ಕಲ್ಪ ಮೀಡಿಯಾ ಹೌಸ್ | ಗದಗ |
ಲೋಕಸಭಾ ಚುನಾವಣೆ Lok Sabha Election ಮುಗಿದ ಮೂರು ತಿಂಗಳಲ್ಲಿ ಕಾಂಗ್ರೆಸ್ ದೇಶದಲ್ಲಿ ಎರಡು ಹೋಳಾಗುತ್ತದೆ. ಅದರ ಪರಿಣಾಮ ಕರ್ನಾಟಕದ ಮೇಲೆ ಆಗಲಿದ್ದು, ಕಾಂಗ್ರೆಸ್ ನಲ್ಲಿನ ಆಂತರಿಕ ಕಚ್ಚಾಟದಿಂದ ರಾಜ್ಯ ಸರ್ಕಾರ ಬಹಳ ದಿನ ಉಳಿಯಲು ಸಾಧ್ಯವಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Basavaraja Bommai ಹೇಳಿದ್ದಾರೆ.
ಗದಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಕುಮಾರ ಉದಾಸಿಯವರು ಈ ಕ್ಷೇತ್ರದಲ್ಲಿ ಸಾಕಷ್ಡು ಅಭಿವೃದ್ಧಿ ಮಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ, ಕೇಂದ್ರದ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಮೋದಿಯವರು ಮೂರನೇ ಬಾರಿ ಪ್ರಧಾನಿಯಾದ ನಂತರ ನೂರಕ್ಕೆ ನೂರು ಕೇಂದ್ರದ ಎಲ್ಲ ಯೋಜನೆಗಳನ್ನು ಈ ಕ್ಷೇತ್ರದಲ್ಲಿ ಜಾರಿಗೊಳಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

Also read: ಮಾರ್ಚ್ 25 ರಿಂದ ಎಸ್’ಎಸ್’ಎಸ್’ಸಿ ಪರೀಕ್ಷೆ | ಜಿಲ್ಲೆಯಲ್ಲಿ ಹೇಗಿದೆ ಸಿದ್ದತೆ?
ಕೆ ಎಸ್ ಈಶ್ವರಪ್ಪ ಅವರು ಹಿರಿಯರಿದ್ದಾರೆ ಪಕ್ಷ ಕಟ್ಟುವಲ್ಲಿ ಅವರ ಪಾತ್ರ ದೊಡ್ಡದಿದೆ. ಪಕ್ಷದ ಮುಖಂಡರು ಅವರ ಮನವೊಲಿಸುವ ಕೆಲಸ ಮಾಡುತ್ತಿದ್ದಾರೆ. ಇನ್ನೂ ಸಮಯವಿದೆ. ಅವರು ಪಕ್ಷದ ತೀರ್ಮಾನವನ್ನು ಒಪ್ಪುತ್ತಾರೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

ಪ್ರತಿಸ್ಪರ್ಧಿಯ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ನನ್ನ ಪ್ರತಿಸ್ಪರ್ಧಿಯನ್ನು ಗೌರವಿಸುತ್ತೇನೆ. ಅವರನ್ನು ಹಗುರವಾಗಿ ತೆಗೆದುಕೊಳ್ಳುವುದಿಲ್ಲ. ಗದಗ ಜಿಲ್ಲೆಯಲ್ಲಿ ಗುಂಪುಗಾರಿಕೆ ಇಲ್ಲ. ಎಲ್ಲ ಮುಖಂಡರು ನನ್ನ ಜೊತೆಗಿದ್ದಾರೆ ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post