ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಚಿಂತಕರ ಚಾವಡಿ, ಪ್ರಬುದ್ಧರ ಸದನ ಎಂದೇ ಕರೆಯಲ್ಪಡುವ ವಿಧಾನ ಪರಿಷತ್ತಿಗೆ ಪ್ರಬುದ್ಧರನ್ನು ಆಯ್ಕೆ ಮಾಡಿ ಎಂದು ಸಂಸದ ಬಿ.ವೈ. ರಾಘವೇಂದ್ರ #B Y Raghavendra ಕರೆ ನೀಡಿದರು.
ವಿಧಾನ ಪರಿಷತ್ ನ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಇಂದು ಶಿಕಾರಿಪುರದ ಮಂಗಳ ಭವನದಲ್ಲಿ ಬಿಜೆಪಿ ಶಿಕಾರಿಪುರ ಮಂಡಲ ಆಯೋಜಿಸಿದ್ದ ಪ್ರಮುಖ ಕಾರ್ಯಕರ್ತರ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು.

Also read: ಶಿವಮೊಗ್ಗ | ಗಾಜನೂರು ಸಮೀಪ ಕಾರು ಪಲ್ಟಿ | ವಿದ್ಯಾನಗರದ ಯುವಕ ಸಾವು, ಐವರಿಗೆ ಗಾಯ
ಚುನಾವಣೆಯ ದೃಷ್ಟಿಯಿಂದ ಹಲವಾರು ಸಂಘಟನಾತ್ಮಕ ವಿಚಾರಗಳ ಕುರಿತು ಚರ್ಚೆ ನಡೆಸಿ ನಮ್ಮ ಅಭ್ಯರ್ಥಿಗಳ ಗೆಲುವಿಗೆ ಶ್ರಮ ವಹಿಸುವಂತೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಹನುಮಂತಪ್ಪ, ಹರಿಕೃಷ್ಣ, ರೇವಣಪ್ಪ, ವೀರೇಂದ್ರ ಪಾಟೀಲ್, ಸಿದ್ದಲಿಂಗ, ಭೂಕಾಂತ್, ಮೋಹನ್, ಮಹೇಶ್ ಸೇರಿದಂತೆ ಹಲವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news














Discussion about this post