Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಉಡುಪಿ

ಸಗ್ರಿ ಉಪಾಧ್ಯಾಯ ವಿಧಿವಶ | ಪೇಜಾವರ, ಪಲಿಮಾರು, ಉತ್ತರಾದಿ, ಸೋಸಲೆ ಮಠಾಧೀಶರಿಂದ ಸ್ಮರಣೆ

ಸದಾ ಸಂಗ್ರಾಹ್ಯ.....ಭೂಯಿಷ್ಠಾಂ ತೇ ನಮ ಉಕ್ತಿಂ ವಿಧೇಮ.... ಆಚಾರ್ಯರ ತತ್ವಾದರ್ಶ

June 15, 2024
in ಉಡುಪಿ, ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಉಡುಪಿ/ಬೆಂಗಳೂರು  |

ಉಡುಪಿಯ ಉತ್ತಮ ವಿದ್ವಾಂಸರು, ವಾಗ್ಮಿಗಳು, ಲೇಖಕರು, ಸಂಶೋಧಕರು, ಚಿಂತಕರು, ಸದಾ ಅನುಸಂಧಾನಪ್ರಿಯರೂ, ಸದಾಚಾರ ನಿಷ್ಠರೂ, ಸಾಧಕರೂ ಆದ ವಿದ್ವಾಂಸರಾದ ಶ್ರೀ ಸಗ್ರಿ ರಾಘವೇಂದ್ರಾಚಾರ್ಯ ಉಪಾಧ್ಯಾಯರು ಉಪನ್ಯಾಸ ನೀಡಿ ಕೆಲವೇ ನಿಮಿಷದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಇಂದು ಹರಿಪಾದ ಸೇರಿದ್ದು, ಇವರ ನಿಧನಕ್ಕೆ ವಿವಿಧ ಮಠಾಧೀಶರು ಆಚಾರ್ಯರ ಕೊಡುಗೆಯನ್ನು ಸ್ಮರಿಸಿದ್ದಾರೆ.

ಪೇಜಾವರ ಶ್ರೀವಿಶ್ವಪ್ರಸನ್ನ ತೀರ್ಥರು
ಸಗ್ರಿ ರಾಘವೇಂದ್ರ ಉಪಾಧ್ಯಾಯರ ನಿಧನದ ಸುದ್ದಿ ತಿಳಿದು ತುಂಬಾ ಖೇದವಾಯಿತು ಎಂದು ಪೇಜಾವರ ಶ್ರೀವಿಶ್ವಪ್ರಸನ್ನ ತೀರ್ಥ #Pejawara Shri Vishwaprasanna Thirtha ಶ್ರೀಪಾದಂಗಳವರು ಉಪಾಧ್ಯಾಯರ ಸೇವೆ ಸ್ಮರಿಸಿದ್ದಾರೆ.
ಈ ಕುರಿತಂತೆ ಮತನಾಡಿರುವ ಗುರುಗಳು, ನಮ್ಮ ಗುರುಗಳ ಬಳಿಯಲ್ಲಿ ವಿದ್ಯಾಭ್ಯಾಸ ನಡೆಸಿ, ಅವರೊಂದಿಗೇ ಶ್ರೀಮಠದಲ್ಲಿ ಸೇವೆ ಸಲ್ಲಿಸಿದ್ದಾರೆ. ಸಂಸ್ಕೃತ ಪಾಠಶಾಲೆಯಲ್ಲಿ ಅನವರತ ಸೇವೆ ಸಲ್ಲಿಸಿರುವ ಆಚಾರ್ಯರ ಕೊಡುಗೆ ಅನನ್ಯವಾಗಿದೆ. ಪ್ರವಚನಕಾರರಾಗಿ, ಕೃತಿಕಾರರಾಗಿ ಅವರು ಸಮಾಜದಲ್ಲಿ ದೊಡ್ಡ ಸೇವೆ ಸಲ್ಲಿಸಿದ್ದಾರೆ. ಸಾರಸ್ವತ ಲೋಕಕ್ಕೆ, ಅದರಲ್ಲಿ ಮಧ್ವ ಸಮಾಜದ ಸಾಹಿತ್ಯಕ್ಕೆ ಅವರ ಕೊಡುಗೆ ಮಹತ್ವವಾದುದು ಎಂದರು.

ಉಪಾಧ್ಯಾಯರ ಆತ್ಮಕ್ಕೆ ಸದ್ಗತಿ ದೊರೆಯಲಿ, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.
ಉತ್ತರಾದಿ ಮಠದ ಶ್ರೀ ಸತ್ಯಾತ್ಮತೀರ್ಥರು
ಉತ್ತಮ ವಿದ್ವಾಂಸರು, ವಾಗ್ಮಿಗಳು, ಲೇಖಕರು, ಸಂಶೋಧಕರು, ಚಿಂತಕರು, ಸದಾ ಅನುಸಂಧಾನಪ್ರಿಯರೂ, ಸದಾಚಾರ ನಿಷ್ಠರೂ, ಸಾಧಕರೂ ಆದ ವಿದ್ವಾಂಸರಾದ ಶ್ರೀ ಸಗ್ರಿ ರಾಘವೇಂದ್ರಾಚಾರ್ಯ ಉಪಾಧ್ಯಾಯ ಇವರ ಆಕಸ್ಮಿಕ ನಿಧನ ತೀವ್ರ ವಿಷಾದಕರವಾದದ್ದು ಎಂದು ಉತ್ತರಾದಿ ಮಠದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರು ಸಗ್ರಿ ಉಪಾಧ್ಯಾಯರ ಕೊಡಗೆಯನ್ನು ಸ್ಮರಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಗುರುಗಳು, ಸಗ್ರಿ ರಾಘವೇಂದ್ರ ಉಪಾಧ್ಯಾಯರು ಮಾಡಿದ ವಾಙ್ಮಯ ಸೇವೆ ತುಂಬ ಅಪರೂಪವಾದದ್ದು. ಸರ್ವಮೂಲಾದಿಗಳಲ್ಲಿ ಇರುವ ಸೂಕ್ಷ್ಮವಾದ ವಿಚಾರಗಳನ್ನು ಹೆಕ್ಕಿ ತೆಗೆದು ಲೇಖನದ ಮೂಲಕ ಸಮಾಜಕ್ಕೆ ನೀಡುವ ಅವರ ಕೌಶಲ ಮಾಧ್ವಸಮಾಜಕ್ಕೆ ದೊಡ್ಡ ಆಸ್ತಿಯಾಗಿತ್ತು ಎಂದರು.

ತಮ್ಮ ವಾಕ್ ಕುಸುಮಗಳ ಮೂಲಕ ಶ್ರೀಕೃಷ್ಣಮುಖ್ಯಪ್ರಾಣರ ವಿಶೇಷ ಆರಾಧನೆಯನ್ನು ನಿರಂತರವಾಗಿ ಮಾಡಿದವರು. ಅಂತಹ ಸುಜೀವಕ್ಕೆ ಭಗವಂತ ಉತ್ತಮವಾದ ಸದ್ಗತಿಯನ್ನು ನೀಡಲಿ ಎಂದು ನಮ್ಮ ಉಪಾಸ್ಯಮೂರ್ತಿಗಳಾದ ಶ್ರೀಮೂಲರಾಮ ದಿಗ್ವಿಜಯ ರಾಮವೇದವ್ಯಾಸ ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದಿದ್ದಾರೆ.
ಸೋಸಲೆ ಮಠದ ಶ್ರೀ ವಿದ್ಯಾಶ್ರೀಶ ತೀರ್ಥರು
ಆಧ್ಯಾತ್ಮಿಕ ಹಾಗೂ ಧಾರ್ಮಿಕ ಸಾಹಿತ್ಯ ಕ್ಷೇತ್ರಕ್ಕೆ ಸಗ್ರಿ ರಾಘವೇಂದ್ರ ಉಪಾಧ್ಯಾಯರ ಕೊಡುಗೆ ಅನನ್ಯವಾದುದು ಎಂದು ಸೋಸಲೆ ಮಹಾಸಂಸ್ಥಾನದ ಪೀಠಾಧೀಶರಾದ ಶ್ರೀ ವಿದ್ಯಾಶ್ರೀಶ ತೀರ್ಥ ಶ್ರೀಪಾದಂಗಳವರು ಸ್ಮರಿಸಿದ್ದಾರೆ.

ಈ ಕುರಿತಂತೆ ಮಾತನಾಡಿದ ಗುರುಗಳು, ಮಧ್ವ ಪ್ರಪಂಚಕ್ಕೆ ಸಗ್ರಿ ಉಪಾಧ್ಯಾಯರ ಕೊಡುಗೆ ಅಪಾರವಾಗಿದೆ. ಸಮಾಜದ ಅಂಕು ಡೊಂಕುಗಳನ್ನು ತಿದ್ದಿ ತೀಡುವ ಪೂಜ್ಯ ಆಚಾರ್ಯರ ತತ್ವವಾದ ಲೇಖನ ಸದಾ ಸಂಗ್ರಾಹ್ಯ…..ಭೂಯಿಷ್ಠಾಂ ತೇ ನಮ ಉಕ್ತಿಂ ವಿಧೇಮ…. ಸಂಗ್ರಹ ಯೋಗ್ಯವಾಗಿದೆ ಎಂದರು.

ಗಂಭೀರವಾದ ಧ್ವನಿಯಲ್ಲಿ ಉಪನ್ಯಾಸ ಮಾಡುತ್ತಲೇ ಕೋದಂಡ ರಾಮಚಂದ್ರದೇವರ ಸನ್ನಿಧಾನದಲ್ಲಿ,ಪರಮ ವೈಷ್ಣವರ ಸಮ್ಮುಖದಲ್ಲಿ ಕೊನೆಯುಸಿರೆಳೆದ ಆಚಾರ್ಯರ ಬದುಕಿನ ಫಲಿತಾಂಶ ಸಿಕ್ಕಿದೆ. ಜನ್ಮಲಾಭಃ ಪರಃ ಪುಂಸಾಂ ಅಂತೇ ನಾರಾಯಣ ಸ್ಮತಿಃ ಎಂದು ಗುರುಗಳ ಸ್ಮರಿಸಿದ್ದಾರೆ.
ಮಾಧ್ವ ಸಿದ್ಧಾಂತದ ಅತಿ ದೊಡ್ಡ ಪಂಡಿತರಲ್ಲಿ ಒಬ್ಬರಾದ, ಆಚಾರ-ವಿಚಾರಗಳಲ್ಲಿ ನಿಷ್ಠೆಯನ್ನಿಟ್ಟಿದ್ದ, ಆಳವಾದ ಅಧ್ಯಯನ-ಆಧ್ಯಾಪನದಲ್ಲಿ ತೊಡಗಿದ್ದ, ಸಂಗ್ರಹ ಸಗ್ರಿ ಎಂದು ಪ್ರಸಿದ್ದರಾಗಿರುವ ಪಂ. ಶ್ರೀ ಸಗ್ರಿ ರಾಘವೇಂದ್ರ ಉಪಾಧ್ಯಾಯರು ಅಗಲಿದ್ದು ನಮ್ಮ ಇಡೀ ಸಮುದಾಯಕ್ಕೆ ಆಘಾತವಾಗಿದೆ. ಅವರಿಗೆ ಸದ್ಗತಿ ದೊರೆಯಲೆಂದು, ತಮ್ಮ ಉಪಾಸ್ಯ ಮೂರ್ತಿಯಾದ ಶ್ರೀ ಮೂಲ ಗೋಪಾಲ ಕೃಷ್ಣ ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದಿದ್ದಾರೆ.

ಭಂಡಾರಕೇರಿ ಮಠದ ಶ್ರೀವಿದ್ಯೇಶ ತೀರ್ಥ ಶ್ರೀಪಾದರು
ಸಗ್ರಿ ರಾಘವೇಂದ್ರ ಉಪಾಧ್ಯಾಯರ ಅಗಲಿಕೆ ವಿದ್ವತ್ ಪ್ರಪಂಚಕ್ಕೆ ಅಪಾರವಾದ ನಷ್ಟ ಎಂದು ಭಂಡಾರಕೇರಿ ಮಠದ ಶ್ರೀವಿದ್ಯೇಶ ತೀರ್ಥ ಶ್ರೀಪಾದಂಗಳವರು ಸ್ಮರಿಸಿದ್ದಾರೆ.
ಈ ಕುರಿತು ಮಾತನಾಡಿರುವ ಗುರುಗಳು, ಎಲ್ಲ ಮಠಗಳಿಗೂ ಅಪಾರವಾದ ಸೇವೆ, ಸಾರಸ್ವತ ಲೋಕಕ್ಕೆ ಅನನ್ಯ ಕೊಡುಗೆಯನ್ನು ಉಪಾಧ್ಯಾಯರು ನೀಡಿದ್ದಾರೆ ಎಂದರು.

ಕಳೆದ ವರ್ಷದ ಮೈಸೂರಿನಲ್ಲಿ ನಡೆದ ವೇದವ್ಯಾರ ರಾಷ್ಟ್ರೀಯ ಜಯಂತಿಯಲ್ಲಿ ಉಪಾಧ್ಯಾಯರಿಗೆ ಜೀವಮಾನದ ಸಾಧನೆ ಪ್ರಶಸ್ತಿಯನ್ನು ನೀಡಿದನ್ನು ಗುರುಗಳು ಸ್ಮರಿಸಿದ್ದಾರೆ.

ಪಲಿಮಾರು ಮಠದ ಶ್ರೀವಿದ್ಯಾಶ್ರೀಶ ತೀರ್ಥ ಶ್ರೀಗಳು
ಸಗ್ರಿ ರಾಘವೇಂದ್ರ ಉಪಾಧ್ಯಾಯರು ದೊಡ್ಡ ಸಾಧಕರು ಹಾಗೂ ಲೇಖಕರಾಗಿದ್ದು, ಎಲ್ಲ ಕ್ಷೇತ್ರಗಳಲ್ಲಿ ಅವರ ಸಾಧನೆ ಇದೆ. ಇಂತಹ ಹಿರಿಯ ವಿದ್ವಾಂಸರ ವಿಯೋಗ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ ಉಂಟುಮಾಡಿದೆ ಎಂದು ಉಡುಪಿ ಪಲಿಮಾರು ಮಠದ ಶ್ರೀ ವಿದ್ಯಾಶ್ರೀಶ ತೀರ್ಥ ಶ್ರೀಪಾದಂಗಳವರು ಸ್ಮರಿಸಿದ್ದಾರೆ.

ಉಪಾಧ್ಯಾಯರ ಅಗಲಿಕೆ ಹಿನ್ನೆಲೆಯಲ್ಲಿ ಮಾತನಾಡಿರುವ ಗುರುಗಳು, ವಿಷ್ಣು ಸಹಸ್ರನಾಮದ ಕುರಿತಾಗಿ ಮೂರು ಸಂಪುಟಗಳ ದೊಡ್ಡ ಗ್ರಂಥವನ್ನು ಉಪಾಧ್ಯಾಯರು ಬರೆದಿದ್ದಾರೆ. ವಿಷ್ಣು ಸಹಸ್ರನಾಮದ ಬಗ್ಗೆ ಎಷ್ಟು ಚಿಂತನೆ ನಡೆಸಬಹುದು ಎಂಬುದಕ್ಕೆ ಸಗ್ರಿ ಅವರ ಪುಸ್ತಕ ಉಪಯುಕ್ತವಾದುದು ಎಂದರು.

ಎಲ್ಲ ಸ್ವಾಮೀಜಿಗಳ ಪ್ರವಚನವನ್ನು ಸಂಗ್ರಹಿಸಿ, ಲೇಖನ ರೂಪಕ್ಕೆ ಕ್ರೋಢೀಕರಿಸಿ, ಗ್ರಂಥ ರೂಪದಲ್ಲಿ ಪ್ರಕಾಶನ ಮಾಡಿರುವುದು ಉಪಾಧ್ಯಾಯರ ಸಾಧನೆಗಳಲ್ಲೊಂದು. ಮೀನು ಸದಾಕಾಲ ನೀರಿನಲ್ಲೇ ಇರುವಂತೆ ತಮ್ಮ ಜೀವಮಾನದಾದ್ಯಂತ ಉಪಾಧ್ಯಾಯರು ಸದಾಕಾಲ ಅಧ್ಯಯನ, ಬರವಣಿಗೆ ಹಾಗೂ ಸಾಹಿತ್ಯ ಕೃಷಿಯಲ್ಲೇ ತೊಡಕೊಂಡಿರುತ್ತಿದ್ದರು ಎಂದರು.
ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದಿತೀಡುವ ಕುರಿತಾಗಿ ಗ್ರಂಥಗಳನ್ನು ರಚಿಸಿದ್ದಾರೆ. ಎಲ್ಲ ಧಾರ್ಮಿಕ ಮಾಸಿಕಗಳಲ್ಲಿ ಸಗ್ರಿ ಅವರ ಲೇಖನಗಳ ಇರುತ್ತಿದ್ದವರು ಎಂದರೆ ಅವರ ಚಿಂತನೆಗಳು ಸದಾಕಾಲ ಜೀವಂತ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದರು.

ಪ್ರಮುಖವಾಗಿ ಪ್ರವಚನದ ಮೂಲಕವೇ ಆತ್ಮಾರ್ಪಣೆ ಮಾಡಿದ್ದಾರೆ ಎಂದರೆ ಅವರ ಸಾರ್ಥಕತೆ, ದೇವರ ಅನುಗ್ರಹ ಅವರ ಮೇಲೆ ಎಷ್ಟಿದೆ ಎಂಬುದನ್ನು ಸಾಕ್ಷಿಯಾಗಿದೆ ಎಂದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

   

Tags: coastal newsDakshina KannadaKannada NewsKannada News LiveKannada News OnlineKannada News WebsiteKannada WebsiteKarawali NewsLatest News KannadaNews in KannadaNews KannadaPejawara shri Vishwaprasanna ThirthaUdupi/Bangaloreಉಡುಪಿಉಡುಪಿ/ಬೆಂಗಳೂರುಕರಾವಳಿ_ಸುದ್ಧಿದಕ್ಷಿಣ_ಕನ್ನಡಪೇಜಾವರ ಶ್ರೀವಿಶ್ವಪ್ರಸನ್ನ ತೀರ್ಥಮಂಗಳೂರು
Previous Post

ನಟ ದರ್ಶನ್ ಹಾಗೂ ಗ್ಯಾಂಗ್ 5 ದಿನ ಪೊಲೀಸ್ ಕಸ್ಟಡಿಗೆ: ಕೋರ್ಟ್’ನಲ್ಲಿ ಹೊರಬಿತ್ತು ಸ್ಪೋಟಕ ಮಾಹಿತಿ

Next Post

ದೈಹಿಕ, ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸುವ ವಿಶೇಷ ಕಲೆ ಯೋಗ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ದೈಹಿಕ, ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸುವ ವಿಶೇಷ ಕಲೆ ಯೋಗ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!