ಕಲ್ಪ ಮೀಡಿಯಾ ಹೌಸ್ | ಸೊರಬ |
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಕೆರೆಗೆ ನುಗ್ಗಿದ್ದು, 50ಕ್ಕೂ ಹೆಚ್ಚು ಜನರು ಸುರಕ್ಷಿತವಾಗಿ ಪಾರಾಗಿರುವಂತಹ ಘಟನೆ ತಾಲೂಕಿನ ಕುಪ್ಪಗಡ್ಡೆ ಗ್ರಾಮದ ಕೊರಕೊಡು ಕ್ರಾಸ್ ಬಳಿ ನಡೆದಿದೆ.
ಆನವಟ್ಟಿ ಇಂದ ಸೊರಬ ಮಾರ್ಗವಾಗಿ ಚಲಿಸುತಿದ್ದ ಖಾಸಗಿ ಬಸ್ಸೊಂದು, ಚಾಲಕನ ನಿಯಂತ್ರಣ ತಪ್ಪಿ ಕುಪ್ಪಗಡ್ಡೆ ಗ್ರಾಮದ ಇರ್ಪಿನ ಕೆರೆಗೆ ನುಗ್ಗಿದೆ ಕೆರೆಯಲ್ಲಿ ನೀರಿರದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಬಸ್ ಪಲ್ಟಿ ಆಗದೆ ಸರಾಗವಾಗಿ ಕೆರೆ ಪ್ರವೇಶಿಸಿ ನಿಂತು ಅಚ್ಚರಿ ಮೂಡಿಸಿ. ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.

ಅಪಘಾತದಲ್ಲಿ ಕೆಲವೊಬ್ಬರಿಗೆ ಸಣ್ಣಪುಟ್ಟ ಗಾಯಾಗಳಾಗಿದ್ದು, ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಅಪಘಾತದಲ್ಲಿ ಅದೃಷ್ಟಾವಶಾತ್ ಬಸ್’ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ, ಆನವಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post