ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಯಾವ ಕಾಯಕವೂ ಮೇಲು ಅಲ್ಲ. ಕೀಳು ಅಲ್ಲ. ಎಲ್ಲ ಕಾಯಕವೂ ಸಮಾನ ಮತ್ತು ಸಮಾನ ಘನತೆ ಹೊಂದಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅವರು ನುಡಿದರು.
ಸವಿತಾ ಸಮಾಜ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಲೇಖಕ ಡಾ.ಎಂ.ಎಸ್.ಮುತ್ತುರಾಜ್ ಅವರ ಮಂಗಳವಾದ್ಯ ಕಾದಂಬರಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.
ನಟರಾಗಿ ಜನಪ್ರಿಯತೆಗಳಿಸಿರುವ ಎಂ.ಆರ್. ಮುತ್ತೂರಾಜ್ ಅವರು ಬಹುಮುಖ ಪ್ರತಿಭೆ. ವೃತ್ತಿ ಘನತೆಯನ್ನು ಕಾಪಾಡುವ ವ್ಯಕ್ತಿತ್ವ. ಇವರು ಕಾಯಕ ಜೀವಿ. ಪ್ರತಿಯೊಬ್ಬರೂ ಘನತೆಯಿಂದ ಕಾಯಕ ಮಾಡಬೇಕು. ಇದನ್ನೇ ಬಸವಣ್ಣನವರು ಕಾಯಕವೇ ಕೈಲಾಸ ಎಂದು ಹೇಳಿದ್ದಾರೆ. ಕೈಲಾಸ, ಸ್ವರ್ಗ, ನರಕ ಎನ್ನುವುದು ಬೇರೆಲ್ಲೂ ಇಲ್ಲ. ಎಲ್ಲವೂ ಇಲ್ಲೇ ಇದೆ ಎಂದರು.

Also read: ಕೂಡಲೇ ಪರಿಹಾರ ನೀಡಿ, ಇಲ್ಲವಾದರೆ ರಾಜೀನಾಮೆ ಕೊಡಿ: ವಿಪಕ್ಷ ನಾಯಕ ಆರ್. ಅಶೋಕ್ ಸವಾಲು
ಧರ್ಮದ ಹೆಸರಲ್ಲಿ, ಜಾತಿಯ ಹೆಸರಲ್ಲಿ ಮುಸ್ಲೀಮರನ್ನು, ದಲಿತರನ್ನು, ಶೂದ್ರರನ್ನು, ಶ್ರಮಿಕ ವರ್ಗದವರನ್ನು ದ್ವೇಷಿಸುವುದು ಅತ್ಯಂತ ಅಮಾನವೀಯವಾದ, ಕೆಟ್ಟ ನಡವಳಿಕೆ. ಜನರಿಗೆ ಅರ್ಥ ಆಗುವ ರೀತಿಯಲ್ಲಿ ಸರಳವಾದ ಜನರ ಭಾಷೆಯಲ್ಲಿ ಮನುಷ್ಯನ ಮೌಲ್ಯಗಳನ್ನು ಬಸವಾದಿ ಶರಣರು ಹೇಳಿದ್ದಾರೆ ಎಂದರು.

ದೇವರಿದ್ದಾನೆ. ಆದರೆ ದೇವರು ದೇವಸ್ಥಾನದಲ್ಲಿ ಮಾತ್ರ ಇದ್ದಾನೆ ಎನ್ನುವುದು ಸರಿಯಲ್ಲ. ಎಲ್ಲಾ ಕಡೆಯೂ ದೇವರಿದ್ದಾನೆ. ಅದಕ್ಕೇ ಶರಣರು, “ಉಳ್ಳವರು ದೇವಸ್ಥಾನವ ಮಾಡುವರು. ನಾನೇನು ಮಾಡಲಯ್ಯ ಬಡವ” ಎಂದಿದ್ದಾರೆ ಎಂದು ವಚನಗಳನ್ನು ಉದಾಹರಿಸಿದರು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಸಚಿವ ಎಚ್.ಎಂ.ರೇವಣ್ಣ, ಪ್ರಗತಿಪರ ಚಿಂತಕ ಎಲ್.ಮುಕುಂದರಾಜ್ ಮತ್ತು ಸವಿತ ಸಮಾಜದ ಅಧ್ಯಕ್ಷರಾದ ಕಿರಣ್ ಕುಮಾರ್ ಅವರು ಉಪಸ್ಥಿತರಿದ್ದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post