No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ನಾವೇನು 6-7 ಕ್ಷೇತ್ರ ಕೇಳಿಲ್ಲ, ಕೇಳಿರೋದು 3-4 ಕ್ಷೇತ್ರ ಅಷ್ಟೇ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ

kalpa News by kalpa News
March 19, 2024
in ಬೆಂಗಳೂರು ನಗರ
0
ಸಾಂವಿಧಾನಿಕ ಮೌಲ್ಯಗಳನ್ನು ಕಸಕ್ಕೆ ಸಮ ಎಂದುಕೊಂಡಿದೆ ಕಾಂಗ್ರೆಸ್: ಮಾಜಿ ಸಿಎಂ ಎಚ್’ಡಿಕೆ ಕಿಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಹಾಸನ, ಮಂಡ್ಯ ಹಾಗೂ ಕೋಲಾರ ಲೋಕಸಭೆ ಕ್ಷೇತ್ರಗಳಲ್ಲಿ Parliament Election ಜೆಡಿಎಸ್ ಅಭ್ಯರ್ಥಿಗಳನ್ನು ನಿಲ್ಲಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ H D Kumaraswamy ಅವರು ಘೋಷಣೆ ಮಾಡಿದರು.

ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲಗಳು ಇಲ್ಲ. ಮೂರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಹಾಕುತ್ತೇವೆ ಎಂದರು.
ನಾವು ಕೇಳಿರೋದು 3-4 ಕ್ಷೇತ್ರ
ಸೀಟು ಹಂಚಿಕೆ ಬಗ್ಗೆ ಅಧಿಕೃತವಾಗಿ ಘೋಷಣೆ ಆಗೋವರೆಗೂ ಮಾತನಾಡುವುದಿಲ್ಲ. ಆದರೆ, ಅಭ್ಯರ್ಥಿಗಳ ಘೋಷಣೆ ಹಾಗೂ ಕ್ಷೇತ್ರಗಳ ಹಂಚಿಕೆ ವಿಳಂಬ ಆಗುತ್ತಿದೆ ಎಂದು ಪಕ್ಷದ ನಾಯಕರು ಆತಂಕ ವ್ಯಕ್ತಪಡಿಸಿದರು. ನಾವು ಬಿಜೆಪಿಯಿಂದ 6-7 ಸೀಟು ಕೇಳಿಲ್ಲ. ನಾವು ಕೇಳಿರೋದು 3-4 ಸೀಟು ಮಾತ್ರ. ನಮ್ಮ ಶಕ್ತಿ ಅವರಿಗೂ ಗೊತ್ತಿದೆ. 3-4 ಸೀಟು ಕೊಡ್ತಾರೆ ಎಂಬ ನಂಬಿಕೆ ಇಟ್ಟುಕೊಂಡಿದ್ದೇನೆ. ಕೇವಲ ಎರಡು ಕ್ಷೇತ್ರ ತೆಗೆದುಕೊಳ್ಳೋಕೆ ನಾನು ಇಷ್ಟು ಪ್ರಯತ್ನ ಮಾಡಬೇಕಿತ್ತಾ? ಇಷ್ಟೆಲ್ಲಾ ಹೊಂದಾಣಿಕೆ ಬೇಕಾ ನನಗೆ? ಎಂದು ಮಾಜಿ ಮುಖ್ಯಮಂತ್ರಿ ಅವರು ಬೇಸರ ವ್ಯಕ್ತಪಡಿಸಿದರು.

ಹಾನಸ, ಮಂಡ್ಯದಲ್ಲಿ ಸ್ವತಂತ್ರವಾಗಿ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ. ತ್ರಿಕೋನ ಸ್ಪರ್ಧೆ ಆದರೆ ಸುಲಭವಾಗಿ ನಾವು ಗೆಲ್ಲುತ್ತೇವೆ. ಆದರೆ 18 ಕ್ಷೇತ್ರಗಳಲ್ಲಿ ಬಿಜೆಪಿಗೆ ನಮ್ಮ ಪಕ್ಷದಿಂದ ಅನುಕೂಲ ಆಗಲಿದೆ. ಈ ವಿಷಯವನ್ನು ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ನಮ್ಮ ಶಕ್ತಿ ಧಾರೆ ಎರೆದರೆ ಬಿಜೆಪಿಗೆ ಒಳ್ಳೆಯ ಫಲಿತಾಂಶ ಬರುತ್ತದೆ. ಏಕೆಂದರೆ ಕರ್ನಾಟಕದ ರಾಜಕೀಯ ಬೇರೆ, ದೇಶದ ಇತರೆ ರಾಜ್ಯಗಳ ರಾಜಕೀಯವೇ ಬೇರೆ. ಇದನ್ನು ಬಿಜೆಪಿ ಹೈಕಮಾಂಡ್ ಗಮನಕ್ಕೆ ತನ್ನಿ ಎಂದು ಮುಖಂಡರು ನನ್ನ ಮೇಲೆ ಒತ್ತಡ ಹಾಕಿದ್ದಾರೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.
18 ಕ್ಷೇತ್ರಗಳಲ್ಲಿ ಬಿಜೆಪಿಗೆ ಅನುಕೂಲ ಆಗುತ್ತದೆ
ನಮ್ಮ ಪಕ್ಷದ ಮುಖಂಡರು ಜೆಡಿಎಸ್- ಬಿಜೆಪಿ ಮೈತ್ರಿಯಿಂದ ಜೆಡಿಎಸ್ ಗೆ ದೊಡ್ಡ ಲಾಭವಿಲ್ಲ ಅಂತ ಹೇಳಿದ್ದಾರೆ. 18 ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷದ ಮತಗಳಲ್ಲಿ 3%-4% ಬಿಜೆಪಿಗೆ ಸ್ವಿಂಗ್ ಆದರೆ 18 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ. ನಮ್ಮ ಪಕ್ಷದ ದುಡಿಮೆ ಬಿಜೆಪಿಗೆ ಅನುಕೂಲ ಆಗುತ್ತದೆ. ಇದನ್ನು ಬಿಜೆಪಿ ಹೈಕಮಾಂಡ್ ಗಮನಕ್ಕೆ ತನ್ನಿ ಎಂದು ಮುಖಂಡರು ಹೇಳಿದ್ದಾರೆ. ಬಿಜೆಪಿ ಸರಿಯಾಗಿ ನಮ್ಮನ್ನು ಬಳಿಕೆ ಮಾಡಿಕೊಳ್ಳಲಿ. ಇಲ್ಲದೆ ಹೋದರೆ ಮುಂದೆ ಪೆಟ್ಟು ಬಿದ್ದರೆ ಅದರ ಸಾಧಕ-ಬಾಧಕಗಳಿಗೆ ಬಿಜೆಪಿ ಜವಾಬ್ದಾರಿ ಆಗಲಿದೆ ಎಂದು ಸ್ಪಷ್ಟ ಮಾತುಗಳಲ್ಲಿ ಕುಮಾರಸ್ವಾಮಿ ಅವರು ಹೇಳಿದರು

ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ
ಜೆಡಿಎಸ್ ಪಕ್ಷವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಮಿತ್ರಪಕ್ಷ ಬಿಜೆಪಿ ಬಗ್ಗೆ ಬೇಸರ ವ್ಯಕ್ತಪಡಿಸಿದ ಕುಮಾರಸ್ವಾಮಿ ಅವರು; ಕೋಲಾರ ಲೋಕಸಭೆ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡಲು ವಿಳಂಬ ಮಾಡುತ್ತಿರುವ ಬಗ್ಗೆ ಅತೃಪ್ತಿಯನ್ನು ಹೊರ ಹಾಕಿದರು.
ರಾಜ್ಯದ ಅನೇಕ ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷಕ್ಕೆ ಶಕ್ತಿ ಇದೆ ಅಂತ ಎಲ್ಲರಿಗೂ ಗೊತ್ತು. ರಾಜಕೀಯ ವಿಶ್ಲೇಷಣೆ ಮಾಡುವ ಎಲ್ಲರಿಗೂ ಈ ವಿಷಯ ಗೊತ್ತಿದೆ. ಬಿಜೆಪಿ ಅವರು ಇದನ್ನೆಲ್ಲ ಗಮನಿಸುತ್ತಾರೆ. ಅದನ್ನು ಸರಿಯಾಗಿ ಉಪಯೋಗ ಮಾಡಿಕೊಳ್ಳಿ ಅಂತ ಹೇಳೋಕೆ ನಾವು ಸಭೆ ಮಾಡಿದ್ದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

Also read: ಸೇವೆಯಲ್ಲಿ ಶ್ರದ್ಧೆ, ಸಹನೆ ಇದ್ದಲ್ಲಿ ಎಲ್ಲೂ ಯಶಸ್ಸು ಸಾಧ್ಯ: ನಿವೃತ್ತ ಶಿಕ್ಷಕಿ ಶಕುಂತಲಾ ಅಭಿಪ್ರಾಯ

ನಮ್ಮ ಪಕ್ಷದ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರು ಗೊಂದಲಕ್ಕೆ ಎಡೆ ಮಾಡಿಕೊಡದೆ ಒಟ್ಟಾಗಿ ಕೆಲಸ ಮಾಡಿ. ಅದು ನನ್ನ ವಿನಂತಿ. ನಮ್ಮ ಗುರಿ ನಾವು ಮುಟ್ಟ ಬೇಕು.‌ ನಮ್ಮ ಗುರಿ ಅಧಿಕಾರ ಅಲ್ಲ, ರಾಜ್ಯದ ಅಭಿವೃದ್ಧಿ ‌ಮಾತ್ರ. 75 ವರ್ಷಗಳಿಂದ ನಮ್ಮ ರಾಜ್ಯಕ್ಕೆ ಅನ್ಯಾಯ ಆಗಿದೆ. ಮೈತ್ರಿ ಕಾರಣ ನಮ್ಮ ರಾಜ್ಯದ ಅಭಿವೃದ್ಧಿಗೆ ಪರಿಹಾರ ತರಬೇಕು‌. ನಿತ್ಯ ಕೇಂದ್ರದ ಮೇಲೆ ಆರೋಪ ಮಾಡುವ ಕಾಂಗ್ರೆಸ್ 45 ವರ್ಷ ರಾಜ್ಯ, ದೇಶವನ್ನು ಆಳಿದೆ. ಕಾಂಗ್ರೆಸ್ ನ ಕೊಡುಗೆ ರಾಜ್ಯಕ್ಕೆ ಏನು? ‌ನಿಮ್ಮಿಂದ ರಾಜ್ಯಕ್ಕೆ ಅನ್ಯಾಯ ಆಗಿದೆ. ಇದನ್ನು ಸರಿ ಮಾಡೋಕೆ ನಮ್ಮ ಮೈತ್ರಿ ಆಗಿದೆ. ಲೋಕಸಭೆಯಲ್ಲಿ ದನಿ ಗಟ್ಟಿಯಾಗಿರಬೇಕು. ಲೋಕಸಭೆಯಲ್ಲಿ ನಮ್ಮ ದನಿ ಇರಬೇಕು ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

Kalahamsa Infotech private limitedನಾಡಿನ ಜನರಿಗೆ ಮನವಿ ಮಾಡುತ್ತೇನೆ. ಎಲ್ಲಾ 28 ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಆಶೀರ್ವಾದ ಮಾಡಿ. ಒಂದು ಅವಕಾಶವನ್ನ ದೇವೇಗೌಡರ ಮಾರ್ಗದರ್ಶನದಲ್ಲಿ ನಾವು ಮೈತ್ರಿಗೆ ಸಹಕಾರ ಕೊಡ್ತಿದ್ದೇವೆ. ನಾಡಿಗೆ ಆಗಿರುವ ಅನ್ಯಾಯ ಸರಿ ಮಾಡೋಕೆ ನಾವು ಮೈತ್ರಿ ಆಗಿದ್ದೇವೆ. ರಾಜ್ಯದ ಅನ್ಯಾಯ ಸರಿ ಮಾಡೋದ್ರಲ್ಲಿ ನಾವು ವಿಫಲವಾದರೆ ನೀವು ನಮ್ಮನ್ನ ನೇರವಾಗಿ ನಮ್ಮನ್ನ ಪ್ರಶ್ನೆ ಮಾಡಿ ಎಂದು ಅವರು ನೇರ ಮಾತುಗಳಲ್ಲಿ ಹೇಳಿದರು.

ಇವತ್ತಿನ ಸಭೆಯಲ್ಲಿ ಚುನಾವಣೆ ಉಸ್ತುವಾರಿಗಳು ಮತ್ತು ಜಿಲ್ಲಾ ಘಟಕದ ಅಧ್ಯಕ್ಷರು ಭಾಗವಹಿಸಿದ್ದರು. ಕೆಲವು ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಅ ಸಭೆಯಲ್ಲಿ ನಮ್ಮ ಪ್ರಮುಖರು ಅಭಿಪ್ರಾಯ ಹೇಳಿದ್ದಾರೆ. ನಮ್ಮ ಉದ್ದೇಶ ಕಾಂಗ್ರೆಸ್ ನವರು ಜೆಡಿಎಸ್ ಪಕ್ಷವನ್ನು ಮುಗಿಸ್ತೀವಿ ಎನ್ನುತ್ತಿದ್ದಾರೆ. 28 ಕ್ಷೇತ್ರ ಗೆಲ್ಲುತ್ತೇವೆ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ. ಇದನ್ನು ಬಿಜೆಪಿ ನಾಯಕರು ಅರ್ಥ ಮಾಡಿಕೊಳ್ಳಬೇಕು. ನಮ್ಮ ಸಹಕಾರ ಇರುವ ರೀತಿಯಲ್ಲೇ ಬಿಜೆಪಿಯಿಂದಲೂ ಸಹಕಾರ ಇರಬೇಕು. ಅದನ್ನು ಸರಿ ಮಾಡುವ ನಿಟ್ಟಿನಲ್ಲಿ ಕೆಲವು ಸೂಚನೆ ಬಿಜೆಪಿ ಅವರಿಗೆ ನೀಡಬೇಕು ಅಂತ ಕೆಲವರು ಹೇಳಿದ್ದಾರೆ ಎಂದರು ಕುಮಾರಸ್ವಾಮಿ.
ಎರಡು ಪಕ್ಷದ ನಾಯಕರ ಸಭೆಗಳು, ಚುನಾವಣೆ ಪ್ರಚಾರದಲ್ಲಿ ಎರಡು ಪಕ್ಷಗಳು ಹೇಗೆ ಕೆಲಸ ಮಾಡಬೇಕು. ಬೂತ್ ಮಟ್ಟದಲ್ಲಿ ಹೇಗೆ ಕಾರ್ಯಕರ್ತರು ಕೆಲಸ ಮಾಡಬೇಕು ಅಂತ ಸಲಹೆ ಕೊಡಬೇಕು ಅಂತ ಹೇಳಿದ್ದಾರೆ. ಉತ್ತರ ಕರ್ನಾಟಕದ ಕೆಲವು ಕ್ಷೇತ್ರಗಳ ವಿಜಯಪುರ, ಕಲಬುರ್ಗಿಯಲ್ಲಿ ಬಿಜೆಪಿಗಿಂತ ಜೆಡಿಎಸ್ ಪ್ರಬಲವಾಗಿದೆ. ಇಂತಹ ಕ್ಷೇತ್ರಗಳಲ್ಲಿ ನಮ್ಮ ನಾಯಕರನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಬೇಕು. ಇದರ ಬಗ್ಗೆ ಬಿಜೆಪಿ ಹೈಕಮಾಂಡ್ ಜತೆ ಚರ್ಚೆ ಆಗಬೇಕು ಅಂತ ಪ್ರಮುಖರು ಹೇಳಿದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ನಮಗೆ ಗೌರವಯುತವಾಗಿ ನಡೆಸಿಕೊಳ್ಳಬೇಕು. ಕಡೆಗಣಿಸಬಾರದು. ಅದರಿಂದ ಆಗುವ ಪರಿಣಾಮವನ್ನು ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಇದೆಲ್ಲವನ್ನೂ ಬಿಜೆಪಿ ಹೈಕಮಾಂಡ್ ಜತೆ ಚರ್ಚೆ ಮಾಡಿ ಸೌಹಾರ್ದಯುತವಾಗಿ ಒಟ್ಟಾಗಿ ಕೆಲಸ ಮಾಡೋ ನಿಟ್ಟಿನಲ್ಲಿ ಚರ್ಚೆ ಮಾಡಿದ್ದೇವೆ ಎಂದರು.

ಕೋರ್ ಕಮಿಟಿ ಅಧ್ಯಕ್ಷರಾದ ಜಿಟಿ ದೇವೇಗೌಡ, ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪೂರ್, ಸಮೃದ್ಧಿ ಮಂಜುನಾಥ್, ಮಾಜಿ ಶಾಸಕ ತಿಮ್ಮರಾಯಪ್ಪ ಮುಂತಾದವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/02/VID-20240229-WA0025.mp4


Tags: BangaloreH D KumaraswamyKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರುಹೆಚ್.ಡಿ. ಕುಮಾರಸ್ವಾಮಿ
Share203Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೇವೆಯಲ್ಲಿ ಶ್ರದ್ಧೆ, ಸಹನೆ ಇದ್ದಲ್ಲಿ ಎಲ್ಲೂ ಯಶಸ್ಸು ಸಾಧ್ಯ: ನಿವೃತ್ತ ಶಿಕ್ಷಕಿ ಶಕುಂತಲಾ ಅಭಿಪ್ರಾಯ

Next Post

ಮಾರ್ಚ್ 25ರಿಂದ SSLC ಪರೀಕ್ಷೆ | ಯಾವತ್ತು ಯಾವ ಪತ್ರಿಕೆ? ಎಷ್ಟು ವಿದ್ಯಾರ್ಥಿಗಳು ಬರೆಯಲಿದ್ದಾರೆ?

kalpa News

kalpa News

Next Post
ಮಾರ್ಚ್ 25ರಿಂದ SSLC ಪರೀಕ್ಷೆ | ಯಾವತ್ತು ಯಾವ ಪತ್ರಿಕೆ? ಎಷ್ಟು ವಿದ್ಯಾರ್ಥಿಗಳು ಬರೆಯಲಿದ್ದಾರೆ?

ಮಾರ್ಚ್ 25ರಿಂದ SSLC ಪರೀಕ್ಷೆ | ಯಾವತ್ತು ಯಾವ ಪತ್ರಿಕೆ? ಎಷ್ಟು ವಿದ್ಯಾರ್ಥಿಗಳು ಬರೆಯಲಿದ್ದಾರೆ?

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL