ಕಲ್ಪ ಮೀಡಿಯಾ ಹೌಸ್ | ಉಡುಪಿ |
ವಿಧಾನ ಪರಿಷತ್ ನೈಋತ್ಯ ಪದವೀಧರರ ಕ್ಷೇತ್ರದ #Sourthwestern Graduate Constituency ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ #Dr. Dhananjaya Sarji ಹಾಗೂ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಅವರು ದಣಿವಿಲ್ಲದೇ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಠಾಧೀಶರನ್ನೂ ಸಹ ಭೇಟಿಯಾಗಿ ಆರ್ಶೀವಾದ ಪಡೆಯುತ್ತಿದ್ದಾರೆ.
ಮಠಮಾನ್ಯಗಳಿಗೆ ಭೇಟಿ
ಉಡುಪಿ ಜಿಲ್ಲೆಯ ಆನೆಗೊಂದಿ ಮಹಾ ಸಂಸ್ಥಾನ ಸರಸ್ವತೀ ಪೀಠದ ಅನಂತ ಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಯವರನ್ನು ಇಬ್ಬರು ಅಭ್ಯರ್ಥಿಗಳು ಭೇಟಿಯಾಗಿ ಆರ್ಶೀವಾದ ಪಡೆದರು.

ಉಡುಪಿ ಘಟನಾಯಕರ ಸಭೆ
ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕಿದಿಯೂರು ಹೋಟೆಲ್ ಮಾಧವ ಕೃಷ್ಣ ಸಭಾಭವನದಲ್ಲಿ ಚುನವಣಾ ಪೂರ್ವ ತಯಾರಿಯ ಕುರಿತು ಸಭೆ ನಡೆಯಿತು.
ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ . ವಿಜಯೇಂದ್ರ ಅವರ ನೇತೃತ್ವದಲ್ಲಿ ಘಟನಾಯಕರ ಸಭೆ ನಡೆಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















Discussion about this post