ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
‘ಮಾಜಿ ಮುಖ್ಯಮಂತ್ರಿ ಬಂಗಾರಪ್ಪ #Bangarappa ಅವರು ಗ್ರಾಮೀಣ ಕೃಪಾಂಕ ಕಲ್ಪಿಸಿಕೊಡುವ ಮೂಲಕ ಗ್ರಾಮೀಣ ಪ್ರದೇಶದ ಯುವಕರಿಗೆ ಉದ್ಯೋಗಕ್ಕೆ ದಾರಿ ದೀಪವಾಗಿದ್ದರು’ ಎಂದು ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ #Geetha Shivarajkumar ಹೇಳಿದರು.
ತೀರ್ಥಹಳ್ಳಿ ವಿಧಾನ ಸಭಾ ಕ್ಷೇತ್ರದ ಹಣಗೆರೆಕಟ್ಟೆ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಆಯೋಜಿಸಿದ್ದ ಲೋಕಸಭಾ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಬಂಗಾರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜಾರಿಗೆ ತಂದ ಅನೇಕ ಯೋಜನೆಗಳಾದ ಆಶ್ರಯ, ಆರಾಧನಾ ಯೋಜನೆಗಳು ಇಂದಿಗೂ ಬಡವರ ಮನದಲ್ಲಿ ಶಾಶ್ವತವಾಗಿ ಬೇರೂರಿವೆ ಎಂದರು.
Also read: ಎನ್.ಇ.ಪಿ.ಯಿಂದ ಉನ್ನತ ಶಿಕ್ಷಣದ ಗುಣಮಟ್ಟ ಹೆಚ್ಚಳ ಗುರಿ: ಡಾ. ಎಡ್ವರ್ಡ್ ಅಭಿಪ್ರಾಯ
ದೇವರಾಜು ಅರಸ್ ನಂತರ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಶ್ರಮಿಸಿದವರು. ಅವರ ಜ್ಞಾನ ಪ್ರತಿಭೆ ಅಪಾರ ವಾಗಿದ್ದು, ಆದರ್ಶ ವ್ಯಕ್ತಿಯಾಗಿ ಬಾಳಿದ ಅವರು ಬದುಕಿನಲ್ಲಿ ಹೋರಾಟ ಮನೋ ಭಾವವನ್ನು ಬೆಳೆಸಿಕೊಂಡಿದ್ದರು. ಅದೇ, ಹಾದಿಯಲ್ಲಿ ನಾನು ಸಾಗುತ್ತೇನೆ ಎಂದರು.
ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮಾತನಾಡಿ, ಗ್ಯಾರಂಟಿ ಯೋಜನೆಗಳನ್ನು ರದ್ದು ಮಾಡಲು ಬಿಜೆಪಿಯವರು ಸಂಚು ಹೂಡುತ್ತಿದ್ದಾರೆ. ಅದು ಆಗ ಕೂಡದು ಎಂದರೆ, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರಿಗೆ ಮತ ನೀಡಿ ಆಶೀರ್ವದಿಸಬೇಕು ಎಂದರು.
ಮಲೆನಾಡು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಮಾತನಾಡಿ, ಬಿ.ವೈ.ರಾಘವೇಂದ್ರ ಅವರು ಸಂಸದರಾಗಿ ಆಯ್ಕೆಗೊಂಡು ದಶಕ ಕಳೆದಿವೆ. ಇಲ್ಲಿ ಕೇಂದ್ರ ಸರ್ಕಾರದ ಹಂತದಲ್ಲಿ ಪರಿಹರಿಸಬಹುದಾದ ಅನೇಕ ಸಮಸ್ಯೆಗಳಿವೆ. ಅದರಲ್ಲಿ ಮುಖ್ಯವಾಗಿ ನೆಟ್ವರ್ಕ್ ಸಮಸ್ಯೆಯೂ ಒಂದು. ಆದರೆ, ಈ ಸಮಸ್ಯೆಗಳಿಗೆ ನ್ಯಾಯ ಒದಗಿಸಲು ಇಂದಿಗೂ ಸಾಧ್ಯವಾಗಿ ಎಂದು ದೂರಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ ಮಾತನಾಡಿ, ಹಣಗೆರೆ ಕಟ್ಟೆ ಗ್ರಾಮ ಸೌಹಾರ್ದಯುತ ಕೇಂದ್ರ. ಅದೇ ರೀತಿ, ಇಲ್ಲಿ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಕೊಡುಗೆ ಸಾಕಷ್ಟಿದೆ. ಅವದ ಋಣ ತೀರಿಸಬೇಕಾದರೆ, ಗೀತಾ ಶಿವರಾಜಕುಮಾರ್ ಅವರಿಗೆ ಬೆಂಬಲಿಸಬೇಕಿದೆ ಎಂದರು.
ಕಾಂಗ್ರೆಸ್ ಮುಖಂಡ ಸುರೇಶ್ ಕಲ್ಲುಕೊಪ್ಪ ಮಾಜಿ ಮುಖ್ಯಮಂತ್ರಿ ಅವರ ರೀತಿಯಲ್ಲಿ ಮಿಮಿಕ್ರಿ ಮಾಡಿ ರಂಜಿಸಿದರು.
ಲೋಕಸಭಾ ಚುನಾವಣೆ ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ನಟ ಶಿವರಾಜಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಡುಬ ರಾಘವೇಂದ್ರ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕೆರೆಹಳ್ಳಿ ರಾಮಪ್ಪ, ಲೋಕೇಶ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















