ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ/ಭದ್ರಾವತಿ |
ಮಹತ್ವದ ಬೆಳವಣಿಗೆಯಲ್ಲಿ ಜೂನ್ 20ರ ನಾಳೆ ಭಾನುವಾರ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ #H D Kumaraswamy ಅವರು ನಗರಕ್ಕೆ ಭೇಟಿ ನೀಡಲಿದ್ದು, ವಿಐಎಸ್’ಎಲ್ ಕಾರ್ಖಾನೆ ವೀಕ್ಷಿಸಲಿದ್ದಾರೆ.
ನಾಳೆ ಮುಂಜಾನೆ 7 ಗಂಟೆಗೆ ನವದೆಹಲಿಯಿಂದ ವಿಮಾನದಲ್ಲಿ ಹೊರಟು ಮಧ್ಯಾಹ್ನ 12.15ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ತಲುಪಲಿದ್ದಾರೆ.

ಆನಂತರ ವಿಐಎಎಸ್’ಎಲ್ ಕಾರ್ಮಿಕರು, ಸಿಬ್ಬಂದಿಗಳೊAದಿಗೆ ಮಾತುಕತೆ ನಡೆಸಲಿರುವ ಅವರು, ನಂತರ ಕಾರ್ಖಾನೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಸಂಜೆ 4 ಗಂಟೆಗೆ ರಸ್ತೆ ಮಾರ್ಗವಾಗಿ ಹೊರಟು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಲುಪಿ ವಿಶೇಷ ವಿಮಾನದಲ್ಲಿ ಬೆಂಗಳೂರಿನ ಎಚ್’ಎಎಲ್ ವಿಮಾನ ನಿಲ್ದಾಣ ತಲುಪಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post