Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಆಚಾರ್ಯ ಮಧ್ವರ ಸಂದೇಶಗಳು ಎಲ್ಲ ಕಾಲಕ್ಕೂ ಅನ್ವಯ: ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಅಭಿಮತ

ಭಂಡಾರಕೇರಿ ಮಠದಲ್ಲಿ ವಿದುಷಿ ಶುಭಾ, ಪಂಡಿತ ಕೃಷ್ಣಾಚಾರ್ಯರಿಗೆ ಸನ್ಮಾನ

February 20, 2024
in ಬೆಂಗಳೂರು ನಗರ
0 0
0
ಬೆಂಗಳೂರಿನ ಗಿರಿನಗರದ ಭಾಗವತ ಕೀರ್ತಿಧಾಮದಲ್ಲಿ ಮಧ್ವ ನವಮಿ ಅಂಗವಾಗಿ ಭಂಡಾರಕೇರಿ ಮಠ ಹಮ್ಮಿಕೊಂಡಿದ್ದ ವಿದ್ವತ್ ಸಭೆಯಲ್ಲಿ  ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಧ್ಯಾಪಕ, ವ್ಯಾಕರಣ, ನ್ಯಾಯ ಶಾಸ್ತ್ರ ಪಂಡಿತ ಕೆಂಪದಾಳಿಹಳ್ಳಿ ಕೃಷ್ಣಾಚಾರ್ಯ ಅವರಿಗೆ ‘ಮಧ್ವ  ವಿದ್ಯಾಮಾನ್ಯ’ ಬಿರುದನ್ನು ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಪ್ರದಾನ ಮಾಡಿ ಗೌರವಿಸಿದರು.

ಬೆಂಗಳೂರಿನ ಗಿರಿನಗರದ ಭಾಗವತ ಕೀರ್ತಿಧಾಮದಲ್ಲಿ ಮಧ್ವ ನವಮಿ ಅಂಗವಾಗಿ ಭಂಡಾರಕೇರಿ ಮಠ ಹಮ್ಮಿಕೊಂಡಿದ್ದ ವಿದ್ವತ್ ಸಭೆಯಲ್ಲಿ ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಧ್ಯಾಪಕ, ವ್ಯಾಕರಣ, ನ್ಯಾಯ ಶಾಸ್ತ್ರ ಪಂಡಿತ ಕೆಂಪದಾಳಿಹಳ್ಳಿ ಕೃಷ್ಣಾಚಾರ್ಯ ಅವರಿಗೆ ‘ಮಧ್ವ ವಿದ್ಯಾಮಾನ್ಯ’ ಬಿರುದನ್ನು ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಪ್ರದಾನ ಮಾಡಿ ಗೌರವಿಸಿದರು.

Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ದ್ವೈತ ಮತ ಸಿದ್ಧಾಂತ ಪ್ರತಿಪಾದಿಸಿದ ಆಚಾರ್ಯ ಶ್ರೀ ಮಧ್ವರ ತತ್ವ ಮತ್ತು ಸಂದೇಶಗಳು ಎಲ್ಲ ದೇಶ- ಕಾಲಕ್ಕೂ ಅನ್ವಯ ಎಂದು ಉಡುಪಿ ಭಂಡಾರಕೇರಿ ಮಠಾಧೀಶ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ Shri Vidyeshathirtha Swamiji of Udupi Bandarakeri Mutt ಹೇಳಿದರು.

ಬೆಂಗಳೂರಿನ ಗಿರಿನಗರದ ಭಾಗವತ ಕೀರ್ತಿಧಾಮದಲ್ಲಿ ಮಧ್ವ ನವಮಿ ಅಂಗವಾಗಿ ಭಂಡಾರಕೇರಿ ಮಠ ಹಮ್ಮಿಕೊಂಡಿದ್ದ ವಿದ್ವತ್ ಸಭೆಯಲ್ಲಿ ವೀಣಾ ವಿದುಷಿ, ಸಂಗೀತ ಸಂಯೋಜಕಿ ಮತ್ತು ಗಾಯಕಿ ವಿದುಷಿ ಶುಭಾ ಸಂತೋಷ್ ಅವರಿಗೆ ‘ರಾಮ ಲಾಲಿತ ವೀಣಾ ಮಾನ್ಯ’ ಪ್ರಶಸ್ತಿಯನ್ನು ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಪ್ರದಾನ ಮಾಡಿದರು.

ಮಧ್ವ ನವಮಿ ಅಂಗವಾಗಿ ಗಿರಿನಗರದ ಭಾಗವತ ಕೀರ್ತಿಧಾಮದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಕಾರ್ಯಕ್ರಮದಲ್ಲಿ ಅವರು ವಿವಿಧ ರಂಗದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮಾಡಿ ಆಶೀರ್ವಚನ ನೀಡಿದರು.
ಶ್ರೀ ಮಧ್ವರ (ಆನಂದತೀರ್ಥರ) ಸಿದ್ಧಾಂತದಲ್ಲಿ ತತ್ವಜ್ಞಾನದೊಂದಿಗೆ ವೈಜ್ಞಾನಿಕ ಅಂಶಗಳು ಹೇರಳವಾಗಿವೆ. ಅವರ ಸಂದೇಶಗಳನ್ನು ಸಂರಕ್ಷಣೆ ಮಾಡಿ ಮುಂದಿನ ಪೀಳಿಗೆಗೆ ತಲುಪಿಸುವ ಮಹತ್ತರವಾದ ಜವಾಬ್ದಾರಿ ನಮ್ಮ ಮೇಲಿದೆ. ಮಧ್ವರು ಮಹಾಭಾರತಕ್ಕೆ 10 ವಿಶೇಷ ಅರ್ಥಗಳನ್ನು ಹೇಳಿದ್ದಾರೆ. 10 ಉಪನಿಷತ್ತುಗಳ ಅರ್ಥ ಜಗತ್ತಿಗೆ ತಿಳಿಯುವಂತೆ ಭಾಷ್ಯ ಬರೆದಿದ್ದಾರೆ. 10 ಯತಿಗಳಿಗೆ ಸನ್ಯಾಸ ದೀಕ್ಷೆಯೊಂದಿಗೆ ಧರ್ಮದ ಉಪದೇಶ ನೀಡಿ ಪರಂಪರೆ ಬೆಳೆಸಿದ್ದಾರೆ. ಹಾಗಾಗಿ ಅವರಿಗೆ ದಶಪ್ರಮತಿ ಮತ್ತು ಪೂರ್ಣಪ್ರಜ್ಞ ಎಂಬ ಹೆಸರುಗಳು ಅನ್ವರ್ಥವಾಗಿವೆ. ಲೋಕಕ್ಕೆ ಆನಂದಕರವಾದ ಶಾಸ್ತ್ರ, ವ್ಯಾಖ್ಯಾನ ಮತ್ತು ನಿರ್ಣಯಗಳನ್ನು ನೀಡಿದ ಕಾರಣಕ್ಕಾಗಿ ಅವರಿಗೆ ಆನಂದತೀರ್ಥ ಎಂಬ ನಾಮವೂ ಭೂಷಣಪ್ರಾಯವಾಗಿದೆ ಎಂದು ಶ್ರೀ ವಿದ್ಯೇಶತೀರ್ಥರು ಹೇಳಿದರು.

Also read: ತಲ್ಲೀನತೆ, ಶ್ರದ್ಧಾ ಭಾವಗಳೇ ಕ್ರಿಯಾಶೀಲತೆ ಪ್ರತೀಕ: ಹಿರಿಯ ಭರತನಾಟ್ಯ ವಿದುಷಿ ರೂಪಶ್ರೀ ಅಭಿಮತ

ಭಾರತೀಯ ವೇದಾಂತ ರಂಗದಲ್ಲಿ ಆಚಾರ್ಯ ಮಧ್ವರು ದುಂಬಿಯಂತೆ ಶ್ರಮಿಸಿ, ವೇದಗಳಲ್ಲಿ ಅಡಗಿರುವ ಭಗವಂತನ ಗುಣ ಎಂಬ ಮಧುವನ್ನು ಗ್ರಹಣ ಮಾಡಿ ‘ಸರ್ವಮೂಲ’ ಎಂಬ ಕೋಶದಲ್ಲಿ ಸಂಗ್ರಹಿಸಿ ವಿಶ್ವಕ್ಕೆ ‘ಪೂರ್ಣ ಪ್ರಜ್ಞ’ ದೃಷ್ಟಿಯನ್ನು ದಯಪಾಲಿಸಿದ್ದು ಮಹೋನ್ನತ ಕಾರ್ಯ. ಇಂಥ ಮಧುವನ್ನು ನೀಡಿದ ಕಾರಣಕ್ಕಾಗಿ ಅವರು ಮಧ್ವರಾದರು. ಹಾಗಾಗಿಯೇ ಅವರ ಪ್ರತಿಮೆಗೆ ಸ್ಮರಣಾರ್ಥವಾಗಿ ಮಧು ಅಭಿಷೇಕ ಮಾಡುವುದು ಧನ್ಯತೆ ಸಮರ್ಪಣೆಯ ಸಂಕೇತ ಎಂದು ಶ್ರೀ ವಿದ್ಯೇಶತೀರ್ಥರು ವ್ಯಾಖ್ಯಾನಿಸಿದರು.

ಮಧ್ವ ನವಮಿ ಉತ್ಸವ ಅಂಗವಾಗಿ ಅವರ ಮಹತ್ತರ ಕೃತಿಗಳನ್ನು ಅಧ್ಯಯನ ಮಾಡಬೇಕು. ವಿದ್ವಜ್ಜನರಿಗೆ ಗೌರವಿಸಬೇಕು. ಭಾರತೀಯ

ಸನಾತನ ಪರಂಪರೆಯ ರಾಯಭಾರಿಗಳಾದ ಪಂಡಿತರಿಗೆ ಸನ್ಮಾನಿಸಬೇಕು. ಈ ಮೂಲಕ ಮಧ್ವ ಶಾಸ್ತ್ರ, ದಾಸ ಸಾಹಿತ್ಯ ಮತ್ತು ವಿದ್ಯೇಶ ವಿಠಲಾಂಕಿತ ಕೃತಿಗಳ ಪ್ರಚಾರ, ಪ್ರಸಾರಕ್ಕೆ ಬೆಂಬಲಿಸಬೇಕು. ಆಗ ಮಾತ್ರ ಉತ್ಸವ, ಗುರು ಸ್ಮರಣೆ, ಆರಾಧನೆಗಳು ಅರ್ಥಪೂರ್ಣವಾಗುತ್ತವೆ ಎಂದರು.
ಪ್ರಶಸ್ತಿ ಪ್ರದಾನ:
ವೀಣಾ ವಿದುಷಿ, ಸಂಗೀತ ಸಂಯೋಜಕಿ ಮತ್ತು ಗಾಯಕಿ ವಿದುಷಿ ಶುಭಾ ಸಂತೋಷ್ ಅವರು ಸಂಗೀತ ಕ್ಷೇತ್ರಕ್ಕೆ ಸಲ್ಲಿಸಿದ ಅನುಪಮ ಸೇವೆ ಮತ್ತು ಅಯೋಧ್ಯೆಯಲ್ಲಿ ಶ್ರೀ ರಾಮನ ಮೂರ್ತಿ ಪ್ರತಿಷ್ಠಾಪನೆ ಸಂದರ್ಭದಲ್ಲೇ ವೀಣಾ ವಾದನ ಸೇವೆ ಸಮರ್ಪಿಸಿ ಕರ್ನಾಟಕದ ಕೀರ್ತಿಯನ್ನು ಬೆಳಗಿದ ಸವಿ ನೆನಪಿಗಾಗಿ ಅವರಿಗೆ ‘ರಾಮ ಲಾಲಿತ ವೀಣಾ ಮಾನ್ಯ’ ಪ್ರಶಸ್ತಿಯನ್ನು ಶ್ರೀಗಳು ಪ್ರದಾನ ಮಾಡಿ ಗೌರವಿಸಿದರು.

ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಧ್ಯಾಪಕ, ವ್ಯಾಕರಣ, ನ್ಯಾಯ ಶಾಸ್ತ್ರ ಪಂಡಿತ ಕೆಂಪದಾಳಿಹಳ್ಳಿ ಕೃಷ್ಣಾಚಾರ್ಯ ಅವರಿಗೆ ‘ಮಧ್ವ ವಿದ್ಯಾಮಾನ್ಯ’ ಬಿರುದು ಪ್ರದಾನ ಮಾಡಿ ಸನ್ಮಾನಿಸಿದರು.

ಕೆಎಎಸ್ ಅಧಿಕಾರಿ ಅನಿಲ್ ಕುಮಾರ ಮರಳಿ, ಮಠದ ವಿದ್ವಾಂಸರು, ಪಂಡಿತರು ಮತ್ತು ನೂರಾರು ಭಕ್ತರು ಹಾಜರಿದ್ದರು. ನಂತರ ಗುರು ವಿಜಯ ಗೀತೆ ಸಾಮೂಹಿಕ ಪಾರಾಯಣ, ಶ್ರೀ ಕೃಷ್ಣನ ವಿಗ್ರಹ ಮತ್ತು ಪ್ರಾಣ ದೇವರ ವಿಗ್ರಹಗಳಿಗೆ ಮಧು ಅಭಿಷೇಕ, ಸುಮಧ್ವ ವಿಜಯ ಪಾರಾಯಣ, ಸಂಸ್ಥಾನ ಪೂಜೆ, ಪ್ರಸಾದ ವಿನಿಯೋಗ ನೆರವೇರಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited               

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaShri Vidyeshathirtha Swamiji of Udupi Bandarakeri Muttಉಡುಪಿ ಭಂಡಾರಕೇರಿ ಮಠಾಧೀಶ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿಬೆಂಗಳೂರು
Previous Post

ತಲ್ಲೀನತೆ, ಶ್ರದ್ಧಾ ಭಾವಗಳೇ ಕ್ರಿಯಾಶೀಲತೆ ಪ್ರತೀಕ: ಹಿರಿಯ ಭರತನಾಟ್ಯ ವಿದುಷಿ ರೂಪಶ್ರೀ ಅಭಿಮತ

Next Post

ಫೆ.22 | ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶಿಷ್ಯ ಸ್ವೀಕಾರ | ಯಾರು ನೂತನ ಉತ್ತರಾಧಿಕಾರಿ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಫೆ.22 | ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶಿಷ್ಯ ಸ್ವೀಕಾರ | ಯಾರು ನೂತನ ಉತ್ತರಾಧಿಕಾರಿ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025

ಜೂನ್ 30ಕ್ಕೆ ಅನ್ವಯಿಸುವಂತೆ ಮೈಸೂರು-ಶಿವಮೊಗ್ಗ-ತಾಳಗುಪ್ಪ ಎಕ್ಸ್’ಪ್ರೆಸ್ ರೈಲಿನ ಬಿಗ್ ಅಪ್ಡೇಟ್

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!