No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Sunday, February 15, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕಾನೂನು ಅನುಷ್ಠಾನವಾಗದಿದ್ದಾಗ ಪ್ರತಿಭಟನೆ ನಡೆಯುತ್ತವೆ: ಬಸವರಾಜ ಬೊಮ್ಮಾಯಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 30, 2023
in ಬೆಂಗಳೂರು ನಗರ
0
ಮಾತೃಭಾಷೆಗಳೇ ಸಾರ್ವಭೌಮ: ಇದನ್ನು ಎಲ್ಲರೂ ಗೌರವಿಸಬೇಕು – ಸಿಎಂ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ ಕನ್ನಡ ಹೋರಾಟಗಾರರನ್ನು ಜೈಲಿಗೆ ಹಾಕಿರುವುದು ದುಖವಾಗಿದ್ದು. ಕನ್ನಡ ಹೋರಾಟಗಾರರಿಗೆ ನಾವು ಬೆಂಬಲಿಸಬೇಕು. ಸರ್ಕಾರ ಸರಿಯಾಗಿ ಕಾನೂನು ಅನುಷ್ಠಾನ ಮಾಡದಿರುವುದಕ್ಕೆ ಕನ್ನಡಪರ ಸಂಘಟನೆಗಳು ಹೋರಾಟದ ಹಾದಿ ಹಿಡಿಯಬೇಕಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Basavaraja Bommai ಅಭಿಪ್ರಾಯ ಪಟ್ಟಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತು ಏರ್ಪಡಿಸಿದ್ದ ರಾಷ್ಟ್ರಕವಿ ಕುವೆಂಪು ಅವರ ನವೀಕೃತ ಸಭಾಂಗಣ ಹಾಗೂ ಕುವೆಂಪು ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಾನು ಸಿಎಂ ಆಗಿದ್ದಾಗ ಸುಮಾರು ಎರಡು ಸಾವಿರ ಕನ್ನಡ ಹೋರಾಟಗಾರರ ಪ್ರಕರಣಗಳನ್ನು ವಾಪಸ್ ಪಡೆದಿದ್ದೇವು. ನಾಮಪಲಕಗಳಲ್ಲಿ ಕಡ್ಡಾಯ ಕನ್ನಡ ಅನುಷ್ಠಾನ ಮಾಡದಿರುವುದರಿಂದ ಈ ಪರಿಸ್ಥಿತಿ ಬಂದಿದೆ. ಆಡಳಿತಗಾರರಿಗೆ ಸೂಕ್ಷ್ಮತೆ ಇರಬೇಕು ಎಂದು ಹೇಳಿದರು.
ನಾವು ಕನ್ನಡದ ಅನುಷ್ಠಾನಕ್ಕಾಗಿ ವಿಧೇಯಕ ಜಾರಿಗೊಳಿಸಿದ್ದೇವು. ಸ್ವಾತಂತ್ರ್ಯ ಬಂದು ಎಪ್ಪತೈದು ವರ್ಷಗಳಾಗಿವೆ. ಕನ್ನಡ ನಾಡಿನಲ್ಲಿ ಕನ್ನಡದ ಅನುಷ್ಟಾನಕ್ಕಾಗಿ ಕಾನೂನು ಮಾಡುವ ಅನಿವಾರ್ಯತೆ ಬಂದಿರುವುದು ಬೇಸರದ ಸಂಗತಿ. ಆದರೆ, ಈಗ ಕಾನೂನೂ ಮಾಡದಿದ್ದರೆ ನಮ್ಮ ಮಕ್ಕಳಿಗೆ ಕಷ್ಟವಾಗಲಿದೆ. ಕಾನೂನು ಅನುಷ್ಠಾನ ಮಾಡದಿದ್ದರೆ ಅದು ದುರ್ದೈವ. ಕನ್ನಡ ಅನುಷ್ಠಾನ ಆಗದಿದ್ದರಿಂದ ಕನ್ನಡ ಹೋರಾಟಗಾರರು ಪ್ರತಿಭಟನೆ ಮಾಡುತ್ತಿದ್ದಾರೆ. ಯಾವ ನಾಡಿನಲ್ಲಿ ಕಾನೂನು ಅನುಷ್ಠಾನ ಮಾಡುವ ವ್ಯವಸ್ಥೆ ಇರುತ್ತದೆಯೋ ಅಲ್ಲಿ ಈ ರೀತಿಯ ಪ್ರತಿಭಟನೆಗಳು ನಡೆಯುವುದಿಲ್ಲ. ಯಾವ ನಾಡಿನಲ್ಲಿ ಕಾನೂನು ಅನುಷ್ಠಾನ ಮಾಡುವುದಿಲ್ಲವೋ ಈ ರೀತಿಯ ಘಟನೆಗಳು ನಡೆಯುತ್ತವೆ ಎಂದು ಹೇಳಿದರು.

Also read: ಸೌತ್ ಏಷಿಯನ್ ಏರೋಬಿಕ್ಸ್ ಹಿಪ್‌ಹಾಪ್ ಸ್ಪರ್ಧೆ: ಜೈನ್ ಪಬ್ಲಿಕ್ ವಿದ್ಯಾರ್ಥಿಗಳಿಗೆ ಚಿನ್ನದ ಪದಕ

ಕನ್ನಡದ ಉಳಿವಿಗೆ ಕನ್ನಡ ಸಾಹಿತ್ಯ ಪರಿಷತ್ತು ಸಾಕಷ್ಟು ಶ್ರಮ ಹಾಕಿದೆ. ನಾನು ಮುಖ್ಯಮಂತ್ರಿ ಇದ್ದಾಗ ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ವಿಕೃತಗೊಳಿಸುವ ಪ್ರಯತ್ನ ಮಾಡಿದ್ದರು. ಆದರೆ, ನಾನು ಸುವರ್ಣ ಸೌಧದ ಮುಂದೆ ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚೆನ್ನಮ್ಮ, ಅಂಬೇಡ್ಕರ್ ಹಾಗೂ ಗಾಂಧಿ ಅವರ ಪ್ರತಿಮೆ ನಿಲ್ಲಿಸುವ ಕೆಲಸ ಮಾಡಿದ್ದೇನೆ ಎಂದರು.
ಕನ್ನಡ ನಿತ್ಯ ನಿರಂತರವಾಗಿರಬೇಕೆಂದರೆ ಕನ್ನಡಡಿಗರು ಜಾಗೃತರಾಗಿರಬೇಕು. ಜಗತ್ತು ಬದಲಾಗುತ್ತಿದೆ. ಸವಾಲುಗಳನ್ನ ಎದುರಿಸಲು ನಮ್ಮ ಮಕ್ಕಳನ್ನು ಸಿದ್ದಪಡಿಸಬೇಕಿದೆ. ಇಲ್ಲಿ ಐಟಿ ಬಿಟಿ ಯಾಕೆ ಅಭಿವೃದ್ಧಿಯಾಗಿದೆ ಎಂದರೆ. ಇಲ್ಲಿನ ಮಕ್ಕಳು ಜ್ಞಾನವಂತರಿದ್ದಾರೆ. ಸಾಧನೆ ಮಾಡಿದ್ದಾರೆ. ಅದೇ ಕಾರಣಕ್ಕೆ ಐಟಿ ಬಿಟಿಯವರು ಇಲ್ಲಿಗೆ ಬಂದಿದ್ದಾರೆ ಎಂದರು.

ಕುವೆಂಪು ವಿಶ್ವಮಾನವ
ಕುವೆಂಪು ಅವರು ಅಪರೂಪದ ವ್ಯಕ್ತಿತ್ವ ಒಂದು ರೀತಿಯಲ್ಲಿ ಅವರು ಯುಗಪುರುಷರು ಅಂತ ಹೇಳಲು ಬಯಸುತ್ತೇನೆ. ಅವರನ್ನು ಆಳವಾಗಿ ನೋಡಿದಾಗ ಅತ್ಯಂತ ಮಾನವೀಯ ಗುಣಗಳಿರುವ ವ್ಯಕ್ತಿ. ವಿಸ್ತಾರವಾಗಿ ನೋಡಿದಾಗ ವಿಶ್ವ ಮಾನವರಾಗಿ ಕಾಣುತ್ತಾರೆ.
ತಮ್ಮ ವಿಚಾರಧಾರೆಗಾಗಿ ಜಗತ್ತನ್ನು ಎದುರು ಹಾಕಿಕೊಳ್ಳುವ ಸ್ವಭಾವ ಅವರದಿತ್ತು. ಅವರು ಯಾವತ್ತೂ ಮುಲಾಜಿಗೆ ಬಿದ್ದು ಸಾಹಿತ್ಯ ರಚನೆ ಮಾಡಿಲ್ಲ. ಕರ್ನಾಟಕದ ಏಕೀಕರಣ ಆಗಬೇಕು ಎಂದು ಉತ್ತರ ಕರ್ನಾಟಕ ಭಾಗದಲ್ಲಿ ಹೋರಾಟ ನಡೆಯುತ್ತಿದ್ದಾಗ. ದಕ್ಷಿಣ ಭಾಗದಲ್ಲಿ ಆಕ್ಷೇಪ ವ್ಯಕ್ತವಾದಾಗ ಕನ್ನಡದ ಮನಸುಗಳು ಒಂದಾಗಬೇಕು ಎಂದು ಮೊದಲು ನಿಲುವು ತೆಗೆದುಕೊಂಡವರು ಕುವೆಂಪು ಅವರು, ಆ ಕಾಲದಲ್ಲಿ ಏಕೀಕರಣಕ್ಕೆ ಒತ್ತು ಕೊಟ್ಟವರು ಕುವೆಂಪು ಅವರು. ಕುವೆಂಪು ಅವರ ನಿಲುವನ್ನು ಎಲ್ಲರೂ ಒಪ್ಪಿಕೊಂಡರು. ಈಗ ಕನ್ನಡದ ಮನಸುಗಳು ಒಂದಾಗಿವೆ. ಒಂದಾಗುವ ಸಾಹಿತ್ಯವನ್ನೂ ರಚಿಸಿದ್ದಾರೆ. ಅದಕ್ಕಾಗಿ ಕುವೆಂಪು ಬಹಳ ಶ್ರೇಷ್ಟ. ವೈಚಾರಿಕತೆಯನ್ನು ಬಹಳ ಸರಳವಾಗಿ ಯೋಚಿಸುವ ಗುಣ ಕುವೆಂಪು ಅವರಿಗೆ ಇತ್ತು. ಎಲ್ಲವನ್ನೂ ಸ್ವೀಕರಿಸುವ ಗುಣ ಅವರಿಗೆ ಇದ್ದಿದ್ದರಿಂದ ಕುವೆಂಪು ವಿಶ್ವ ಮಾನವರಾಗಲು ಕಾರಣವಾಯಿತು ಎಂದು ಹೇಳಿದರು.
ವೈಚಾರಿಕತೆಯಲ್ಲಿ ಅವರು ಜಗಜ್ಯೋತಿ ಬಸವಣ್ಣನವರ ವಿಚಾರಗಳನ್ನು ವಿಮರ್ಶೆ ಮಾಡಿದ್ದಾರೆ. ಎಲ್ಲಿ ನೋಡಿದರೂ ಅವರ ಚಿಂತನೆ ಮತ್ತು ಸಾಹಿತ್ಯ ಇದೆ. ಹೀಗಾಗಿ ಈಗಲೂ ಕುವೆಂಪು ಜೀವಂತವಾಗಿದ್ದಾರೆ. ಅವರ ಸಾಹಿತ್ಯದಲ್ಲಿ ಎಲ್ಲದಕ್ಕೂ ಪರಿಹಾರ ಇದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ ಜೋಶಿ ಹಾಗೂ ಮತ್ತಿತರರು ಹಾಜರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು
Kalahamsa Infotech private limited
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreBasavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಸವರಾಜ ಬೊಮ್ಮಾಯಿಬೆಂಗಳೂರು
Share200Tweet123Send
Previous Post

ಸೌತ್ ಏಷಿಯನ್ ಏರೋಬಿಕ್ಸ್ ಹಿಪ್‌ಹಾಪ್ ಸ್ಪರ್ಧೆ: ಜೈನ್ ಪಬ್ಲಿಕ್ ವಿದ್ಯಾರ್ಥಿಗಳಿಗೆ ಚಿನ್ನದ ಪದಕ

Next Post

ತೆಂಗು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರವನ್ನು ಅಭಿನಂದಿಸಿದ ಹೆಚ್.ಡಿ. ಕುಮಾರಸ್ವಾಮಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕುಮಾರಸ್ವಾಮಿ ರಾಷ್ಟ್ರಪತಿಯಾಗುತ್ತಾರೆ ಎಂದಿದ್ದು ಯಾರು?

ತೆಂಗು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರವನ್ನು ಅಭಿನಂದಿಸಿದ ಹೆಚ್.ಡಿ. ಕುಮಾರಸ್ವಾಮಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
HOSMAT Hospitals Partners with South United Football Club as Official Sports Medicine & Medical Services Leader

HOSMAT Hospitals Partners with South United Football Club as Official Sports Medicine & Medical Services Leader

February 15, 2026
ಮಹಾಶಿವರಾತ್ರಿ ಹಬ್ಬದ ಆಚರಣೆ, ಮಹತ್ವ ಮತ್ತು ಹಿನ್ನೆಲೆ ಏನು ಗೊತ್ತಾ?

ಮಹಾಶಿವರಾತ್ರಿ ಹಬ್ಬದ ಆಚರಣೆ, ಮಹತ್ವ ಮತ್ತು ಹಿನ್ನೆಲೆ ಏನು ಗೊತ್ತಾ?

February 15, 2026
ಮಹಾ ಶಿವರಾತ್ರಿ | ಫೆ.15 ರಂದು ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ವಿಶೇಷ ಪೂಜೆ

ಶಿವೋಹಂ | ಆತ್ಮದ ಜಾಗೃತಿಯ ಪರ್ವ – ಮಹಾಶಿವರಾತ್ರಿ

February 15, 2026
ನೆಲಮಂಗಲ ಬಳಿ ಮತ್ತೊಂದು ಭೀಕರ ಅಪಘಾತ | ಐವರು ಯುವಕರು ದಾರುಣ ಸಾವು

ನೆಲಮಂಗಲ ಬಳಿ ಮತ್ತೊಂದು ಭೀಕರ ಅಪಘಾತ | ಐವರು ಯುವಕರು ದಾರುಣ ಸಾವು

February 15, 2026
ಬಾಲಕಿ ಮೇಲೆ 4 ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ | ಅಸೌಫ್ ಅಲಿ, ಮಜ್ ಖಾನ್ ಅಂದರ್

ಬಾಲಕಿ ಮೇಲೆ 4 ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ | ಅಸೌಫ್ ಅಲಿ, ಮಜ್ ಖಾನ್ ಅಂದರ್

February 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL