No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Monday, July 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ರಾಜ್ಯದಲ್ಲಿ ಎಷ್ಟು ರೈತರು ಬೆಳೆವಿಮೆ ಮಾಡಿಸಿದ್ದಾರೆ? ಕೃಷಿ ಸಚಿವರು ನೀಡಿದ ಮಾಹಿತಿಯೇನು?

ರಾಜ್ಯದಲ್ಲಿ ಈಗಾಗಲೇ 475 ಕೋಟಿ ರೂ. ಬೆಳೆ ವಿಮೆ ವಿತರಣೆ: ಸಚಿವ ಚಲುವರಾಯಸ್ವಾಮಿ

kalpa News by kalpa News
January 12, 2024
in Small Bytes, ಮಂಡ್ಯ
0
ರಾಜ್ಯದಲ್ಲಿ ಎಷ್ಟು ರೈತರು ಬೆಳೆವಿಮೆ ಮಾಡಿಸಿದ್ದಾರೆ? ಕೃಷಿ ಸಚಿವರು ನೀಡಿದ ಮಾಹಿತಿಯೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನಾಗಮಂಗಲ  |

ರಾಜ್ಯದಲ್ಲಿ ಈ ವರ್ಷ ಈಗಾಗಲೇ 7 ಲಕ್ಷ ಕೃಷಿಕರಿಗೆ 475 ಕೋಟಿ ರೂ. ಬೆಳೆ ವಿಮೆ #CropInsurance ಪರಿಹಾರ ಒದಗಿಸಲಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಮಂಡ್ಯ #Mandya ಜಿಲ್ಲೆಯ ಆದಿ ಚುಂಚನಗಿರಿಯಲ್ಲಿ  ಏರ್ಪಡಿಸಿರುವ ಡಾ.ಬಾಲ ಗಂಗಾಧರನಾಥ ಸ್ವಾಮೀಜಿಯವರ 79ನೇ ಜಯಂತೋತ್ಸವ, 11ನೇ ಸಂಸ್ಮರಣಾ ಸಮಾರಂಭ ಹಾಗೂ ಕೃಷಿ ಮೇಳ ಮತ್ತು ರೈತ ಸಂಗಮ ಕಾರ್ಯಕ್ರಮಗಳನ್ನು ಅವರು ಉದ್ಘಾಟಿಸಿ ಮಾತನಾಡಿದರು.

ರಾಜ್ಯದಲ್ಲಿ ಶೇ. 2% ಅಂದರೆ ಸುಮಾರು 20 ಲಕ್ಷ ರೈತರು ಮಾತ್ರ ಬೆಳೆ ವಿಮೆ ಮಾಡಿಸಿದ್ದಾರೆ. ಈ ವರ್ಷ ಬರ ಪರಿಸ್ಥಿತಿ ಹೆಚ್ಚಿರುವ ಕಾರಣ ಇನ್ನೂ 1000 ಕೋಟಿ ರೂ. ವಿಮೆ ಹಣ ರೈತರಿಗೆ ನೇರವಾಗಿ ವರ್ಗಾವಣೆಯಾಗಲಿದೆ ಎಂದರು.

ಕೃಷಿಕರು ಸದೃಢವಾಗಬೇಕು ಆಗ ಮಾತ್ರ ದೇಶದ ಸಂಪೂರ್ಣ ಏಳಿಗೆ ಸಾಧ್ಯ ಎಂದ ಸಚಿವರು ಸಾಂಪ್ರದಾಯಿಕ ಕೃಷಿ ಪದ್ದತಿ ಜೊತೆಗೆ ಯಾಂತ್ರೀಕರಣ, ನವ ಸಂಶೋಧನೆಗಳ ಫಲವೂ ರೈತಗೆ ಸುಲಭವಾಗಿ ತಲುಪಬೇಕು. ಕೃಷಿ ವಿವಿಗಳು #AgriUniversity ಹಾಗೂ ಇಲಾಖೆಗಳು ಈ ಕೆಲಸ ಮಾಡಬೇಕು ಎಂದು ಹೇಳಿದರು.
ದೇಶದಲ್ಲಿ ಶೇ. 70 ಜನ, ಕೃಷಿ ಅವಲಂಭಿತರಾಗಿದ್ದು ಬಹುತೇಕ ರೈತರು ಬಡತನದಲ್ಲಿ ಜೀವನ‌ ದೂಡುತ್ತಿದ್ದಾರೆ. ಅವರ ಶ್ರೇಯೋಭಿವೃದ್ದಿ ಸರ್ಕಾರದ ಹಾಗೂ ಸಮಾಜದ ಕರ್ತವ್ಯ ಎಂದರು.

ಆದಿಚುಂಚನಗಿರಿ ಮಠದ ಹಿರಿಮೆ ಹೆಚ್ಚಿಸಿದ ಶ್ರೀ ಬಾಲ ಗಂಗಾಧರನಾಥ ಸ್ವಾಮೀಜಿಯವರ ಸ್ಮರಣಾರ್ಥ ಕೃಷಿ ಕಾಲೇಜು ಪ್ರಾರಂಭಿಸಲು ಶ್ರೀಮಠ ಪ್ರಯತ್ನ ನಡೆಸಿದೆ. ನಾವೂ ನಿರ್ಮಲಾನಂದನಾಥ ಸ್ವಾಮೀಜಿ ಅವರ ಸೂಚನೆ ಪಾಲಿಸಿ ಅವರ ಆಶಯ ಈಡೇರಿಸಲು ಪ್ರಯತ್ನ ನಡೆಸುತ್ತಿದ್ದೇವೆ ಎಂದರು.

ಬೆಂಗಳೂರಿನಲ್ಲಿ #Bengaluru ಇತ್ತೀಚೆಗೆ ಸಾವಯವ, ಸಿರಿಧಾನ್ಯ ಅಂತರಾಷ್ಟ್ರೀಯ ವಾಣಿಜ್ಯ ಮೇಳ ಅತ್ಯಂತ ಯಶಸ್ವಿಯಾಗಿ ನಡೆಸಿದೆ. ರೈತರು ಸಕ್ರಿಯವಾಗಿ ಪಾಲ್ಗೊಂಡಿದ್ದು ವಾಣಿಜ್ಯ ಒಪ್ಪಂದಗಳಲ್ಲೂ ಭಾಗಿಯಾಗಿದ್ದಾರೆ. ಇದೇ ರೀತಿ ತಮ್ಮ ಉತ್ಪನ್ನಗಳ ಮೌಲ್ಯವರ್ಧನೆಗೂ ಆದ್ಯತೆ ನೀಡಬೇಕು ಎಂದವರು ಕರೆ ನೀಡಿದರು.

ಸರ್ಕಾರ ಸ್ತ್ರೀ ಸಬಲೀಕರಣಕ್ಕೆ ಅದರಲ್ಲೂ ಮುಖ್ಯವಾಗಿ ಗ್ರಾಮೀಣ ಕೃಷಿ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನದ‌ ಮೂಲಕ ನುಡಿದಂತೆ ನಡೆದಿದ್ದೇವೆ. ಜನರೂ ಸರ್ಕಾರಕ್ಕೆ ಬಲ ತುಂಬ ಬೇಕು ಎಂದರು.

ಆದಿ ಚುಂಚನಗಿರಿ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಚನ ನೀಡಿ ಕೃಷಿಕರು ಬರಿ ಶ್ರಮಿಕರಾಗದೆ, ನಿಪುಣರೂ ಅಗಬೇಕು. ಇದೀಗ ಸೆಕೆಂಡರಿ ಕೃಷಿ ಹೆಚ್ಚು ಲಾಭದಾಯಕವಾಗಿದ್ದು ರೈತರು ತಮ್ಮ ಉತ್ಪನ್ನಗಳ ಮೌಲ್ಯವರ್ಧನೆಗೂ ಗಮನ ಹರಿಸಬೇಕು ಎಂದು ಕಿವಿಮಾತು ಹೇಳಿದರು.

ರೈತರೇ ದೇಶದ ಬೆನ್ನೆಲುಬು, ಅವರ ಬದುಕು ಹಸನಾಗಬೇಕು, ದೇಶದಲ್ಲಿ ಐಟಿ, ಬಿಟಿ ಕ್ಷೇತ್ರದಲ್ಲಿ ಆದಂತೆ ಕೃಷಿ ಕ್ಷೇತ್ರದಲ್ಲಿಯೂ ಸಾಕಷ್ಟು ತಾಂತ್ರಿಕ ಆವಿಷ್ಕಾರಗಳಾಗಿದ್ದು ಅದನ್ನು ಅಳವಡಿಸಿಕೊಂಡು ಆರ್ಥಿಕ ಪ್ರಗತಿ ಸಾಧಿಸಬೇಕು. ಒಂದೊಮ್ಮೆ ಬಡತನ ಹಸಿವು ಎದುರಿಸಿದ್ದ ಭಾರತದಲ್ಲಿ ಹಸಿರು ಕ್ರಾತಿ ದೇಶದ ಚಿತ್ರಣ ಬದಲಿಸಿತು. ಹಾಗೇ ಕೃಷಿ ಕ್ಷೇತ್ರದಲ್ಲಿ ಇನ್ನಷ್ಟು ತಾಂತ್ರಿಕ ವೈಜ್ಞಾನಿಕ ಬದಲಾವಣೆ ಬೇಕಿದೆ ಎಂದರು.
Kalahamsa Infotech private limitedಶ್ರೀ ಮಠ ಅನ್ನ ಶಿಕ್ಷಣ ದಾಸೋಹಕ್ಕೆ ಹೆಸರುವಾಸಿ. ಇದೆಲ್ಲಾ ಸಾಧ್ಯವಾಗಿದ್ದು ರೈತರಿಂದ. ಹಾಗಾಗಿ ಕೃಷಿಕರ ಸಬಲೀಕರಣಕ್ಕೆ ಮಠ ಸದಾ ತುಡಿಯುತ್ತದೆ ಎಂದರು.

ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ಟ್ರಸ್ಟ್‌ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರು ಕೃಷಿಗೆ ಸರಿಯಾದ ಆದ್ಯತೆ ನೀಡಿದಾಗ ಮಾತ್ರ ದೇಶದ ಸರ್ವಾಂಗೀಣ ಪ್ರಗತಿ ಸಾಧ್ಯ. ನೀರಿನ ಮಿತ ಬಳಕೆ ಬಗ್ಗೆ ರೈತರು ಗಮನ ಹರಿಸಬೇಕು. ಕೃಷಿ ಶ್ರೇಷ್ಠ ಜೀವನ ಸಂಸ್ಕೃತಿ. ಅದನ್ನು ಉತ್ತಮಗೊಳಿಸುತ್ತಾ ಸಾಗಿ ಎಂದು ರೈತರಿಗೆ ಕರೆ ನೀಡಿದರು.

ಕೃಷಿ ಆಯುಕ್ತ ವೈ.ಎಸ್. ಪಾಟೀಲ್ ಮಾತನಾಡಿ, ಆದಿ ಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಸಮಾಜಿಕ, ಶೈಕ್ಷಣಿಕ, ಆದ್ಯಾತ್ಮಿಕ ಹಾಗೂ ಕೃಷಿಪರ ಕಾಳಜಿ, ಚಿಂತನೆ ಮತ್ತು ಸೇವೆ ಇಡೀ ಜಗತ್ತೇ ಮೆಚ್ಚುವಂತದ್ದು ಎಂದು ಶ್ಲಾಘಿಸಿದರು.

ಮಧ್ಯವರ್ತಿಗಳಿಂದ ಕೃಷಿಕರ ಶೋಷಣೆ ತಪ್ಪಿಸಿ ರೈತರನ್ನೇ ಉದ್ಯಮಿಗಳನ್ನಾಗಿಸಬೇಕೆಂಬುದು ಕೃಷಿ ಸಚಿವರ ಆಶಯವಾಗಿದೆ. ಅದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.

ಕೃಷಿ ನಿರ್ದೇಶಕ ಡಾ.ಜಿ.ಟಿ ಪುತ್ರ, ಮಂಡ್ಯ ಜಿಲ್ಲಾ ಎಸ್’ಪಿ ಯತೀಶ್, ಸಿಇಒ ತನ್ವೀರ್ ಆಸಿಫ್, ಬೆಂಗಳೂರು ಕೃಷಿ ವಿವಿ ಉಪ ಕುಲಪತಿ ಡಾ.ಎಸ್.ವಿ. ಸುರೇಶ್, ಕೆಪೆಕ್ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಎಂ.ಎಸ್. ಬಂಥನಾಳ್ ಜಂಟಿ ಕೃಷಿ ನಿರ್ದೇಶಕ ಅಶೋಕ ಕುಮಾರ್ ಮತ್ತಿತರರು ಹಾಜರಿದ್ದರು

(ವರದಿ: ಡಿ.ಎಲ್. ಹರೀಶ್)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: AdhichunchanagiriAgricultural landAgricultureCrop InsuranceMandyaNagamangalawomen empowermentಆದಿಚುಂಚನಗಿರಿ ಶಿಕ್ಷಣ ಸಂಸ್ಥೆಕೃಷಿಡಾ.ಬಾಲ ಗಂಗಾಧರನಾಥ ಸ್ವಾಮೀಜಿನಾಗಮಂಗಲಬೆಳೆ ವಿಮೆಮಂಡ್ಯಸ್ತ್ರೀ ಸಬಲೀಕರಣ
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

60 ವರ್ಷದ ಕನಸು ನನಸು | ಪ್ರಧಾನಿ ಉದ್ಘಾಟಿಸಿದ ದೇಶದ ಅತಿ ಉದ್ದದ ಸಮುದ್ರ ಸೇತುವೆ ವಿಶೇಷತೆಯೇನು?

Next Post

ಮಂದಿರ ನಿರ್ಮಾಣ ದೈವಿಕ ಕನಸು, ಅದರ ನನಸಿಗೆ ವಿಧಿ ಮೋದಿಯನ್ನು ಆರಿಸಿಕೊಂಡಿದೆ: ಎಲ್.ಕೆ. ಅಡ್ವಾಣಿ

kalpa News

kalpa News

Next Post
ಮಂದಿರ ನಿರ್ಮಾಣ ದೈವಿಕ ಕನಸು, ಅದರ ನನಸಿಗೆ ವಿಧಿ ಮೋದಿಯನ್ನು ಆರಿಸಿಕೊಂಡಿದೆ: ಎಲ್.ಕೆ. ಅಡ್ವಾಣಿ

ಮಂದಿರ ನಿರ್ಮಾಣ ದೈವಿಕ ಕನಸು, ಅದರ ನನಸಿಗೆ ವಿಧಿ ಮೋದಿಯನ್ನು ಆರಿಸಿಕೊಂಡಿದೆ: ಎಲ್.ಕೆ. ಅಡ್ವಾಣಿ

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL