ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಒಂದು ಕಾಲದಲ್ಲಿ ಪ್ರಿಯಾಂಕಾ ವಾದ್ರಾ ಆಪ್ತರಾಗಿದ್ದ ಕಾಂಗ್ರೆಸ್ #Congress ಹಿರಿಯ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಅವರನ್ನು ಅಯೋಧ್ಯೆಗೆ #Ayodhya ಭೇಟಿ ನೀಡಿ ರಾಮದ ದರ್ಶನ ಪಡೆದರು, ಮೋದಿಯನ್ನು ಪ್ರಶಂಸಿಸಿದರು ಎಂಬ ಕಾರಣಕ್ಕಾಗಿ ಕೈ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ.
ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು ಆಚಾರ್ಯ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿದ್ದು, ಈ ವಿಚಾರ ಈಗ ರಾಷ್ಟ್ರದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಪ್ರಿಯಾಂಕಾ ವಾದ್ರಾ #PriyankaVadra ಅವರ ಆಪ್ತ ತಂಡದ ಮಾಜಿ ಸದಸ್ಯರೂ ಆದ ಆಚಾರ್ಯ ಅವರು, ಅಯೋಧ್ಯೆ ರಾಮಮಂದಿರ ಶಂಕುಸ್ಥಾಪನೆ ಆದ ನಂತರ ಹಾಗೂ ಮಂದಿರ ಲೋಕಾರ್ಪಣೆಯ ಕಾರಣಕ್ಕಾಗಿ ಪ್ರಧಾನಿ ಮೋದಿ #PMModi ಅವರನ್ನು ಹೊಗಳಿದ್ದರು. ಅಲ್ಲದೇ, ಅಯೋಧ್ಯೆಗೆ ಭೇಟಿ ನೀಡಿ ರಾಮಲಲ್ಲಾನ ದರ್ಶನ ಪಡೆದಿದ್ದರು.
ಅತ್ಯಂತ ಪ್ರಮುಖವಾಗಿ ಬಾಲರಾಮ ಪ್ರಾಣಪ್ರತಿಷ್ಠಾಪನೆಯಲ್ಲಿ ಕಾಂಗ್ರೆಸ್ ಭಾಗವಹಿಸದೇ ಇರುವುದನ್ನು ಅವರು ಟೀಕಿಸಿದ್ದರು.
ಈ ಹಿನ್ನೆಲೆಯಲ್ಲಿ ಅಶಿಸ್ತು ಮತ್ತು ಪಕ್ಷದ ವಿರುದ್ಧ ಪದೇ ಪದೇ ಹೇಳಿಕೆ ನೀಡುತ್ತಿರುವ ದೂರುಗಳನ್ನು ಗಮನದಲ್ಲಿಟ್ಟುಕೊಂಡು, ಶ್ರೀ ಪ್ರಮೋದ್ ಕೃಷ್ಣಂ ಅವರನ್ನು ಆರು ವರ್ಷಗಳ ಕಾಲ ಉಚ್ಚಾಟಿಸುವ ಉತ್ತರ ಪ್ರದೇಶ #UttaraPradesh ಕಾಂಗ್ರೆಸ್ ಸಮಿತಿಯ ಪ್ರಸ್ತಾವನೆಯನ್ನು ಕಾಂಗ್ರೆಸ್ ಅಧ್ಯಕ್ಷರು ಅನುಮೋದಿಸಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಹೇಳಿಕೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಆಚಾರ್ಯ ಪ್ರಮೋದ್ ಕೃಷ್ಣಂ ಅವರು, ಶ್ರೀರಾಮನ ಹೆಸರನ್ನು ತೆಗೆದುಕೊಂಡು ಅಯೋಧ್ಯೆಗೆ ಹೋಗುವುದು ಪಕ್ಷ ವಿರೋಧಿಯೇ? ಎಂದು ಪ್ರಶ್ನಿಸಿದ್ದಾರೆ.
ಸಚಿನ್ ಪೈಲಟ್ ಅವರನ್ನು ಪಕ್ಷದಲ್ಲಿ ಬಹಳಷ್ಟು ಅಗೌರವಿಸಲಾಗಿದೆ. ಅವರು ವಿಷದ ಬಗ್ಗೆಯೂ ಮಾತನಾಡುತ್ತಿದ್ದಾರೆ ಎಂದು ಅವರು ರಾಹುಲ್ ಗಾಂಧಿಯನ್ನು ಟ್ಯಾಗ್ ಮಾಡುತ್ತಾರೆ ಮತ್ತು ರಾಮ ಮತ್ತು ರಾಷ್ಟ್ರದ ಬಗ್ಗೆ ಯಾವುದೇ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















