ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನ ಸಾಮಾನ್ಯರ ನಾಡಿ ಮಿಡಿತಕ್ಕೆ ಹತ್ತಿರವಾಗಿವೆ ಎಂದು ಲೋಕಸಭಾ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ #Geetha Shivarajkumar ಹೇಳಿದರು.
ಹೊಳೆಹೊನ್ನೂರು ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಇಲ್ಲಿನ ಮೇಲಿನ ಹನಸವಾಡಿ ಹಾಗೂ ಬೇಡರಹೊಸಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೂಗೂರು ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ಗ್ರಾಮ ಪಂಚಾಯ್ತಿ ಮಟ್ಟದ ಕಾರ್ಯಕರ್ತರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ಗ್ಯಾರಂಟಿ ಯೋಜನೆಗಳ ಮೂಲಕ ಜನರ ಹಿತ ಕಾಪಾಡುತ್ತಿದೆ. ಇಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಕೆಲವರಿಂದ ಅಪಪ್ರಚಾರ ನಡೆಸಲಾಗುತ್ತಿದೆ. ಆದರೆ, ಎಲ್ಲ ಯೋಜನೆಗಳೂ ಯಶಸ್ವಿಯಾಗಿ ನಡೆಯುತ್ತಿವೆ ಎಂದರು.
ಮಾಜಿ ಮುಖ್ಯಮಂತ್ರಿ ಬಂಗಾರಪ್ಪ #Bangarappa ಅವರು ಇಲ್ಲಿ ಆರಾಧನ, ಆಶ್ರಯದಂತಹ ಯೋಜನೆಗಳನ್ನು ಜಾರಿಗೆ ತಂದು ಜನಸಾಮಾನ್ಯರಿಗೆ ನೆರಳಾಗಿದ್ದರು. ಅದೇ ಹಾದಿಯಲ್ಲಿ ನಾನು ಸಾಗುತ್ತೇನೆ ಎಂದು ಭರವಸೆ ನೀಡಿದರು.
ಕಾಂಗ್ರೆಸ್ ಮುಖಂಡ ಶ್ರೀನಿವಾಸ ಕರಿಯಣ್ಣ ಮಾತನಾಡಿ, ರಾಜ್ಯದಲ್ಲಿ ಬಡವರ ಕಣ್ಣೀರು ಒರೆಸಲು ಕಾಂಗ್ರೆಸ್ ಸರ್ಕಾರ ಶ್ರಮಿಸುತ್ತಿದೆ. ಇಲ್ಲಿ ಬಡವರ ಪಕ್ಷವಾಗಿ ಕಾಂಗ್ರೆಸ್ ಹೊಮ್ಮಿದೆ. ಇದನ್ನು ಸಹಿಸದ ಬಿಜೆಪಿ ನಾಯಕರು ಅಪಪ್ರಚಾರದಿಂದ ಚುನಾವಣೆಗೆ ಸಿದ್ದತೆ ನಡೆಸುತ್ತಿದ್ದಾರೆ ಎಂದರು.
Also read: ಮೋದಿ ಸರ್ಕಾರದ ಜನಪರ ಕಾರ್ಯಗಳನ್ನು ಮನೆಮನೆಗೂ ತಿಳಿಸಿ: ಕಾರ್ಯಕರ್ತರಿಗೆ ಡಿ.ಎಸ್. ಅರುಣ್ ಕರೆ
ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು, ಜಿಲ್ಲೆಯ ಎಲ್ಲಾ ವರ್ಗದವರನ್ನು ಸಮಾನತೆಯಿಂದ ಕಾಣುತ್ತಿದ್ದರು. ಅದೇ, ರೀತಿ ಅಭಿವೃದ್ಧಿ ವಿಚಾರದಲ್ಲಿ ಎಂದಿಗೂ ರಾಜಿ ಆಗಿರಲಿಲ್ಲ. ಇದರ ಋಣ ತೀರಿಸಲು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರಿಗೆ ಮತ ನೀಡಬೇಕು ಎಂದರು.
ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾ ಅಧ್ಯಕ್ಷ ಎನ್. ರಮೇಶ್ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಡಿಗೆ ಶಕ್ತಿಯಾಗಿ ನಿಂತಿದ್ದಾರೆ. ಜಿಲ್ಲೆಯಲ್ಲಿ ಅದೇ ಹಾದಿಯಲ್ಲಿ ಸಾಗಲು ಗೀತಾ ಶಿವರಾಜಕುಮಾರ್ ಅವರಿಗೆ ಮತ ನೀಡಿ ಶಕ್ತಿ ತುಂಬಬೇಕಿದೆ ಎಂದರು.
ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ಹರಮ್ಮಘಟ್ಟ, ಕೊಮ್ಮನಾಳ್, ಹೊಳಲೂರು, ಹಾಡೋನಹಳ್ಳಿಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪ್ರಚಾರ ಸಭೆ ನಡೆಸಿದರು.
ಲೋಕಸಭಾ ಚುನಾವಣೆ ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ಬೋವಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್, ಹೊಳೆಹೊನ್ನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತ, ಎಸ್. ತೀರ್ಥಪ್ಪ, ವೈ.ಎಚ್. ನಾಗರಾಜ, ಶಾಂತವೀರ ನಾಯ್ಕ್, ತಿಮ್ಮಣ್ಣ, ದಿನೇಶ್ ಪಾಟೀಲ್, ಗಿರೀಶ್, ಧರ್ಮಣ್ಣ, ಶಿವಾನಂದ, ವೀರೇಶ್, ಹನುಮಂತ ನಾಯ್ಕ್, ಲೋಕೇಶ್, ಮಂಜು ಮೇಸ್ತ್ರಿ, ಸಂದೀಪ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post