ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮುಸ್ಲಿಂರಿಗೆ ನೀಡಿರುವ ಶೇ.10ರಷ್ಟು ಮೀಸಲು ಅವೈಜ್ಞಾನಿಕವಾಗಿದ್ದು, ಇಂದಲ್ಲ ನಾಳೆ ಅದನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಲಿದೆ ಎಂದು ಶಾಸಕ ಬಸವರಾಜ್ ಪಾಟೀಲ್ ಯತ್ನಾಳ್ MLA Basavaraja Patil Yatnal ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಾಧರೀತ ಮೀಸಲಾತಿ ನೀಡಲು ಬರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹಾಗಾಗಿ ಮುಸ್ಲಿಂರಿಗೆ ನೀಡಿರುವ ಶೇ.10ರಷ್ಟು ಮೀಸಲಾತಿ ಅವೈಜ್ಞಾನಿಕವಾಗಿದೆ ಎಂದರು.
2ಎ ಮೀಸಲಾತಿಗಾಗಿ ನಾವು ಹೋರಾಟ ನಡೆಸುತ್ತಿದ್ದೇವೆ. ಇದು ಕೇವಲ ಪಂಚಮಸಾಲಿ ಸಮಾಜಕ್ಕೆ ಮಾತ್ರ ಅಲ್ಲ. ಹಾಲುಮತ ಸಮಾಜಕ್ಕೂ ನೀಡಿ ಎಂದಿದ್ದೆವು. ಅಲ್ಲದೇ ಇಡೀ ವೀರಶೈವ ಸಮಾಜಕ್ಕೆ ಈ ಮೀಸಲಾತಿ ಬೇಕು. ಈ ಬಗ್ಗೆ ಯಡಿಯೂರಪ್ಪನವರು ಕೂಡ ಮುಖ್ಯಮಂತ್ರಿಯಾಗಿದ್ದಾಗ ಭರವಸೆ ನೀಡಿದ್ದರು. ಆದರೆ, ಹುಬ್ಬಳ್ಳಿಯ ಅಂಜುಮಾನ್ ಸಮಿತಿ ಕೋರ್ಟ್ನಲ್ಲಿ ಕೇಸು ಹಾಕಿದೆ. ಕಾಂಗ್ರೆಸ್ನವರು ಮನಸ್ಸು ಮಾಡಿದರೆ, ಅದನ್ನು ಹಿಂದಕ್ಕೆ ಪಡೆಯಬಹುದು ಎಂದರು.
Also read: ಎತ್ತಿನಹೊಳೆ ಯೋಜನೆ ಶೀಘ್ರ ಅನುಷ್ಠಾನ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ನಮಗೆ ಶಿಕ್ಷಣದಲ್ಲಿ ಮತ್ತು ಉದ್ಯೋಗದಲ್ಲಿ ಮೀಸಲಾತಿ ಸಿಕ್ಕರೆ ಸಾಕು. ರಾಜಕೀಯ ಮೀಸಲಾತಿಯ ಅವಶ್ಯಕತೆ ಇಲ್ಲ. ಕಾಂತರಾಜ್ ವರದಿ ಅವೈಜ್ಞಾನಿಕವಾಗಿದೆ. ವರದಿಯ ಮೂಲ ಪ್ರತಿಯೇ ಇಲ್ಲವಾಗಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















