ್ನು #AFSPA ದಿಂದ ಸಹ ತೆಗೆದುಹಾಕಲಾಗಿದೆ. ಅಯೋಧ್ಯೆಯಲ್ಲಿ ರಾಮಮಂದಿರ #RamMandir ನಿರ್ಮಿಸುವುದಾಗಿ ಮೋದಿ ಸರ್ಕಾರ ಭರವಸೆ ನೀಡಿತ್ತು ಮತ್ತು ಈಗ ಶ್ರೀರಾಮನು ಜನವರಿ 22 ರಿಂದ ಅಲ್ಲಿ ನೆಲೆಸಲಿದ್ದಾನೆ.

ನಾವು ನ್ಯಾಯ ಪಡೆಯುವ ವೇಗವನ್ನು ಹೆಚ್ಚಿಸುಟ್ಟಿದ್ದೇವೆ. ಇನ್ನು ಮುಂದೆ ಕಾನೂನುಗಳು ಶಿಕ್ಷೆಯನ್ನು ಆಧರಿಸಿರುವುದಿಲ್ಲ. ಆದರೆ ನ್ಯಾಯವನ್ನು ಆಧರಿಸಲಿವೆ ಎಂದು ಕೇಂದ್ರ ಗೃಹ ಸಚಿವ ಮತ್ತು ಭಾರತೀಯ ಜನತಾ ಪಕ್ಷದ ವರಿಷ್ಠ ನಾಯಕ ಶಾ ಹೇಳಿದರು.

ನವ ಭಾರತದ ನಿರ್ಮಾಣಕ್ಕಾಗಿ ಹೊಸ ಕಾನೂನನ್ನು ತರಲು ಮತ್ತು ನೀಡಿದ ಭರವಸೆಗಳನ್ನು ಈಡೇರಿಸಲು ಶಾ ಅವರು ಮಾಡಿದ ಪ್ರಯತ್ನಗಳಿಗೆ ದೇಶದ ಜನರು ಸಾಕ್ಷಿಯಾಗಲಿದ್ದಾರೆ. ಕಳೆದ 9 ವರ್ಷಗಳ ಸಾಧನೆಯನ್ನು ನೋಡಿದರೆ, ಈ ಭರವಸೆಯನ್ನು ಮೋದಿ-ಶಾ ಜೋಡಿ ಈಡೇರಿಸಲಿದೆ ಎನ್ನಬಹುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: AFSPAAmit shahBritish ruleCriminal BillCriminal Justice BillsCriminal Procedure CodeIndian Evidence ActIndian Judiciary CodeIndian Penal Codenarendra modiಅಮಿತ್ ಶಾಅಯೋಧ್ಯೆಇಂಡಿಯನ್ ಎವಿಡೆನ್ಸ್ ಆಕ್ಟ್ಕೇಂದ್ರ ಸರ್ಕಾರಕ್ರಿಮಿನಲ್ ಜಸ್ಟೀಸ್ ಬಿಲ್ಜಮ್ಮು ಕಾಶ್ಮೀರನರೇಂದ್ರ ಮೋದಿಬ್ರಿಟಿಷ್ ಆಳ್ವಿಕೆಭಯೋತ್ಪಾದನೆಭಾರತೀಯ ದಂಡ ಸಂಹಿತೆರಾಮಮಂದಿರ
Share213Tweet123Send
Previous Post

ಲೋಕಸಭೆ ಚುನಾವಣಾ ಕಣಕ್ಕೆ ಮಾಜಿ ಸಿಎಂ ಎಚ್’ಡಿಕೆ: ಸ್ವತಃ ಅವರೇ ಹೇಳಿದ್ದೇನು?

Next Post

Clear instructions given not to repeat the mistakes of the previous government: CM Siddaramaiah

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೋವಿಡ್ ಏರಿಕೆ | ಸಿಎಂ ಮಹತ್ವದ ಸಭೆ | ರಾಜ್ಯದಲ್ಲಿ ಎಷ್ಟು ಕೇಸ್ ಪತ್ತೆ?

Clear instructions given not to repeat the mistakes of the previous government: CM Siddaramaiah

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

May 2, 2026
ಬೆಳೆಹಾನಿ ರೈತರಿಗೆ ಸೂಕ್ತ ಪರಿಹಾರ ಒದಗಿಸಿ: ಕೃಷಿಕ ಸಮಾಜ ಆಗ್ರಹ

ಬೆಳೆಹಾನಿ ರೈತರಿಗೆ ಸೂಕ್ತ ಪರಿಹಾರ ಒದಗಿಸಿ: ಕೃಷಿಕ ಸಮಾಜ ಆಗ್ರಹ

May 2, 2026
ಶಿವಮೊಗ್ಗ ನಗರದ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಅನುದಾನ ನೀಡಿ

ಶಿವಮೊಗ್ಗ ನಗರದ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಅನುದಾನ ನೀಡಿ

May 2, 2026
ಬಂಗಾರಪ್ಪ ಅವರ ಕೂಲಿಂಗ್ ಗ್ಲಾಸಿನ ಹಿಂದೆ ಬಡವರಿಗೆ ಸೂರು ಕಲ್ಪಿಸುವ ಕನಸು ಇತ್ತು : ಸಚಿವ ಮಧು ಬಂಗಾರಪ್ಪ

ಬಂಗಾರಪ್ಪ ಅವರ ಕೂಲಿಂಗ್ ಗ್ಲಾಸಿನ ಹಿಂದೆ ಬಡವರಿಗೆ ಸೂರು ಕಲ್ಪಿಸುವ ಕನಸು ಇತ್ತು : ಸಚಿವ ಮಧು ಬಂಗಾರಪ್ಪ

May 2, 2026
Landmark Heart Surgery in Davanagere | SS Narayana hospital completes first modified Bentall procedure

ದಾವಣಗೆರೆ | ವೈದ್ಯಕೀಯ ಮೈಲಿಗಲ್ಲು | ಎಸ್ಎಸ್ ನಾರಾಯಣ ಆಸ್ಪತ್ರೆಯಲ್ಲಿ ಮಧ್ಯ ಕರ್ನಾಟಕದ ಮೊದಲ ‘ಬೆಂಟಾಲ್’ ಶಸ್ತ್ರಚಿಕಿತ್ಸೆ ಯಶಸ್ವಿ

May 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL