ಕಲ್ಪ ಮೀಡಿಯಾ ಹೌಸ್ | ಮಂಡ್ಯ |
ತಳ್ಳುವ ಗಾಡಿಯಿಂದ ಸಿಗುವ ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಸಾವನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ.
ಪೂಜಾ, ಪ್ರಸನ್ನ ದಂಪತಿ ಮಕ್ಕಳಾದ ತ್ರಿಶುಲ್ ಹಾಗೂ ತ್ರಿಶ ಸಾವನ್ನಪ್ಪಿದ ಮಕ್ಕಳು. ನಿನ್ನೆ ಮಧ್ಯಾಹ್ನ ತಳ್ಳುವ ಗಾಡಿಯಾತನಿಂದ ಮಕ್ಕಳಿಗೆ ತಾಯಿ ಐಸ್ಕ್ರೀಂ ಕೊಡಿಸಿದ್ದರು. ಆನಂತರ ಮಕ್ಕಳು ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ ಎನ್ನಲಾಗಿದೆ.
Also read: ರಾಘವೇಂದ್ರ ಶಕ್ತಿ ಪ್ರದರ್ಶನ | ಹರಿದು ಬಂದ ಜನಸಾಗರ | ರಾರಾಜಿಸಿದ ಬಿಜೆಪಿ-ಜೆಡಿಎಸ್ ಬಾವುಟ
ಗ್ರಾಮದಲ್ಲಿ ಬೇರೆ ಮಕ್ಕಳು ಕೂಡ ಐಸ್ಕ್ರೀಂ ತಿಂದಿದ್ದರು. ಐಸ್ಕ್ರೀಂ ತಿಂದ ಬೇರೆ ಯಾರಿಗೂ ತೊಂದರೆ ಆಗಿಲ್ಲ. ಅವಳಿ ಮಕ್ಕಳ ಸಾವಿಗೆ ಇದುವರೆಗೂ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆ ನಂತರ ನಿಖರ ಕಾರಣ ತಿಳಿಯಲಿದೆ. ಮಿಮ್ಸ್ ಆಸ್ಪತ್ರೆಗೆ ಶವಗಳನ್ನು ರವಾನಿಸಲಾಗಿದೆ. ಅರಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news






















