No Result
View All Result
MODEL DEMOCRACY AT KRCS
English Articles

Model Democracy At KRCS | Student Council Election Concluded Successfully

by ಕಲ್ಪ ನ್ಯೂಸ್
June 22, 2026
0

Kalpa Media House  |  Shikaripura  | Kumadvathi Residential Central School (KRCS) conducted its Student Council Election for the academic year...

Read moreDetails
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
  • Advertise With Us
  • Grievances
  • About Us
  • Contact Us
Monday, June 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸಾತ್ವಿಕರ ಸಹಕಾರದಲ್ಲಿ ಧರ್ಮದ ಉಳಿವಿಗೆ ಮಠಗಳು ಮುಂದಾಗಲಿ: ಭಂಡಾರಕೇರಿ ಶ್ರೀ ಕರೆ

ಶ್ರೀ ವಿದ್ಯೇಶ ಸಪ್ತತಿ ವಿಚಾರ ವಿನೋದ ವೈಭವ ಸಂಪನ್ನ | ಭಂಡಾರಕೇರಿ ಶ್ರೀಗಳ 70ನೇ ವರ್ಧಂತಿ | 70 ಪಂಡಿತರಿಗೆ ವಿಶೇಷ ಸನ್ಮಾನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 18, 2024
in ಬೆಂಗಳೂರು ನಗರ
0
ಸಾತ್ವಿಕರ ಸಹಕಾರದಲ್ಲಿ ಧರ್ಮದ ಉಳಿವಿಗೆ ಮಠಗಳು ಮುಂದಾಗಲಿ: ಭಂಡಾರಕೇರಿ ಶ್ರೀ ಕರೆ

ಬೆಂಗಳೂರಿನ ಗಿರಿನಗರದ ಭಾಗವತ ಆಶ್ರಮದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಸಮಾರಂಭದಲ್ಲಿ 70 ವಸಂತಗಳನ್ನು ಪೂರ್ಣಗೊಳಿಸಿದ ಭಂಡಾರ ಕೇರಿ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಅವರಿಗೆ ತೀರ್ಥಹಳ್ಳಿ ತಾಲೂಕು ಭೀಮನಕಟ್ಟೆ ಮಠದ ಶ್ರೀ ರಘುವರೇಂದ್ರ ತೀರ್ಥ ಸ್ವಾಮೀಜಿ ಅವರು ಮಲ್ಲಿಗೆ ಪುಷ್ಪದ ವಿಶೇಷ ಕಿರೀಟ ಸಮರ್ಪಣೆ ಮಾಡಿದರು.

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಸಮಾಜದ ಸಾತ್ವಿಕರ ಸಹಕಾರದೊಂದಿಗೆ ಮಠಾಧೀಶರುಗಳು ಧರ್ಮ ಮತ್ತು ಸಂಸ್ಕೃತಿಯ ಉಳಿವಿಗೆ ಮುಂದಾಗಬೇಕು ಎಂದು ಉಡುಪಿ ಭಂಡಾರಕೇರಿ ಮಠಾಧೀಶರಾದ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಕರೆ ನೀಡಿದರು.

ಶ್ರೀ ಅಚ್ಚುತಪ್ರಜ್ಞ, ಜಗದ್ಗುರು ಶ್ರೀ ಪೂರ್ಣಪಜ್ಞ, ಸತ್ಯ ತೀರ್ಥ ಮಹಾಸಂಸ್ಥಾನ ಶ್ರೀ ಭಂಡಾರ ಕೇರಿ ಮಠ, ಭಾಗವತಾಶ್ರಮ ಪ್ರತಿಷ್ಠಾನ ಹಾಗೂ ಲೋಕ ಸಂಸ್ಕೃತಿ ಕಲಾ ವಿದ್ಯಾ ವಿಕಾಸ ಪ್ರತಿಷ್ಠಾನಗಳು ಸಂಯುಕ್ತವಾಗಿ ಬೆಂಗಳೂರಿನ ಗಿರಿನಗರದಲ್ಲಿರುವ ಭಾಗವತ ಕೀರ್ತಿಧಾಮದಲ್ಲಿ ಹಮ್ಮಿಕೊಂಡಿದ್ದ ಶ್ರೀ ವಿದ್ಯೇಶ ತೀರ್ಥರ 70 ನೇ ವರ್ಧಂತಿ ಉತ್ಸವದಲ್ಲಿ ಅವರು ಆಶೀರ್ವಚನ ನೀಡಿದರು.
ಧರ್ಮ ಮತ್ತು ಸಂಸ್ಕೃತಿಯನ್ನು ಉಳಿಸಲು ಮಠಪೀಠಗಳು ಮುಂದಾಗಬೇಕು ಇದಕ್ಕೆ ಸಾತ್ವಿಕರು ಸಹಕಾರವನ್ನು ನೀಡಬೇಕು. ಆಗ ಮಾತ್ರ ನಮ್ಮ ಪರಂಪರೆ ಮುಂದಿನ ಪೀಳಿಗೆಗೆ ಉಳಿಯಲು ಸಾಧ್ಯ ಎಂದು ಸ್ವಾಮೀಜಿ ನುಡಿದರು.

ಯಾವ ಮಠಪೀಠಗಳಲ್ಲಿ ವಿದ್ವಾಂಸರಿಗೆ ಕಲಾವಿದರಿಗೆ ಶಾಸ್ತ್ರಕಾರರಿಗೆ ಮತ್ತು ಸನಾತನ ಪರಂಪರೆಯನ್ನು ಚಾಚು ತಪ್ಪದೆ ಪಾಲಿಸುವವರಿಗೆ ಮನ್ನಣೆ ಸಿಗುತ್ತದೆಯೋ ಅಲ್ಲಿ ಸಾಕ್ಷಾತ್ ಭಗವಂತನ ಆರಾಧನೆ ನಡೆಯುತ್ತದೆ. ಈ ನಿಟ್ಟಿನಲ್ಲಿ ಭಂಡಾರ ಕೇರಿ ಮಠ 70 ಜನ ವಿದ್ವಾಂಸರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿ ಅವರಿಂದ ವಿವಿಧ ವಿಚಾರಗಳ ಮಂಡನೆ ಮತ್ತು ಶಾಸ್ತ್ರ ಮಹಾಭಾರತ ರಾಮಾಯಣಗಳ ಸಾರ ಸಂಗ್ರಹಗಳ ಬೋಧನೆ ನಡೆದಿದೆ. ಈ ಸಂದರ್ಭದಲ್ಲಿ ಮಾಗ ಈ ಸಂದರ್ಭದಲ್ಲಿ ಮಾಗಡಿ ಸಮೀಪ ಇರುವ ಆನಂದವನ ಗುರುಕುಲದ ಸಮಗ್ರ ಪ್ರಗತಿಗೆ ಶ್ರೀಮಠವು ನಿಧಿ ಸಮರ್ಪಣೆಯನ್ನು ಮಾಡಿ ಧನ್ಯತೆ ಮೆರೆದಿದೆ ಎಂದು ಅವರು ಹೇಳಿದರು.

ಭಂಡಾರ ಕೇರಿ ಗುರುಗಳ 70ನೇ ವರ್ಧಂತಿ ಮಹೋತ್ಸವದ ಸಂದರ್ಭದಲ್ಲಿ 70 ಜನ ವಿದ್ವಾಂಸರಿಗೆ ಬೆಂಗಳೂರಿನ ಗಿರಿನಗರದ ಭಾಗವತ ಕೀರ್ತಿಧಾಮದಲ್ಲಿ ರಜತ ಪಾತ್ರೆ ಸಹಿತ ಸನ್ಮಾನಿಸಿ ಗೌರವಿಸಲಾಯಿತು ಭೀಮನ ಕಟ್ಟೆ ಮಠದ ಶ್ರೀ ರಘುವರೇಂದ್ರ ತೀರ್ಥ ಸ್ವಾಮೀಜಿ ಮತ್ತು ಬಂಡಾರಕೇರಿ ಮಠದ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.

ತೀರ್ಥಹಳ್ಳಿ ತಾಲೂಕು ಭೀಮನಕಟ್ಟೆ ಮಠದ ಶ್ರೀ ರಘುವರೇಂದ್ರ ತೀರ್ಥ ಸ್ವಾಮೀಜಿ ಸಾನಿಧ್ಯ ವಹಿಸಿ ಆಶೀರ್ವಚನವನ್ನು ನೀಡಿ, ಭಂಡಾರಕೇರಿ ಗುರುಗಳ ಶತಮಾನೋತ್ಸವವನ್ನು ನಾವೆಲ್ಲರೂ ಸಂಭ್ರಮದಿಂದ ಆಚರಿಸಲು ಸಂಕಲ್ಪಿಸೋಣ ಎಂದರು.
ಶ್ರೀ ಮಠವು ವಿದ್ವಜನರಿಗೆ ಅಪಾರವಾದ ಮನ್ನಣೆಯನ್ನು ಮತ್ತು ವೇದಿಕೆಯನ್ನು ನೀಡುತ್ತಿದೆ. ಸ್ವತಃ ಶ್ರೀಗಳೆ ರಚನೆ ಮಾಡಿರುವ ವಿದೇಶ ವಿಠಲ ಅಂಕಿತ ಕೃತಿಗಳ ಪ್ರಕಟಣೆಯು ಈಗ ನಡೆದಿದೆ. ಈ ಸಂದರ್ಭದಲ್ಲಿ ಬಿಡುಗಡೆಯಾದಂತಹ ಎರಡು ಮಹತ್ತರವಾದ ಕೃತಿಗಳು ನಮ್ಮ ಸಂಸ್ಕೃತಿ ಮತ್ತು ಪರಂಪರೆಗೆ ಸಾಕ್ಷಿಯಾಗಿವೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.

ಶ್ರೀ ವಿದ್ಯೇಶ ಸಪ್ತತಿ ವಿಚಾರ ವಿನೋದ ಉತ್ಸವ-ಶೀರ್ಷಿಕೆ ಅಡಿಯಲ್ಲಿ 70 ಜನ ಸಾರಂಗ ವಿದ್ವಾಂಸರಿಂದ ಚುಟುಕು ವೈವಿಧ್ಯ ಭರಿತ ಚೇತೋಹಾರಿ ವಿಚಾರ ಮಂಡನೆ ನಡೆಯಿತು.

ಮಹಾಭಾರತದ 18 ಪರ್ವಗಳು, ಭಾಗವತ ದ್ವಾದಶ ಸ್ಕಂದಗಳು ಮತ್ತು ಆರು ಉಪನಿಷತ್ತುಗಳ ಬಗ್ಗೆ 70 ಜನ ವಿದ್ವಾಂಸರಿAದ ವಿಚಾರ ವಿಮರ್ಶೆ ಮತ್ತು ವಿಚಾರ ಮಂಡನೆ ಗಮನ ಸೆಳೆಯಿತು.

ಭಂಡಾರ ಕೇರಿ ಗುರುಗಳ 70ನೇ ವರ್ಧಂತಿ ಕಾರ್ಯಕ್ರಮದಲ್ಲಿ ಬೆಂಗಳೂರಿನ ಮಾಗಡಿ ಸಮೀಪದ ಆನಂದವನ ಗುರುಕುಲಕ್ಕೆ 5 ಲಕ್ಷ ರೂ. ನಿಧಿ ಸಮರ್ಪಿಸಲಾಯಿತು. ಗುರುಕುಲದ ಟ್ರಸ್ಟಿ, ಶ್ರೀನಿವಾಸ ಗುತ್ತಲ ನಿಧಿ ಸ್ವೀಕಾರ ಮಾಡಿದರು.

ಬೆಂಗಳೂರಿನ ಶ್ರೀಜಯತೀರ್ಥ ವಿದ್ಯಾಪೀಠ, ಶ್ರೀ ಪೂರ್ಣ ಪ್ರಜ್ಞ ವಿದ್ಯಾಪೀಠ, ಮೈಸೂರಿನ ವ್ಯಾಸತೀರ್ಥ ವಿದ್ಯಾಪೀಠವೂ ಸೇರಿದಂತೆ ಮಂತ್ರಾಲಯ, ಸೋದೆ, ಪಲಿಮಾರು, ತಿರುಪತಿ, ಪುತ್ತಿಗೆ ಮತ್ತಿತರ ಮಹಾ ಸಂಸ್ಥಾನಗಳ ಗುರುಕುಲ ಮತ್ತು ವಿದ್ಯಾಪೀಠದ ವಿದ್ವಾಂಸರು ಭಾಗವಹಿಸಿದ್ದರು.

ಗ್ರಂಥ ಲೋಕಾರ್ಪಣೆ
ಶ್ರೀಮಠದ ಅಂಗಸಂಸ್ಥೆಯಾದ ಐತರೇಯ ಶೋಧ ಪ್ರಕಾಶನದ ವತಿಯಿಂದ ಪ್ರಣತಿ ದರ್ಪಣ ಎಂಬ ಗ್ರಂಥ (ಸಂಗ್ರಹ, ಅನುವಾದ- ಪಂಡಿತ ರಘೋತ್ತಮ ನಾಗಸಂಪಿಗೆ, ಪರಿಶೋಧನೆ ಹಾಗೂ ಪರಿಷ್ಕರಣೆ ಡಾ.ಎಚ್. ಸತ್ಯನಾರಾಯಣ ಆಚಾರ್ಯ) ಮತ್ತು ವಿದ್ಯೇಶ ವಿಚಾರ ಸಪ್ತತಿ, (ವಿವಿಧೆಡೆ ಶ್ರೀ ಭಂಡಾರ ಕೇರಿ ಗುರುಗಳು ಮಾಡಿದ ಉಪನ್ಯಾಸ, ಪ್ರವಚನ ಮತ್ತು ಅಮೃತೋಪದೇಶಗಳ ಸಾರ ಸಂಗ್ರಹ-ಉಡುಪಿಯ ಪಂಡಿತ ಸಗ್ರಿ ರಾಘವೇಂದ್ರ ಉಪಾಧ್ಯಾಯರಿಂದ ಸಂಪಾದಿತ ಕೃತಿ) ಇವುಗಳ ಲೋಕಾರ್ಪಣೆ ನೆರವೇರಿತು.

ಪೇಜಾವರ ವಿದ್ಯಾ ಪೀಠದ ಪ್ರಾಚಾರ್ಯ ಸತ್ಯನಾರಾಯಣ ಡಾ. ಶ್ರೀನಿಧಿ, ವಿದುಷಿ ಶುಭಾ ಸಂತೋಷ, ಜಯರಾಂ ಇತರರು ಹಾಜರಿದ್ದರು.
70 ಜನ ಪಂಡಿತರಿಗೆ ರಜತ ಪಾತ್ರಾ ಸಹಿತ ಸನ್ಮಾನ ಮಾಡಿದ್ದು ವೈದಿಕ ವಿದ್ವತ್ ಪ್ರಪಂಚದಲ್ಲಿ ಹೊಸ ಇತಿಹಾಸವನ್ನೇ ಸೃಷ್ಟಿಸಿತು.
ಗೌರವ ಸಮರ್ಪಣೆ
ಇದೇ ಸಂದರ್ಭದಲ್ಲಿ ಭೀಮನ ಕಟ್ಟೆ ಮಠದ ಶ್ರೀ ರಘುವರೇಂದ್ರ ತೀರ್ಥ ಸ್ವಾಮೀಜಿ ಅವರು ಪರಮಪೂಜ್ಯ ಭಂಡಾರಕೇರಿ ಶ್ರೀಗಳಿಗೆ ಮಲ್ಲಿಗೆ ಪುಷ್ಪದ ವಿಶೇಷ ಕಿರೀಟ ಸಮರ್ಪಣೆ ಮಾಡಿ ಗೌರವಿಸಿದರು.

ಗುರುಕುಲಕ್ಕೆ ನಿಧಿ ಸಮರ್ಪಣೆ
ಬೆಂಗಳೂರಿನ ಮಾಗಡಿ ಸಮೀಪದ ಅಡಕಮಾರನಹಳ್ಳಿಯಲ್ಲಿರುವ ಆನಂದವನ ಗುರುಕುಲಕ್ಕೆ ಭಂಡಾರ ಕೇರಿ ಮಠದ ವತಿಯಿಂದ 5 ಲಕ್ಷ ರೂಪಾಯಿ ವಿಶೇಷ ಅನುದಾನ ಪೂರ್ವಕ ಅನುಗ್ರಹ ನಿಧಿ ಸಮರ್ಪಣೆ ಮಾಡಲಾಯಿತು.

(ಆನಂದವನ ಗುರುಕುಲಕ್ಕೆ ದತ್ತಿ ದೇಣಿಗೆ ಮತ್ತು ದಾನ ನೀಡುವ ಆಸಕ್ತರು 7259040610 ಸಂಖ್ಯೆಗೆ ಸಂಪರ್ಕಿಸಬಹುದು).

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
Tags: Bandarakeri MuttBandarakeri Vidyeshatheertha ShriBENGALURUGurukulaKannada News WebsiteLatest News Kannadaಉಡುಪಿಗುರುಕುಲಬೆಂಗಳೂರುಭಂಡಾರಕೇರಿ ಮಠಭಾಗವತಾಶ್ರಮಭೀಮನಕಟ್ಟೆ ಮಠಶ್ರೀ ವಿದ್ಯೇಶ ತೀರ್ಥಸಂಸ್ಕೃತಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಯಾದವರು, ಮುಸ್ಲೀಮರು ನನ್ನಿಂದ ಯಾವ ಸಹಾಯ ನಿರೀಕ್ಷಿಸಬೇಡಿ: ಹೀಗೆ ಹೇಳಿದ ರಾಜಕಾರಣಿ ಯಾರು?

Next Post

ಸಾಗರ: ಗಾಂಜಾ ಮಾರುತ್ತಿದ್ದ ಮೂವರ ಮಾಲು ಸಹಿತ ಬಂಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಸಾಗರ: ಗಾಂಜಾ ಮಾರುತ್ತಿದ್ದ ಮೂವರ ಮಾಲು ಸಹಿತ ಬಂಧನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
MODEL DEMOCRACY AT KRCS

ಕುಮದ್ವತಿ ವಸತಿ ಶಾಲೆಯಲ್ಲಿ ಮಾದರಿ ಪ್ರಜಾಪ್ರಭುತ್ವ | ವಿದ್ಯಾರ್ಥಿ ಸಂಘದ ಚುನಾವಣೆ ಯಶಸ್ವಿ

June 22, 2026
ಸೇನಾ ದಾಳಿಯಿಂದ ದೇಶದ ಒಳಗಿನ ಶತ್ರುಗಳಿಗೂ ನಡುಕ ಪ್ರಾರಂಭ | ಕೆ.ಎಸ್. ಈಶ್ವರಪ್ಪ

ಪ್ರಿಯಾಂಕ ಖರ್ಗೆಗೆ ಸಂವಿಧಾನದ ಅರಿವಿಲ್ಲ: ಮಾಜಿ ಡಿಸಿಎಂ ಈಶ್ವರಪ್ಪ

June 22, 2026
B Y Raghavendra Yoga Day

ದೇಹ – ಮನಸ್ಸನ್ನು ಸದೃಢಗೊಳಿಸಲು ಯೋಗ ಸಹಕಾರಿ | ಸಂಸದ ರಾಘವೇಂದ್ರ ಅಭಿಮತ

June 22, 2026
ಮುಸಲ್ಮಾನ ಗೂಂಡಾಗಳಿಗೆ ಕಾಂಗ್ರೆಸ್ ಸರ್ಕಾರ ಬೆಂಬಲ ನೀಡುತ್ತಿರುವುದೇ ಗಲಭೆಗೆ ಕಾರಣ | ಈಶ್ವರಪ್ಪ ಕಿಡಿ

ಭಕ್ತಿಯನ್ನು ರಾಜಕೀಯಕ್ಕೆ ಬಳಸುವುದು ಮಹಾ ಪಾಪ: ಮಾಜಿ ಡಿಸಿಎಂ ಈಶ್ವರಪ್ಪ

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL