ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ಜೂ.3ರಂದು ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ವಿಶೇಷ ಸಿದ್ಧತೆಗಳು ನಡೆದಿವೆ ಎಂದು ಬಿಜೆಪಿ ಪ್ರಕೋಷ್ಠದ ರಾಜ್ಯ ಸಂಚಾಲಕ ಎಸ್. ದತ್ತಾತ್ರಿ #Dattatri ತಿಳಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ವೈಶಿಷ್ಠ್ಯಪೂರ್ಣ ಪಕ್ಷವಾಗಿದ್ದು, ಕಾರ್ಯಕರ್ತರ ಶಕ್ತಿ ಹಾಗೂ ಆಧಾರದ ಮೇಲಿದೆ ಎಂದರು.
ಇದುವರೆಗೂ ನಡೆದ ನೈರುತ್ಯ ಪದವೀಧರ ಕ್ಷೇತ್ರಕ್ಕೆ #Southwest Graduation Constituency ನಡೆದ 6 ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳೇ ಆಯ್ಕೆಯಾಗುತ್ತಿದ್ದಾರೆ. ಅದೇ ರೀತಿ ಶಿಕ್ಷಕರ ಕ್ಷೇತ್ರದಲ್ಲಿ 4 ಬಾರಿ ಬಿಜೆಪಿ, ಎರಡು ಬಾರಿ ಇತರೆ ಪಕ್ಷದ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದರು.
ಮೈತ್ರಿಯಿಂದಾಗಿ ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಡಲಾಗಿದೆ. ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಸಾಮಾಜಿಕ ಸೇವೆಯಲ್ಲಿ ತೊಡಗಿದ್ದಾರೆ. ಅವರು ವೈದ್ಯಕೀಯ ಕ್ಷೇತ್ರದಲ್ಲಿ ಹೆಸರು ಗಳಿಸಿರುವುದರಿಂದ ಅವರಿಗೆ ಟಿಕೇಟ್ ನೀಡಲಾಗಿದೆ ಎಂದರು.
ಪದವೀಧರ ಕ್ಷೇತ್ರದಲ್ಲಿ ಈ ಬಾರಿ 85090 ಮತದಾರರಿದ್ದಾರೆ. 20ಮತದಾರರಿಗೊಬ್ಬರಂತೆ ಪಕ್ಷದ ಘಟನಾಯಕರನ್ನು ನೇಮಕ ಮಾಡಿದ್ದು, ಅವರು ಪ್ರತಿ ಮತದಾರರನ್ನು ಭೇಟಿ ಮಾಡಿ ಮತದಾನ ಮಾಡುವಂತೆ ಮನವಿ ಮಾಡಿಕೊಳ್ಳಲಿದ್ದಾರೆ. ಮತದಾನನಂದು ಮತ ಕೇಂದ್ರಕ್ಕೆ ಬರುವಂತೆ ನೋಡಿಕೊಳ್ಳಲಿದ್ದಾರೆ ಎಂದರು.
Also read: ಮೇ 28-29 | ಪ್ರೆಸ್ ಕಾಲೋನಿಯ ದೊಡ್ಡಮ್ಮದೇವಿಯ ಕೆಂಡದಾರ್ಚನೆ, ದೇವಿಯ ಆರಾಧನ ಪೂಜೆ
ನೈರುತ್ಯ ಕ್ಷೇತ್ರಕ್ಕೆ ಐದೂವರೆ ಜಿಲ್ಲೆಗಳು ಬರಲಿದ್ದು, ಕ್ಷೇತ್ರದಲ್ಲಿ 14 ಬಿಜೆಪಿ ಶಾಸಕರು, 2 ಎಂಎಲ್ಸಿಗಳು ಅದೇ ರೀತಿ ಕಾಂಗ್ರೆಸ್ನಲ್ಲಿ 15 ಶಾಸಕರಿದ್ದಾರೆ ಎಂದ ಅವರು, ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರು, ಮೇ 26,27,28 ರಂದು ಕ್ಷೇತ್ರದಲ್ಲಿ ಪ್ರವಾಸ ಮಾಡಲಿದ್ದು, ಅದೇ ರೀತಿ ಜೂ.1ರಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸಹ ಪ್ರವಾಸ ಮಾಡಲಿದ್ದಾರೆ ಎಂದರು.
ಚುನಾವಣೆಯಲ್ಲಿ ಕಾರ್ಯತಂತ್ರ ಚಟುವಟಿಕೆ ನಡೆಯಲಿದೆ. ಡಾ. ಧನಂಜಯ ಸರ್ಜಿ ಅವರು, 15 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ಅದೇ ರೀತಿ ಮೈತ್ರಿ ಅಭ್ಯರ್ಥಿ ಜೆಡಿಎಸ್ನ ಬೋಜೇಗೌಡರು ಸಹ ಗೆಲುವು ಖಚಿತ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಋಷಿಕೇಶ್ ಪೈ, ರತ್ನಾಕರ್ ಶೆಣೈ, ಸುರೇಖಾ ಮುರಳೀಧರ್, ಬಿ.ಆರ್. ಮಧುಸೂದನ್, ಪದ್ಮಿನಿರಾವ್, ಸುದೀಂಧ್ರ ಕಟ್ಟೆ, ಸುಬ್ರಹ್ಮಣ್ಯ, ಪ್ರಕಾಶ್, ರಾಘವೇಂದ್ರಾಚಾರ್, ಕೆ.ವಿ.ಕೃಷ್ಣಮೂರ್ತಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news























