Tuesday, July 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ಜ್ಞಾನಕ್ಕೆ ಪ್ರಪಂಚದ ಎಲ್ಲೆಡೆ ಮಾನ್ಯತೆ | ಮಂತ್ರಾಲಯ ಸುಬುಧೇಂದ್ರ ತೀರ್ಥ ಶ್ರೀ ಸಂದೇಶ

ಸೋಸಲೆ ವ್ಯಾಸರಾಜರ ಮಠದ ಶ್ರೀಮನ್ ನ್ಯಾಯ ಸುಧಾಮಂಗಳ ಮಹೋತ್ಸವ ಆರಂಭ

June 3, 2024
in ಮೈಸೂರು
0 0
0
ನಗರದ ಕೃಷ್ಣಮೂರ್ತಿಪುರಂನ ವ್ಯಾಸತೀರ್ಥ ವಿದ್ಯಾಪೀಠದಲ್ಲಿ ಭಾನುವಾರ ಸೋಸಲೆ ಮಠ ಹಮ್ಮಿಕೊಂಡಿದ್ದ ಶ್ರೀ ಮನ್ ನ್ಯಾಯ ಸುಧಾ ಮಂಗಳ ಮಹೋತ್ಸವ ಉದ್ಘಾಟನೆ ಸಂದರ್ಭ ಮಂತ್ರಾಲಯ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ,  ಸೋಸಲೆ ಮಠದ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ,   ಸೌಮಿತ್ರಿ ಆಚಾರ್ಯ, ಸುಘೋಷ, ಪ್ರಣವ ಆಚಾರ್ಯ ಮತ್ತು  ಆಯಾಚಿತ ಶ್ರೀಶ ಆಚಾರ್ಯ ಇದ್ದರು.

ನಗರದ ಕೃಷ್ಣಮೂರ್ತಿಪುರಂನ ವ್ಯಾಸತೀರ್ಥ ವಿದ್ಯಾಪೀಠದಲ್ಲಿ ಭಾನುವಾರ ಸೋಸಲೆ ಮಠ ಹಮ್ಮಿಕೊಂಡಿದ್ದ ಶ್ರೀ ಮನ್ ನ್ಯಾಯ ಸುಧಾ ಮಂಗಳ ಮಹೋತ್ಸವ ಉದ್ಘಾಟನೆ ಸಂದರ್ಭ ಮಂತ್ರಾಲಯ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ , ಸೋಸಲೆ ಮಠದ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ, ಸೌಮಿತ್ರಿ ಆಚಾರ್ಯ, ಸುಘೋಷ, ಪ್ರಣವ ಆಚಾರ್ಯ ಮತ್ತು ಆಯಾಚಿತ ಶ್ರೀಶ ಆಚಾರ್ಯ ಇದ್ದರು.

Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಶಾಸ್ತ್ರ ಜ್ಞಾನಕ್ಕೆ ಪ್ರಪಂಚದ ಎಲ್ಲೆಡೆ ಮಾನ್ಯತೆ ಇದೆ. ಹಾಗಾಗಿ ವಿದ್ಯಾರ್ಥಿಗಳು ವೇದ ವಿದ್ಯೆ ಸಂಪಾದನೆಗೆ ಶ್ರಮಿಸಬೇಕು ಎಂದು ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಹೇಳಿದರು.

ಕೃಷ್ಣಮೂರ್ತಿಪುರಂನ ಶ್ರೀ ವ್ಯಾಸತೀರ್ಥ ವಿದ್ಯಾಪೀಠದಲ್ಲಿ ಸೋಸಲೆ ಶ್ರೀ ವ್ಯಾಸರಾಜ ಮಠ ಹಮ್ಮಿಕೊಂಡಿರುವ ಶ್ರೀಮನ್ ನ್ಯಾಯ ಸುಧಾ ಮಂಗಳ ಮಹೋತ್ಸವಕ್ಕೆ ಭಾನುವಾರ ಸಂಜೆ ಚಾಲನೆ ನೀಡಿದ ನಂತರ ಅವರು ಆಶೀರ್ವಚನ ನೀಡಿದರು.

ನಗರದ ಕೃಷ್ಣಮೂರ್ತಿಪುರಂ ಶ್ರೀ ವ್ಯಾಸ ತೀರ್ಥ ವಿದ್ಯಾಪೀಠದಲ್ಲಿ ಸೋಸಲೆ ವ್ಯಾಸರಾಜರ ಮಹಾಸಂಸ್ಥಾನ ಹಮ್ಮಿಕೊಂಡಿರುವ ಶ್ರೀಮನ್ ನ್ಯಾಯ ಸುಧಾ ಮಂಗಳ ಮಹೋತ್ಸವಕ್ಕೆ ಭಾನುವಾರ ಸಂಜೆ ಆಗಮಿಸಿದ ಮಂತ್ರಾಲಯ ಮಠಾಧೀಶರಾದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರನ್ನು ಪೂರ್ಣ ಕುಂಭ ಸಹಿತ ಸ್ವಾಗತಿಸಲಾಯಿತು. ವಿದ್ಯಾಪೀಠದ ಗೌರವ ಕಾರ್ಯದರ್ಶಿ ಡಾ. ಡಿ.ಪಿ. ಮಧುಸೂಧನಾಚಾರ್ಯ, ಪಂಡಿತ ರಾಮಾಚಾರ್ಯ ಮತ್ತು ಹಿರಿಯ ವಿದ್ವಾಂಸ
ಬಿದರಹಳ್ಳಿ ಕೃಷ್ಣಾಚಾರ್ಯ ಇತರರು ಹಾಜರಿದ್ದರು.

ಸೋಸಲೆ ವಿದ್ಯಾಪೀಠದ ವಿದ್ಯಾರ್ಥಿಗಳು ಸಮರ್ಥವಾಗಿ ಅಧ್ಯಯನ ನಡೆಸಿ ಶ್ರೀ ಜಯತೀರ್ಥರು ರಚಿಸಿದ ಸುಧಾ ಗ್ರಂಥದ ಬಗ್ಗೆ ಉತ್ತಮ ವ್ಯಾಖ್ಯಾನ ನೀಡಿದ್ದಾರೆ. ಸೋಸಲೆ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಈ ವಿದ್ಯಾರ್ಥಿಗಳಿಗೆ ಪಾಠ, ಪ್ರವಚನ ಮಾಡಿ ವಿದ್ಯಾರ್ಜನೆಗೆ ಶ್ರಮಿಸಿದ್ದಾರೆ. ಇದು ಯತಿಗಳು ಮುಂದಿನ ಪೀಳಿಗೆಗೆ ಮಾಡುವ ಮಾದರಿ ಕಾರ್ಯ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳು ನಿರ್ಭೀತಿಯಿಂದ, ಸಂಸ್ಕೃತದಲ್ಲಿ ಸುಲಲಿತವಾಗಿ ವಿಷಯದ ಅನುವಾದ, ವ್ಯಾಖ್ಯಾನ ಮತ್ತು ಮಂಡನೆ ಮಾಡುವ ಶೈಲಿಯನ್ನು ಕರಗತ ಮಾಡಿಕೊಂಡರೆ ಮುಂಬರುವ ದಿನಗಳಲ್ಲಿ ನಾಡಿನ ಖ್ಯಾತ ವಿದ್ವಾಂಸರಾಗಬಹುದು ಎಂದರು.
ಇಂದು ಸುಧಾ ಪರೀಕ್ಷೆ ನೀಡಿದ ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ಸಾಧನಾ ಮಾರ್ಗದಲ್ಲಿ ಇದ್ದಾರೆ. ಪುಸ್ತಕ ನಿರಪೇಕ್ಷವಾಗಿ ವಿದ್ಯಾರ್ಥಿಗಳು ಮುಕ್ತ ಸಭೆಯಲ್ಲಿ ಪಂಡಿತರ ಪ್ರಶ್ನೆಗಳಿಗೆ ಉತ್ತರಗಳನ್ನು ನೀಡಿದ್ದಾರೆ. ಇದು ಅವರ ಕೌಶಲ ಮತ್ತು ಜ್ಞಾನದ ಉತ್ತಮ ಹಂತದ ದರ್ಶನ ಮಾಡಿಸಿದೆ ಎಂದು ಮಂತ್ರಾಲಯ ಶ್ರೀಗಳು ನುಡಿದರು.

ಸೋಸಲೆ ಮಠದ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ವಿದ್ವತ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸೋಸಲೆ ಶ್ರೀ ವ್ಯಾಸರಾಜ ಮಠದ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ನೇತೃತ್ವದಲ್ಲಿ ಗುರುಕುಲ ಪದ್ಧತಿ ಅಧ್ಯಯನ ಮಾಡಿದ ಹಿರಿಯ ವಿದ್ಯಾರ್ಥಿಗಳಾದ ಸುಘೋಷ ಆಚಾರ್ಯ ಮತ್ತು ಪ್ರಣವ ಆಚಾರ್ಯ ಅವರು ಶ್ರೀಮನ್ ನ್ಯಾಯಸುಧಾ ಗ್ರಂಥದ ನವಿ ಲಕ್ಷಣತ್ವಾಧಿಕರಣದ ಮೌಖಿಕ ಪರೀಕ್ಷೆಯನ್ನು ಎದುರಿಸಿ ಪಂಡಿತರ ಪ್ರಶ್ನೆಗಳಿಗೆ ಸೂಕ್ತವಾದ ಉತ್ತರ ನೀಡಿದರು.
ಪಂಡಿತ, ವಿದ್ವಾಂಸರ ಉಪಸ್ಥಿತಿ
ಮಂತ್ರಾಲಯದ ಹಿರಿಯ ವಿದ್ವಾಂಸರಾದ ಮಹಾಮಹೋಪಾಧ್ಯಾಯ ರಾಜಾ ಎಸ್. ಗಿರಿ ಆಚಾರ್ಯ, ಗುರುಸಾರ್ವಭೌಮ ವಿದ್ಯಾಪೀಠದ ಪ್ರಾಚಾರ್ಯ ವಾದಿರಾಜ ಆಚಾರ್ಯ, ಶ್ರೀನಿವಾಸಮೂರ್ತಿ ಆಚಾರ್ಯ, ಬೆಂಗಳೂರಿನ ಪೇಜಾವರ ವಿದ್ಯಾಪೀಠದ ಪ್ರಾಧ್ಯಾಪಕ ಪಂಡಿತ ಮಾತರಿಶ್ವಾಚಾರ್ಯ, ವ್ಯಾಸತೀರ್ಥ ವಿದ್ಯಾಪೀಠದ ಪ್ರಾಂಶುಪಾಲ ಶ್ರೀನಿಧಿ ಆಚಾರ್ಯ ಪ್ಯಾಟಿ, ಹಿರಿಯರಾದ ವಿದ್ವಾಂಸ ಶೇಷಗಿರಿ ಆಚಾರ್ಯ, ವ್ಯಾಸತೀರ್ಥ ವಿದ್ಯಾಪೀಠದ ಗೌರವ ಕಾರ್ಯದರ್ಶಿ ಡಾ.ಡಿ.ಪಿ. ಮಧುಸೂದನಾಚಾರ್ಯ ಇತರರು ಹಾಜರಿದ್ದರು.

ಮಂತ್ರಾಲಯ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರನ್ನು ಮಠದ ವಿದ್ವಾಂಸರು ವೇದ ಘೋಷದೊಂದಿಗೆ ಸ್ವಾಗತಿಸಿದರು. ಹಿರಿಯರಾದ ವಿದ್ವಾಂಸ ಶೇಷಗಿರಿ ಆಚಾರ್ಯ, ಬಿದರಹಳ್ಳಿ ಕೃಷ್ಣಾಚಾರ್ಯ, ವ್ಯಾಸತೀರ್ಥ ವಿದ್ಯಾಪೀಠದ ಗೌರವ ಕಾರ್ಯದರ್ಶಿ ಡಾ.ಡಿ.ಪಿ. ಮಧುಸೂದನಾಚಾರ್ಯ ಇತರರು ಹಾಜರಿದ್ದರು.

ಇಂದಿನ ಕಾರ್ಯಕ್ರಮ
ಜೂನ್ 3ರಂದು ದಿನಪೂರ್ಣ ನಾಲ್ವರು ವಿದ್ಯಾರ್ಥಿಗಳಿಗೆ ಶ್ರೀ ಸುಧಾ ಗ್ರಂಥದ ಮೇಲಿನ ಮೌಖಿಕ ಪರೀಕ್ಷೆ, ವ್ಯಾಖ್ಯಾನಗಳು ನಡೆಯಲಿದೆ.

ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನದ ಶ್ರೀ ಸತ್ಯಾತ್ಮ ತೀರ್ಥರು, ಮುಳಬಾಗಿಲು ಶ್ರೀಪಾದರಾಜರ ಮಠದ ಶ್ರೀ ಸುಜಯನಿಧಿ ತೀರ್ಥರು, ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥರು ತಮ್ಮ ತಮ್ಮ ಸಂಸ್ಥಾನ ದೇವರುಗಳಿಗೆ ಪೂಜೆ ಸಮರ್ಪಿಸಲಿದ್ದಾರೆ. ನಂತರ ವಿದ್ವತ್ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸೋಸಲೆ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ನೇತೃತ್ವದಲ್ಲಿ ಇಡೀ ದಿನದ ಕಲಾಪ ಸಂಪನ್ನಗೊಳ್ಳಿದೆ. ನಾಡಿನ ವಿವಿಧ ಮಠ- ಪೀಠದ ವಿದ್ವಾಂಸರು ಭಾಗವಹಿಸಲಿದ್ದಾರೆ.

ರಂಜಿಸಲಿದೆ ದಾಸವಾಣಿ
ಸೋಮವಾರ ಸಂಜೆ 6ಕ್ಕೆ ವಿದ್ವಾನ್ ಸಮೀರಾಚಾರ್ಯರಿಂದ ದಾಸವಾಣಿ ಸಂಗೀತ ಕಚೇರಿ ನಡೆಯಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteLatest News KannadaMantralayamysoreNyayasudha MangalaSosaleVidyapeethaVyasaraja Mathaನ್ಯಾಯ ಸುಧಾ ಮಂಗಳಮಂತ್ರಾಲಯಮೈಸೂರುವಿದ್ಯಾಪೀಠಶ್ರೀ ಜಯತೀರ್ಥರುಶ್ರೀ ರಾಘವೇಂದ್ರ ಸ್ವಾಮಿಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿಶ್ರೀ ವ್ಯಾಸರಾಜ ಮಠಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಸೋಸಲೆ
Previous Post

Exit Poll 2024 | ತಮಿಳುನಾಡಿನಲ್ಲಿ ಇತಿಹಾಸ ನಿರ್ಮಿಸಲಿದೆ ಬಿಜೆಪಿ | ಅಣ್ಣಾಮಲೈ ಕಮಾಲ್

Next Post

ಭದ್ರಾವತಿ: ಕ್ಷುಲ್ಲಕ ಕಾರಣಕ್ಕಾಗಿ ವೃದ್ಧನ ಹತ್ಯೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿ: ಕ್ಷುಲ್ಲಕ ಕಾರಣಕ್ಕಾಗಿ ವೃದ್ಧನ ಹತ್ಯೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮಕ್ಕಳ ಹಲ್ಲಿನ ಆರೋಗ್ಯದ ಬಗ್ಗೆ ಗಮನವಿರಿಸಿ: ಡಾ. ಸೌಮ್ಯ

July 1, 2025

ಕಲಾತ್ಮಕತೆ ಪ್ರದರ್ಶಿಸುವ ಜಾಗತಿಕ ಗುಣಮಟ್ಟದ ಸಿನಿಮಾಗಳು ಅಗತ್ಯ: ಪ್ರೊ. ಶರತ್ ಅನಂತಮೂರ್ತಿ

July 1, 2025

ಚಿಕ್ಕಮಗಳೂರಿನಿಂದ ತಿರುಪತಿಗೆ ನೇರ ನೂತನ ರೈಲು | ಯಾವತ್ತು ಸಂಚಾರ? ಎಲ್ಲೆಲ್ಲಿ ನಿಲುಗಡೆ?

July 1, 2025

ಜು.2 : ಕುವೆಂಪು ವಿವಿ 38ನೇ ಸಂಸ್ಥಾಪನಾ ದಿನಾಚರಣೆ

July 1, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮಕ್ಕಳ ಹಲ್ಲಿನ ಆರೋಗ್ಯದ ಬಗ್ಗೆ ಗಮನವಿರಿಸಿ: ಡಾ. ಸೌಮ್ಯ

July 1, 2025

ಕಲಾತ್ಮಕತೆ ಪ್ರದರ್ಶಿಸುವ ಜಾಗತಿಕ ಗುಣಮಟ್ಟದ ಸಿನಿಮಾಗಳು ಅಗತ್ಯ: ಪ್ರೊ. ಶರತ್ ಅನಂತಮೂರ್ತಿ

July 1, 2025

ಚಿಕ್ಕಮಗಳೂರಿನಿಂದ ತಿರುಪತಿಗೆ ನೇರ ನೂತನ ರೈಲು | ಯಾವತ್ತು ಸಂಚಾರ? ಎಲ್ಲೆಲ್ಲಿ ನಿಲುಗಡೆ?

July 1, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!