ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಜಯನಗರ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ Shri Raghavendra Swamy Mutt ಪ್ರತಿನಿತ್ಯ ಗುರುರಾಯರ ಜೀವನ ಚರಿತ್ರೆಯ ಪ್ರವಚನವನ್ನು ಆಯೋಜಿಸಲಾಗಿದೆ.
ಶ್ರೀಮಠದಲ್ಲಿ ಪ್ರತಿನಿತ್ಯ ಸಂಜೆ 6 ರಿಂದ 7 ಗಂಟೆಯವರೆಗೂ ಪ್ರವಚನ ನಡೆಯಲಿದ್ದು, ಶ್ರೀ ರಾಘವೇಂದ್ರ ಸ್ವಾಮಿಗಳ ಪಟ್ಟಾಭಿಷೇಕ ಮತ್ತು ಜನ್ಮದಿನೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದೆ.
ಈ ಕುರಿತಂತೆ ಮಾತನಾಡಿದ ಶ್ರೀಮಠದ ನಂದಕಿಶೋರ್ ಆಚಾರ್ಯ, ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾಂದಗಳವರ ಆದೇಶದಂತೆ ಹಿರಿಯ ವ್ಯವಸ್ಥಾಪಕರಾದ ಆರ್.ಕೆ. ಅಗ್ನಿಹೋತ್ರಿ ಅವರ ನೇತೃತ್ವದಲ್ಲಿ ಪ್ರತಿನಿತ್ಯ ಪ್ರವಚನ ಮಾಲಿಕೆ ವಿದ್ವಾನ್, ಅಗ್ನಿಹೋತ್ರಿ ವೇಣು ಗೋಪಾಲಾಚಾರ್ಯರು ನಡೆಸಿಕೊಡಲಿದ್ದಾರೆ.
Also read: We have fulfilled the CAA promise: Union Home Minister Amit Shah
ವಿಶೇಷವಾಗಿ ಶ್ರೀ ರಾಘವೇಂದ್ರ ಸ್ವಾಮಿಗಳ ಸನ್ನಿಧಿಯ ಪ್ರಕಾರದಲ್ಲಿ ವಿದ್ಯುತ್ ದೀಪಗಳಿಂದ ಅಲಂಕಾರ ಹಾಗೂ ಪುಷ್ಪಗಳಿಂದ ಅಲಂಕೃತಗೊಂಡ ಶ್ರೀ ಮಠದಲ್ಲಿ ನೂರಾರು ಭಕ್ತರು ಪ್ರವಚನ ಶ್ರೀ ಹರಿ ಭಜನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಗುರುರಾಯರ ಅನುಗ್ರಹಕ್ಕೆ ಪಾತ್ರರಾಗುತ್ತಿದ್ದಾರೆ ಎಂದರು.
ವಿಶೇಷವಾಗಿ ಶ್ರೀ ರಾಘವೇಂದ್ರ ಸ್ವಾಮಿಗಳ ಜನ್ಮದಿನೋತ್ಸವವು ಮಾರ್ಚ್ 16 ಶನಿವಾರದಂದು ಪ್ರವಚನದ ಮಂಗಳ ಮಹೋತ್ಸವ ಹಾಗೂ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳವರ ಅಮೃತ ಹಸ್ತದಿಂದ ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಬೆಳಗ್ಗೆ 11 ಗಂಟೆಗೆ ಲಕ್ಷ ಪುಷ್ಪಾರ್ಚನೆ ಕಾರ್ಯಕ್ರಮವು ನಡೆಯಲಿದೆ. ಭಕ್ತಾದಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಶ್ರೀ ಹರಿ ವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾಗಬಹುದು ಎಂದು ಶ್ರೀಮಠ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post