ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನಿರೀಕ್ಷೆಯಂತೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ #H D Kumaraswamy ಅವರಿಗೆ ಕೈಕೊಟ್ಟ ಸುಮಲತಾ ಅಂಬರೀಶ್, #Sumalatha Ambrish ಮಂಡ್ಯ ಪ್ರಚಾರ ರದ್ದು ಮಾಡಿ, ಬೆಂಗಳೂರಿನಲ್ಲೇ ಉಳಿದಿದಾರೆ.
ಇಂದಿನ ಪ್ರಚಾರವನ್ನು ಏಕಾಏಕಿ ಯಾವುದೇ ಕಾರಣ ನೀಡದೇ ರದ್ದು ಮಾಡಿರುವ ಸುಮಲತಾ ಅವರು, ಮಂಡ್ಯಕ್ಕೆ ತೆರಳದೇ ಬೆಂಗಳೂರಿನಲ್ಲೇ ಉಳಿದಿದ್ದಾರೆ.
ಬಿಜೆಪಿ-ಜೆಡಿಎಸ್ ಮೈತ್ರಿ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಗಾಗಿ ಎಚ್.ಡಿ. ಕುಮಾರಸ್ವಾಮಿ ಅವರ ಪರವಾಗಿ ಸುಮಲತಾ ಅವರು ಪ್ರಚಾರ ನಡೆಸಿ, ಮತಯಾಚನೆ ಮಾಡುವ ಕಾರ್ಯಕ್ರಮ ನಿಗದಿಯಾಗಿತ್ತು.
ಮಂಡ್ಯ ಸಂಸದೆಯಾಗಿ ಇಲ್ಲಿಯವರೆಗೆ ಹೆಚ್ಡಿಕೆ ಜೊತೆ ಪ್ರಚಾರದಲ್ಲಿ ಕಾಣಿಸಿಲ್ಲ. ಸುಮಲತಾ ನಡೆ ಬಗ್ಗೆ ದೋಸ್ತಿ ಪಾಳಯದಲ್ಲಿ ಈಗ ಭಾರೀ ಚರ್ಚೆ ನಡೆಯುತ್ತಿದೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರವಾಗಿ ನಿಂತಿದ್ದ ಸುಮಲತಾಗೆ ಬಿಜೆಪಿ ಬೆಂಬಲ ನೀಡಿತ್ತು. ಈ ಬಾರಿ ಸುಮಲತಾ ಮಂಡ್ಯ ಟಿಕೆಟ್ ಆಕಾಂಕ್ಷಿ ಆಗಿದ್ದರು. ಆದರೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಟಿಕೆಟ್ ನೀಡಲಾಗಿದೆ.
ಆದರೆ, ಇಂದು ಕುಮಾರಸ್ವಾಮಿ ಪರವಾಗಿ ಪ್ರಚಾರವನ್ನು ಏಕಾಏಕಿ ರದ್ದು ಮಾಡಿರುವುದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post