ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಮಹತ್ವದ ಬೆಳವಣಿಗೆಯೊಂದರಲ್ಲಿ ಅಬಕಾರಿ ನೀತಿಗೆ ಸಂಬಂಧಿಸಿದಂತೆ ನವದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.
ಈ ಕುರಿತಂತೆ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದ್ದು, ಇಡಿ ಅಧಿಕಾರಿಗಳು ಕೇಜ್ರಿವಾಲ್ ಅವರನ್ನುಬಂಧಿಸಿದ್ದು, ನಾಳೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ವರದಿಯಾಗಿದೆ.
ಇದೇ ವೇಳೆ ದೆಹಲಿ ಸಚಿವ ಮತ್ತು ಎಎಪಿ ನಾಯಕ ಅತಿಶಿ ಟ್ವೀಟ್ ಮಾಡಿ, ಇಡಿಯಿಂದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ರದ್ದುಗೊಳಿಸುವಂತೆ ನಾವು ಸುಪ್ರೀಂ ಕೋರ್ಟ್’ಗೆ ಹೋಗಿದ್ದೇವೆ. ಇಂದು ರಾತ್ರಿಯೇ ಸುಪ್ರೀಂ ಕೋರ್ಟ್’ನಿಂದ ಮಧ್ಯರಾತ್ರಿಯೇ ತುರ್ತು ವಿಚಾರಣೆಗೆ ನಾವು ಕೇಳಿದ್ದೇವೆ ಎಂದಿದ್ದಾರೆ.
ಹಾಲಿ ಮುಖ್ಯಮಂತ್ರಿಯೊಬ್ಬರನ್ನು ಈ ರೀತಿ ಬಂಧಿಸಿರುವುದು ದೇಶದ ಇತಿಹಾಸದಲ್ಲೇ ಪ್ರಥಮ ಎಂದು ಹೇಳಲಾಗಿದೆ.
ಇಂದು ಸಂಜೆ ಜಾರಿ ನಿರ್ದೇಶನಾಲಯದ ತಂಡವೊಂದು ದೆಹಲಿ ಮುಖ್ಯಮಂತ್ರಿಯವರ ನಿವಾಸಕ್ಕೆ ಭೇಟಿ ನೀಡಿ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿತು.
ಎಸಿಪಿ ಶ್ರೇಣಿಯ ಅಧಿಕಾರಿಗಳು ಮತ್ತು ಉತ್ತರ ಡಿಸಿಪಿ ಮನೋಜ್ ಮೀನಾ ಸೇರಿದಂತೆ ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಗಳು ಸಿಎಂ ನಿವಾಸದಲ್ಲಿದ್ದಾರೆ. ಬಂಧನಕ್ಕೂ ಮುನ್ನ ದೆಹಲಿ ಸಿಎಂ ನಿವಾಸದ ಸುತ್ತ ಭದ್ರತೆ ಹೆಚ್ಚಿಸಲಾಗಿದ್ದು, ಅರೆಸೇನಾ ಪಡೆ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಆಪ್ ಕಾರ್ಯಕರ್ತರು ಸೇರುವುದನ್ನು ತಡೆಯಲು ಆ ಪ್ರದೇಶದಲ್ಲಿ ಸೆP್ಷÀನ್ 144 ಕೂಡ ಹೇರಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post