No Result
View All Result
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ
English Articles

Duniya Vijay, Rachita Ram & Raj B. Shetty’s Landlord Premieres This Saturday on Zee Kannada

by ಕಲ್ಪ ನ್ಯೂಸ್
May 22, 2026
0

Kalpa Media House  |  Bengaluru | Zee Kannada has always captivated its audience with unique content, offering engaging fiction stories,...

Read moreDetails
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
  • Advertise With Us
  • Grievances
  • About Us
  • Contact Us
Friday, May 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಗುರುವಿನ ಅನುಸರಣೆಯಿಂದ ಜೀವನ ಕ್ರಮದ ಮಾರ್ಗ ಕಲಿಕೆ ಸಾಧ್ಯ: ಸತ್ಯಾತ್ಮತೀರ್ಥ ಸ್ವಾಮೀಜಿ

ಶ್ರೀ ಸೋಸಲೆ ವ್ಯಾಸರಾಜರ ಮಠ ಶ್ರೀಮನ್ ನ್ಯಾಯ ಸುಧಾ ಮಂಗಳ ಮಹೋತ್ಸವ ಶುಕ್ರವಾರದ ಕಲಾಪಗಳು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 8, 2024
in ಮೈಸೂರು
0
ಗುರುವಿನ ಅನುಸರಣೆಯಿಂದ ಜೀವನ ಕ್ರಮದ ಮಾರ್ಗ ಕಲಿಕೆ ಸಾಧ್ಯ: ಸತ್ಯಾತ್ಮತೀರ್ಥ ಸ್ವಾಮೀಜಿ

ಸಮಾರಂಭದಲ್ಲಿ ಉಡುಪಿ ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ, ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ, ಸೋಸಲೆ ವ್ಯಾಸರಾಜ ಮಠದ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ , ಮುಳಬಾಗಿಲು ಶ್ರೀಪಾದರಾಜರ ಮಠದ ಶ್ರೀ ಸುಜಯ ನಿಧಿ ತೀರ್ಥ ಸ್ವಾಮೀಜಿ ಇದ್ದರು.

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಗುರುಗಳ ಅನುಗ್ರಹವಿದ್ದರೆ ಜೀವನದಲ್ಲಿ ಎಲ್ಲ ಸಾಧನೆಗಳೂ ಸುಲಭ ಎಂದು ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಉತ್ತರಾದಿ ಮಠದ ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ಹೇಳಿದರು.

ಅವರು ಜೆಪಿ ನಗರದ ವಿಠಲಧಾಮದ ಭವ್ಯ ವೇದಿಕೆಯಲ್ಲಿ ಶ್ರೀ ಸೋಸಲೆ ವ್ಯಾಸರಾಜ ಮಠ ಆಯೋಜನೆ ಮಾಡಿರುವ ಶ್ರೀಮನ್ ನ್ಯಾಯ ಸುಧಾ ಮಂಗಳ ಮಹೋತ್ಸವದ ಶುಕ್ರವಾರದ ವಿದ್ವತ್ ಸಭೆಯಲ್ಲಿ ಆಶೀರ್ವಚನ ನೀಡಿದರು.
ವಿದ್ಯಾರ್ಥಿಗಳು ಶ್ರಮ ವಹಿಸಿ ಅಧ್ಯಯನ ಮಾಡಿರುವುದು ಒಂದೆಡೆಯಾದರೆ ಅವರಲ್ಲಿ ಧೈರ್ಯ, ಸದಾಚಾರ, ಸಂಸ್ಕಾರ, ನೈತಿಕತೆ ಮತ್ತು ಜೀವನ ಕ್ರಮದ ಮಾರ್ಗವನ್ನು ಕಲಿಯುವುದು ಗುರುವಿನ ಅನುಸರಣೆಯಿಂದ ಮಾತ್ರ ಎಂದರು.

ಈ ನಿಟ್ಟಿನಲ್ಲಿ ಇಂದು ಸುಧಾಮಂಗಳ ಮಾಡುತ್ತಿರುವ ವಿದ್ಯಾರ್ಥಿಗಳಾದ ಸೌಮಿತ್ರಿ, ಸುಘೋಷ, ಪ್ರಣವ ಮತ್ತು ಹೊನ್ನಾಳಿ ಆಯಾಚಿತ ಶ್ರೀಶ ಆಚಾರ್ಯರು ಪಂಡಿತರು ಮತ್ತು ವಿದ್ವಾಂಸರು ಮೆಚ್ಚುವಂತಹ ಮುಕ್ತ ಪರೀಕ್ಷೆ ನೀಡಿದ್ದಾರೆ ಅವರಿಗೆ ಉನ್ನತೋನ್ನತ ಪ್ರಗತಿ ಆಗಲಿ ಎಂದು ಸತ್ಯಾತ್ಮ ಶ್ರೀಗಳು ಆಶೀರ್ವಾದ ಪೂರ್ವಕವಾಗಿ ಹೇಳಿದರು.
ಶ್ರೀ ವ್ಯಾಸತೀರ್ಥ ವಿದ್ಯಾಪೀಠದ ಗೌರವ ಕಾರ್ಯದರ್ಶಿ ಡಾ.ಡಿ.ಪಿ. ಮಧುಸೂದನಾಚಾರ್ಯರು ಮಾತನಾಡಿ, ಪೇಜಾವರ ಶ್ರೀ ವಿಶ್ವೇಶ ತೀರ್ಥರು ನಮ್ಮ ವಿದ್ಯಾಪೀಠಕ್ಕೆ ಪ್ರಪ್ರಥಮವಾಗಿ ಸ್ಪೂರ್ತಿ ಮತ್ತು ಚೈತನ್ಯ ನೀಡಿದವರು ಎಂದು ಸ್ಮರಿಸಿದರು.

ಡಾ.ಡಿ.ಪಿ. ಮಧುಸೂದನಾಚಾರ್ಯರು
ಶುಕ್ರವಾರ ಸಂಜೆ ಜೆಪಿ ನಗರದ ವಿಠಲ ಧಾಮದ ಆವರಣದಲ್ಲಿ ಆಯೋಜನೆಗೊಂಡಿದ್ದ ಯತಿ ಸಮಾವೇಶದಲ್ಲಿ ಅದಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ , ಕಿರಿಯ ಶ್ರೀ ವಿದ್ಯಾ ರಾಜೇಶ್ವರ ತೀರ್ಥ ಸ್ವಾಮೀಜಿ, ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ, ಸೋಸಲೆ ಮಠದ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ, ಮುಳಬಾಗಿಲು ಶ್ರೀ ಸುಜಯ ನಿಧಿ ತೀರ್ಥ ಸ್ವಾಮೀಜಿ ಹಾಜರಿದ್ದರು.

ಶ್ರೀ ವಿದ್ಯಾಶ್ರೀಶ ತೀರ್ಥರು ಶ್ರೀ ವ್ಯಾಸ ತೀರ್ಥ ವಿದ್ಯಾಪೀಠದ ಮೂಲಕ ಯುವ-ನವ ವಿದ್ವಾಂಸರನ್ನು ತರಬೇತುಗೊಳಿಸಿ ಸಮಾಜಕ್ಕೆ ಮಹತ್ವದ ಕೊಡುಗೆಯನ್ನಾಗಿ ನೀಡುತ್ತಿದ್ದಾರೆ. ಅವರ ಸೇವೆ ಮಹತ್ತರವಾಗಿದೆ ವಿದ್ಯಾರ್ಥಿಗಳು ಪಂಡಿತರಾಗಿ ಭಾರತೀಯ ಸನಾತನ ಪರಂಪರೆಯ ಪ್ರತೀಕವೂ ಆಗಿ ದೇಶದ ಸಂಸ್ಕೃತಿಯನ್ನು ಮುನ್ನಡೆಸುವಂತಾಗಲಿ.
-ಶ್ರೀ ಸುಜಯನಿಧಿ ತೀರ್ಥರು, ಮುಳಬಾಗಿಲು, ಶ್ರೀಪಾದರಾಜರ ಮಠ

ಕಳೆದ ಎಂಟು ವರ್ಷಗಳ ಹಿಂದೆ ಶ್ರೀ ವ್ಯಾಸತೀರ್ಥ ವಿದ್ಯಾಪೀಠ ತಿರುಮಕೂಡಲು ಕ್ಷೇತ್ರದಲ್ಲಿ ಆರಂಭವಾದಾಗ ಸ್ವತಃ ನನ್ನ ತಾಯಿಯವರೇ ಎಲ್ಲ ಮಕ್ಕಳಿಗೂ ಅಡುಗೆ ಮಾಡಿ ಕೈ ತುತ್ತು ಹಾಕಿ ಬೆಳೆಸಿದರು.

ವಿದ್ಯಾರ್ಥಿಗಳ ಸಮಗ್ರ ಕ್ಷೇಮ ಪಾಲನೆಯಲ್ಲಿ ಪ್ರತಿನಿತ್ಯವೂ ನೂರಾರು ಸಮಸ್ಯೆ ಎದುರಾದರು ಅವೆಲ್ಲವೂ ಗುರುಗಳ ಪರಮ ಅನುಗ್ರಹದಿಂದ ನಿವಾರಣೆಯಾಗಿ ಇಂದು ನಾಲ್ವರು ಪಂಡಿತರಾಗುವ ಮಟ್ಟದವರೆಗೆ ಸಂಸ್ಥೆ ಬೆಳೆದಿದೆ. ಇವುಗಳ ಹಿಂದೆ ಸೋಸಲ ಶ್ರೀ ವಿದ್ಯಾಶ್ರೀಶ ತೀರ್ಥರ ಪರಿಶ್ರಮ ಅಗಾಧವಾಗಿದೆ ಎಂದರು.
ವಿದ್ಯಾಪೀಠದ ವ್ಯವಸ್ಥಾಪಕ ಟ್ರಸ್ಟಿ, ಶೇಷಗಿರಿ ಆಚಾರ್ಯ ಮಾತನಾಡಿ, ಸುಧಾ ಪರೀಕ್ಷೆ ಎಂಬುದು ವಿದ್ಯಾರ್ಥಿಗಳಿಗೆ ಮಾತ್ರ ಅಲ್ಲ, ವಿದ್ವಾಂಸರೂ ತಮ್ಮನ್ನು ತಾವು ಸರಿಪಡಿಸಿಕೊಳ್ಳಲು, ಜ್ಞಾನದ ಶಾಖೆಯನ್ನು ಉನ್ನತೀಕರಿಸಿಕೊಳ್ಳಲು ಮಹೋನ್ನತವಾದ ವೇದಿಕೆಯಾಗಿದೆ ಎಂದರು.

ಸುಧಾ ಪರೀಕ್ಷೆ ಎದುರಿಸಿ ವಿದ್ವಾಂಸರ ಪ್ರಶಂಸೆಗೆ ಭಾಜನರಾದ ಆಯಾಚಿತ ಶ್ರೀಶ ಮತ್ತು ಸುಘೋಷ ಅವರು ತಮ್ಮ ಅನುಭವಗಳನ್ನು ಹಂಚಿಕೊಂಡರು.

ಆಯಾಚಿತ ಶ್ರೀಶ ಅವರು ಮಾತನಾಡಿ, ಬಡತನದ ಬೇಗೆಯಲ್ಲಿ ನಾನು ಇದ್ದರೂ ಬಾಲ್ಯದಲ್ಲಿಯೇ ತಾಯಿಯನ್ನು ಕಳೆದುಕೊಂಡರೂ ಸೋಸಲೆ ಶ್ರೀಗಳು ನನ್ನನ್ನು ಕೈಹಿಡಿದು ಅನ್ನ, ಆಹಾರವನ್ನು ನೀಡಿ ವಿದ್ಯಾದಾನ ಮಾಡಿದರು ಎಂದು ಸ್ಮರಿಸಿದರು.

ಸುಧಾ ಪಂಡಿತ ಹೊನ್ನಾಳಿ ಆಯಾಚಿತ ಶ್ರೀಶ ಆಚಾರ್ಯ

ಕಳೆದ ವರ್ಷ ನನ್ನ ಸಹೋದರಿಯ ವಿವಾಹ ಸಂದರ್ಭದಲ್ಲಿಯೂ ನಮ್ಮ ಬಡತನವನ್ನು ಕಂಡು ಸಂಪೂರ್ಣ ವಿವಾಹದ ಜವಾಬ್ದಾರಿಯನ್ನು ಮಠದಿಂದಲೇ ನಿರ್ವಹಿಸಿದ್ದನ್ನು ಜೀವನದಲ್ಲಿ ಮರೆಯಲಾಗದು ನಮನ ಸಲ್ಲಿಸಿದರು.

ಪ್ರಣವ ಆಚಾರ್ಯ ಮಾತನಾಡಿ, ನಮ್ಮ ಪರೀಕ್ಷೆ ಮತ್ತು ಯಶಸ್ವಿಗಾಗಿ ಹಗಲು ಇರುಳು ಶ್ರಮಿಸಿದ ಉಪನ್ಯಾಸಕರು ಮತ್ತು ಪಂಡಿತರನ್ನು ಸ್ಮರಿಸಿಕೊಂಡರು. ಹಿರಿಯರ ಅನುಗ್ರಹದಿಂದಲೇ ನಮ್ಮ ಉನ್ನತಿ ಸಾಧ್ಯವಾಗಿದೆ ಎಂದು ಧನ್ಯತೆ ಸಮರ್ಪಿಸಿದರು.

ಹಿರಿಯ ವಿದ್ವಾಂಸ ಎ.ವಿ. ನಾಗಸಂಪಿಗೆ ಮಾತನಾಡಿದರು.
ಗಮನ ಸೆಳೆದ ಪ್ರದರ್ಶಿನಿ
ಇದೇ ಸಂದರ್ಭದಲ್ಲಿ ಶ್ರೀ ಮಠ ಆಯೋಜಿಸಿದ್ದ ವಿಶೇಷ ಪ್ರದರ್ಶಿನಿ ಗಮನ ಸೆಳೆಯಿತು. ರಾಮಾಯಣ, ಮಹಾಭಾರತ ಶ್ರೀಮನ್ ನ್ಯಾಯ ಸುಧಾ, ವ್ಯಾಸತ್ರಗಳು, ವೇದಗಳು ಮತ್ತು ಉಪನಿಷತ್ತಿನ ವರ್ಣ ಚಿತ್ರಗಳು ವೀಕ್ಷಕರ ಗಮನ ಸೆಳೆದವು.

ಸಂಜೆ ವಿವಿಧ ಭಜನಾ ಮಂಡಳಿಗಳು ನಾದಸ್ವರ ವೇದಘೋಷ ದೊಂದಿಗೆ ಶೋಭಾ ಯಾತ್ರೆ ಸಂಪನ್ನಗೊಂಡಿತು. ಶ್ರೀ ವ್ಯಾಸರಾಜರಿಗೆ ಸಾಂಪ್ರದಾಯಿಕವಾಗಿ ದರ್ಬಾರ್ ಸಮರ್ಪಿಸಲಾಯಿತು. ವಿವಿಧ ಪೀಠಾಧೀಶರು ವ್ಯಾಸರಾಜರಿಗೆ ರತ್ನದ ಅಭಿಷೇಕ ಸಮರ್ಪಣೆ ಮಾಡಿದರು.

ಪ್ರಶಸ್ತಿ ಪ್ರದಾನ
ವಿವಿಧ ರಂಗದಲ್ಲಿ ಅದ್ವಿತೀಯ ಸಾಧನೆ ಮಾಡಿದ ಕೆ.ಎಸ್. ಗುರುರಾಜ, ಎಚ್. ಆರ್. ನಾಗೇಂದ್ರ ಮತ್ತು ಹಿರಿಯ ಪತ್ರಕರ್ತ ಎ.ಆರ್. ರಘುರಾಮ ಅವರಿಗೆ ಶ್ರೀಮಠದ ರಘುನಾಥ ತೀರ್ಥ ಅನುಗ್ರಹ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 

Tags: Kannada News WebsiteLatest News KannadamysoreNyayasudha MangalaSosaleUttaradi MathaVyasaraja Mathaಉತ್ತರಾದಿ ಮಠನ್ಯಾಯ ಸುಧಾ ಮಂಗಳಮನ್ಮಧ್ವಾಚಾರ್ಯರುಮೈಸೂರುವಿದ್ವತ್ ಸಭೆವ್ಯಾಸತೀರ್ಥ ವಿದ್ಯಾಪೀಠವ್ಯಾಸರಾಜ ಮಠಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿಸೋಸಲೆಹೊನ್ನಾಳಿ
Share201Tweet123Send
Previous Post

ಪ್ರಜಾಪ್ರಭುತ್ವದ ಹಬ್ಬ ಸಂಪನ್ನ | ಸಮೀಕ್ಷೆಗಳ ಆಡಂಬೋಲ ಬಹಿರಂಗ, ಗೆದ್ದ ಮತದಾರನ ಅಂತರಂಗ

Next Post

ಬೆಂಗಳೂರು | ಜೂನ್ 9-11 | ಶ್ರೀ ಭೂವರಾಹ ಕ್ಷೇತ್ರದ ನಾಲ್ಕನೇ ವಾರ್ಷಿಕೋತ್ಸವ | ಏನೆಲ್ಲಾ ಕಾರ್ಯಕ್ರಮಗಳಿವೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಂಗಳೂರು | ಜೂನ್ 9-11 | ಶ್ರೀ ಭೂವರಾಹ ಕ್ಷೇತ್ರದ ನಾಲ್ಕನೇ ವಾರ್ಷಿಕೋತ್ಸವ | ಏನೆಲ್ಲಾ ಕಾರ್ಯಕ್ರಮಗಳಿವೆ?

ಬೆಂಗಳೂರು | ಜೂನ್ 9-11 | ಶ್ರೀ ಭೂವರಾಹ ಕ್ಷೇತ್ರದ ನಾಲ್ಕನೇ ವಾರ್ಷಿಕೋತ್ಸವ | ಏನೆಲ್ಲಾ ಕಾರ್ಯಕ್ರಮಗಳಿವೆ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕುವೆಂಪು ವಿವಿಯಲ್ಲಿ ಭಯೋತ್ಪಾದನಾ ವಿರೋಧಿ ದಿನ | ಪ್ರತಿಜ್ಞಾ ವಿಧಿ ಸ್ವೀಕಾರ

ಕುವೆಂಪು ವಿವಿಯಲ್ಲಿ ಭಯೋತ್ಪಾದನಾ ವಿರೋಧಿ ದಿನ | ಪ್ರತಿಜ್ಞಾ ವಿಧಿ ಸ್ವೀಕಾರ

May 22, 2026
ಅಕ್ರಮ ಗೋ ಸಾಗಾಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಹಿಂದೂ ಜಾಗರಣ ವೇದಿಕೆ ಆಗ್ರಹ

ಅಕ್ರಮ ಗೋ ಸಾಗಾಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಹಿಂದೂ ಜಾಗರಣ ವೇದಿಕೆ ಆಗ್ರಹ

May 22, 2026
ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಬೇಕು: ರಾಷ್ಟ್ರಪತಿಗಳಿಗೆ ಮನವಿ

ನಾಳೆ ರೋಜಗಾರ್ ಮೇಳ | 51,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ ವಿತರಣೆ

May 22, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಕನ್ಯಾಕುಮಾರಿ – ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ ರೈಲಿನ ಸಮಯ ಬದಲು

May 22, 2026
ಬೆಂಗಳೂರು | ವಿಭಾಗೀಯ ರೈಲ್ವೆ ಬಳಕೆದಾರರ ಸಮಾಲೋಚನಾ ಸಭೆ ಯಶಸ್ವಿ

ಬೆಂಗಳೂರು | ವಿಭಾಗೀಯ ರೈಲ್ವೆ ಬಳಕೆದಾರರ ಸಮಾಲೋಚನಾ ಸಭೆ ಯಶಸ್ವಿ

May 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL