ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ #B Y Vijayendra ಅವರು ರಾಜ್ಯದ ಜನರಲ್ಲಿ ಗೊಂದಲ ಸೃಷ್ಠಿ ಮಾಡುತ್ತಿದ್ದು, ಅವರಿಗೆ ಬೇರೆಯದೇ ಭಾಷೆಯಲ್ಲಿ ಉತ್ತರಿಸಬೇಕಾಗುತ್ತದೆ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ #K S Eshwarappa ಖಡಕ್ ಆಗಿ ಹೇಳಿದ್ದಾರೆ.
ದೆಹಲಿಯಿಂದ ಹಿಂದಿರುಗಿದ ನಂತರ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ವಿಜಯೇಂದ್ರ ರಾಜ್ಯದ ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ ಅವರಿಗೆ ಸೋಲಿನ ಭೀತಿ ಶುರುವಾಗಿದೆ. ಗೊಂದಲ ಸೃಷ್ಠಿಸುವ ಹೇಳಿಕೆ ನೀಡಿದರೆ ವಿಜಯೇಂದ್ರಗೆ ಬೇರೆಯದೇ ಭಾಷೆಯಲ್ಲಿ ಉತ್ತರಿಸಬೇಕಾಗುತ್ತದೆ ಎಂದಿದ್ದಾರೆ.
ಅಮಿಶ್ ಶಾ #Amith Shah ದೆಹಲಿಗೆ ಬರಲು ಹೇಳಿದ್ದರು. ಅಷ್ಟು ದೊಡ್ಡವರು ಕರೆದಾಗ ಗೌರವ ಕೊಟ್ಟು ದೆಹಲಿಗೆ ಹೋದೆ. ರಾಜೇಶ್ ಜಿ ಅವರ ಮನೆಗೆ ತೆರಳಲು ಸೂಚಿಸಿದ್ದರು. ನಾನು ದೆಹಲಿ ತಲುಪಿ ಅಮಿತ್ ಶಾ ಮನೆಗೆ ಫೋನ್ ಮಾಡಿದೆ. ಫೋನ್ ಮೂಲಕ ಭೇಟಿ ಅವಶ್ಯಕತೆ ಇಲ್ಲ ಎಂದು ತಿಳಿಸಿದರು. ವಾಪಸು ಮನೆಗೆ ಹೋಗಲು ತಿಳಿಸಿದರು. ಈ ಮೂಲಕ ಶಿವಮೊಗ್ಗದಲ್ಲಿ ಸ್ಪರ್ಧೆ ಮಾಡಿ ಗೆಲ್ಲಲು ಎಂದು ಸೂಚನೆ ಸಿಕ್ಕಿದೆ ಎಂದಿದ್ದಾರೆ.
Also read: ವಿಜಯಪುರ | ಫಲಿಸಿದ ಪ್ರಾರ್ಥನೆ | ಬದುಕಿ ಬಂದ ಕೊಳವೆ ಬಾವಿಯಲ್ಲಿ ಬಿದ್ದಿದ್ದ 2 ವರ್ಷದ ಕೂಸು
ಕುಟುಂಬ ರಾಜಕಾರಣ ಕಾಂಗ್ರೆಸ್ ತರಹ ಕರ್ನಾಟಕದ ಬಿಜೆಪಿ ಪಕ್ಷದಲ್ಲಿದೆ. ಹಿಂದುತ್ವ ಪರವಾದ ನಾಯಕರನ್ನು ಮೂಲೆಗುಂಪು ಮಾಡಿದ್ದಾರೆ ನನ್ನ ಹಾಗೆ ಅನೇಕರಿಗೆ ಅನ್ಯಾಯವಾಗಿದೆ. ಈ ಎಲ್ಲಾ ಪ್ರಶ್ನೆಗಳಿಗೆ ಅವರ ಬಳಿ ಉತ್ತರ ಇಲ್ಲ. ಹಾಗಾಗಿ ಭೇಟಿಯಾಗದೆ ಸ್ಪರ್ಧೆ ಮಾಡಲು ಸೂಚನೆ ಸಿಕ್ಕಂತಾಗಿದೆ ಎಂದಿದ್ದಾರೆ.
ನಾನು ಸ್ಪರ್ಧೆ ಮಾಡಿ ಗೆದ್ದು ದೆಹಲಿಗೆ ತೆರಳಿ ಮೋದಿ ಪರವಾಗಿ ಕೈಎತ್ತುತ್ತೇನೆ. ನನ್ನನ್ನು ಭೇಟಿಯಾಗದೆ ಅವರು ತೆಗೆದುಕೊಂಡ ತೀರ್ಮಾನ ರಾಜಕೀಯ ಚಾಣಾಕ್ಷನ ತೀರ್ಮಾನವಾಗಿದ್ದು ಅದನ್ನು ಸ್ವಾಗತಿಸುತ್ತೇನೆ. ಈ ಮೂಲಕ ನನಗೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಗೆಲ್ಲುವ ಸೂಚನೆ ಸಿಕ್ಕಂತಾಗಿದೆ ಅಮಿತ್ ಶಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ನಾನು ಗೀತಾ ಶಿವರಾಜ್ ಕುಮಾರ್ಬಗ್ಗೆ ಹಗುರವಾಗಿ ಮಾತನಾಡುತ್ತಿಲ್ಲ. ಮಧು ಬಂಗಾರಪ್ಪ ಮನಸ್ಸು ಮುಟ್ಟಿಕೊಂಡು ಹೇಳಲಿ ಯಡಿಯೂರಪ್ಪ ಹೊಂದಾಣಿಕೆ ರಾಜಕಾರಣ ಮಾಡುತ್ತಿಲ್ಲ ಎಂದು. ಗೀತಾ ಶಿವರಾಜ್ ಕುಮಾರ್ ಸೋದರಿ ಸಮಾನ ನಾನು ವೈಯಕ್ತಿಕವಾಗಿ ಟೀಕೆ ಮಾಡುತ್ತಿಲ್ಲ ರಾಜಕೀಯವಾಗಿ ಡಮ್ಮಿ ಕ್ಯಾಂಡಿಡೇಟ್ ಎಂದು ಹೇಳಿದ್ದೇನೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















