ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿ ಆಗುವುದನ್ನು ತಡೆಯಲು ವಿರೋಧಿಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರೂಪಿಸುತ್ತಿರುವ ಯಾವುದೇ ರೀತಿಯ ಸಂಚು ಫಲಿಸುವುದಿಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಹೇಳಿದ್ದಾರೆ.
ಮೋದಿ ಮತ್ತೆ ಪ್ರಧಾನಿಯಾಗಲಿ ಎಂದು ಪ್ರಾರ್ಥಿಸಿ ವಿನೋಬ ನಗರದ ಶಿವಾಲಯದಲ್ಲಿ ಆಯೋಜಿಸಲಾಗಿರುವ ಅತಿರುದ್ರ ಮಹಾಯಾಗದಲ್ಲಿ ಪಾಲ್ಗೊಳ್ಳುವ ಮುನ್ನ ಅವರು ಮಾತನಾಡಿದರು.
ನರೇಂದ್ರ ಮೋದಿ PM Narendra Modi ಅವರು ಮತ್ತೆ ಪ್ರಧಾನಿಯಾಗಬಾರದು ವಿರೋಧಿಗಳು ಏನೆಲ್ಲಾ ಪ್ರಯತ್ನಿಸುತ್ತಿದ್ದಾರೆ. ಇದಕ್ಕಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲೂ ಸಹ ಪ್ರಯತ್ನಗಳು ನಡೆಯುತ್ತಿದ್ದು, ಇಂತಹ ಯಾವುದೇ ಪ್ರಯತ್ನಗಳು ಫಲಿಸುವುದಿಲ್ಲ ಎಂದು ತಿರುಗೇಟು ನೀಡಿದರು.
Also read: ಕಾಶಿ ವಿಶ್ವನಾಥನ ದರ್ಶನ ಪಡೆದ ಮಿಲ್ಕಿ ಬ್ಯೂಟಿ ತಮನ್ನಾ | ಫೋಟೋಗಳನ್ನು ನೋಡಿ
ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿ ಆಗಬೇಕು ಎಂಬ ಉದ್ದೇಶದಿಂದ ಪ್ರಾರ್ಥಿಸಿ ವಿಶೇಷವಾಗಿ ಅತಿರುದ್ರ ಮಹಾಯಾಗವನ್ನು ನಗರದಲ್ಲಿ ಆಯೋಜಿಸಲಾಗಿದೆ. ಇಂದು ಹಾಗೂ ನಾಳೆ ಎರಡೂ ದಿನ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದವರು ಕೋರಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post