ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಮಾಜಿ ಉಪಪ್ರಧಾನಿ ಎಲ್.ಕೆ. ಅಡ್ವಾಣಿ L K Advani ಅವರಿಗೆ ಭಾರತರತ್ನ ಘೋಷಣೆ ಮಾಡಿದ ಬೆನ್ನಲ್ಲೇ ಮತ್ತೆ ಮೂವರು ಸಾಧಕರಿಗೆ ಈ ಗೌರವ ಸಲ್ಲಿಸಲಾಗಿದೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, PM Narendra Modi ಮಾಜಿ ಪ್ರಧಾನಿಗಳಾದ ಪಿ.ವಿ. ನರಸಿಂಹ ರಾವ್, P V Narasimha Rao ಚೌಧರಿ ಚರಣ್ ಸಿಂಗ್ Chodhari Charan Singh ಹಾಗೂ ದೇಶದ ಹಸಿರು ಕ್ರಾಂತಿಯ ಹರಿಕಾರ ಡಾ ಎಂ.ಎಸ್. ಸ್ವಾಮಿನಾಥನ್ M S Swamynathan ಅವರಿಗೆ ಭಾರತ ರತ್ನ Bharat Ratna ಗೌರವ ನೀಡುವುದಾಗಿ ಘೋಷಿಸಿದ್ದಾರೆ.
ಹಸಿರು ಕ್ರಾಂತಿಯ ಹರಿಕಾರ ಡಾ. ಎಂ.ಎಸ್. ಸ್ವಾಮಿನಾಥನ್ ಅವರಿಗೆ ಕೃಷಿ ಮತ್ತು ರೈತರ ಕಲ್ಯಾಣದಲ್ಲಿ ನಮ್ಮ ದೇಶಕ್ಕೆ ನೀಡಿದ ಸ್ಮಾರಕ ಕೊಡುಗೆಗಳನ್ನು ಗುರುತಿಸಿ ಭಾರತ ರತ್ನ ನೀಡುತ್ತಿರುವುದು ಅಪಾರ ಸಂತೋಷದ ವಿಷಯವಾಗಿದೆ ಎಂದು ಪ್ರಧಾನಿಯವರು ತಿಳಿಸಿದ್ದಾರೆ.
Also read: ತುಮಕೂರು: 10-11 ರಂದು ಶ್ರೀ ತ್ಯಾಗರಾಜ, ಶ್ರೀ ಪುರಂದರ ಆರಾಧನಾ ಉತ್ಸವ
ಸವಾಲಿನ ಸಮಯದಲ್ಲಿ ಭಾರತವು ಕೃಷಿಯಲ್ಲಿ ಸ್ವಾವಲಂಬನೆಯನ್ನು ಸಾಧಿಸಲು ಸಹಾಯ ಮಾಡುವಲ್ಲಿ ಅವರು ಪ್ರಮುಖ ಪಾತ್ರವನ್ನು ವಹಿಸಿದರು. ಭಾರತೀಯ ಕೃಷಿಯನ್ನು ಆಧುನೀಕರಿಸುವಲ್ಲಿ ಮಹೋನ್ನತ ಪ್ರಯತ್ನಗಳನ್ನು ಮಾಡಿದರು. ನಾವೀನ್ಯತೆ ಮತ್ತು ಮಾರ್ಗದರ್ಶಕರಾಗಿ ಅವರ ಅಮೂಲ್ಯವಾದ ಕೆಲಸವನ್ನು ನಾವು ಗುರುತಿಸುತ್ತೇವೆ. ವಿದ್ಯಾರ್ಥಿಗಳಲ್ಲಿ ಕಲಿಕೆ ಮತ್ತು ಸಂಶೋಧನೆಯನ್ನು ಪ್ರೋತ್ಸಾಹಿಸುತ್ತೇವೆ. ಡಾ. ಸ್ವಾಮಿನಾಥನ್ ಅವರ ದಾರ್ಶನಿಕ ನಾಯಕತ್ವವು ಭಾರತೀಯ ಕೃಷಿಯನ್ನು ಪರಿವರ್ತಿಸಿದ್ದು ಮಾತ್ರವಲ್ಲದೆ ರಾಷ್ಟ್ರದ ಆಹಾರ ಭದ್ರತೆ ಮತ್ತು ಸಮೃದ್ಧಿಯನ್ನು ಖಾತ್ರಿಪಡಿಸಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಇನ್ನು, ಮಾಜಿ ಪ್ರಧಾನಿ ಪಿ.ವಿ. ನರಸಿಂಹರಾವ್ ಅವರು, ಭಾರತವನ್ನು ನಿರ್ಣಾಯಕ ಪರಿವರ್ತನೆಗಳ ಮೂಲಕ ಮುನ್ನಡೆಸಿ ದೇಶದ ಸಾಂಸ್ಕೃತಿಕ ಮತ್ತು ಬೌದ್ಧಿಕ ಪರಂಪರೆಯನ್ನು ಶ್ರೀಮಂತಗೊಳಿಸಿದ್ದಾರೆ. ಚೌಧರಿ ಚರಣ್ ಸಿಂಗ್ ಅವರು ದೇಶಕ್ಕೆ ಅನುಪಮ ಕೊಡುಗೆ ನೀಡಿದ್ದಾರೆ. ನರಸಿಂಹ ರಾವ್ ಅವರ ದೂರದೃಷ್ಟಿಯ ನಾಯಕತ್ವವು ಭಾರತವನ್ನು ಆರ್ಥಿಕವಾಗಿ ಮುನ್ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸಿತು. ಅದರ ಸಮೃದ್ಧಿ, ಬೆಳವಣಿಗೆಗೆ ಭದ್ರ ಬುನಾದಿ ಹಾಕಿತು ಎಂದಿದ್ದಾರೆ.
ಇನ್ನು, ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರಿಗೆ ಭಾರತ ರತ್ನ ನೀಡಿ ಗೌರವಿಸುತ್ತಿರುವುದು ನಮ್ಮ ಸರ್ಕಾರದ ಸೌಭಾಗ್ಯ. ದೇಶಕ್ಕೆ ಅವರು ನೀಡಿದ ಅನುಪಮ ಕೊಡುಗೆಗೆ ಈ ಗೌರವ ಸಮರ್ಪಿಸಲಾಗಿದೆ ಎಂದಿದ್ದಾರೆ.
ಚರಣ್ ಸಿಂಗ್ ಅವರು ತಮ್ಮ ಇಡೀ ಜೀವನವನ್ನು ರೈತರ ಹಕ್ಕುಗಳು ಮತ್ತು ಅವರ ಕಲ್ಯಾಣಕ್ಕಾಗಿ ಮುಡಿಪಾಗಿಟ್ಟಿದ್ದರು. ತುರ್ತು ಪರಿಸ್ಥಿತಿಯ ವಿರುದ್ಧವೂ ಅವರು ದೃಢವಾಗಿ ನಿಂತಿದ್ದರು. ನಮ್ಮ ರೈತ ಸಹೋದರ ಸಹೋದರಿಯರಿಗೆ ಅವರ ಸಮರ್ಪಣೆ ಮತ್ತು ತುರ್ತು ಪರಿಸ್ಥಿತಿಯಲ್ಲಿ ಪ್ರಜಾಪ್ರಭುತ್ವಕ್ಕೆ ಅವರ ಬದ್ಧತೆ ಇಡೀ ರಾಷ್ಟçಕ್ಕೆ ಸ್ಫೂರ್ತಿದಾಯಕವಾಗಿದೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post