Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಅಂಬೆಗಾಲು-6 ಕಿರುಚಿತ್ರ ಸ್ಪರ್ಧೆ | ಹಾಸ್ಯ ಕಥಾನಕವುಳ್ಳ ಸಾಕ್ಷ್ಯಚಿತ್ರಗಳಿಗೆ ಆದ್ಯತೆ: ಡಿ.ಎಸ್.ಅರುಣ್

July 2, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದ ಸಿನಿಮೊಗೆ-ಶಿವಮೊಗ್ಗ ಚಿತ್ರ ಸಮಾಜದ ವತಿಯಿಂದ ಅಂಬೆಗಾಲು-6 ಕಿರುಚಿತ್ರ ಸ್ಪರ್ಧೆ #Ambegalu Shortfilm Compition ಆಯೋಜಿಸಲಾಗಿದೆ ಎಂದು ಬೆಳ್ಳಿಮಂಡಲ ಕಾರ್ಯಾಧ್ಯಕ್ಷ ಹಾಗೂ ಅಂಬೆಗಾಲು ಕಿರುಚಿತ್ರ ಸ್ಪರ್ಧೆಯ ಸಂಚಾಲಕ ಡಿ.ಎಸ್. ಅರುಣ್ #D S Arun ಹೇಳಿದರು.

ಇಂದು ಪತ್ರಿಕಾಗೋಷ್ಠಿಯಲ್ಲಿ ಅಂಬೆಗಾಲು-6 ಕಿರುಚಿತ್ರ ಸ್ಪರ್ಧೆಯ ಲಾಂಛನವನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕಳೆದ ನಾಲ್ಕು ವರ್ಷಗಳಲ್ಲಿ ನಡೆದ ಅಂಬೆಗಾಲು ಕಿರುಚಿತ್ರ ಸ್ಪರ್ಧೆಗಳಲ್ಲಿ ಶಿವಮೊಗ್ಗ ಹಾಗೂ ಸುತ್ತಮುತ್ತಲಿನ ಕ್ರಿಯಾಶೀಲ ನಿರ್ದೇಶಕರು, ತಂತ್ರಜ್ಞರು ಪಾಲ್ಗೊಂಡು ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿರುವುದು ಹೆಮ್ಮೆಯ ಸಂಗತಿ ಎಂದರು.
ಇದುವರೆಗೂ ನಡೆದ ಅಂಬೆಗಾಲು ಕಿರುಚಿತ್ರದಲ್ಲಿ ಪ್ರಶಸ್ತಿ ಪಡೆದ ಚಿತ್ರಗಳು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿವೆ. ಈಗ ಆರನೇ ವರ್ಷದಲ್ಲಿ ಈ ಅಂಬೆಗಾಲು- 6 ಕಿರು ಚಿತ್ರ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದ್ದು, ರಾಜ್ಯದೆಲ್ಲೆಡೆಯಿಂದ ಶ್ರೇಷ್ಟ ಗುಣಮಟ್ಟದ ಕಿರು ಚಿತ್ರಗಳನ್ನು ನಿರೀಕ್ಷಿಸಲಾಗಿದೆ ಎಂದರು.

ಯುವಜನತೆಯಲ್ಲಿ ಚಲನಚಿತ್ರ ಕುರಿತಾಗಿ ಅರಿವು ಮೂಡಿಸುವ ಹಾಗೂ ಅವರಲ್ಲಿನ ಸೃಜನಶೀಲತೆಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಈ ಕಿರುಚಿತ್ರ ಸ್ಪರ್ಧೆಯನ್ನು ಅಯೋಜಿಸಲಾಗಿದ್ದು, ಶೀರ್ಷಿಕೆ ಹಾಗೂ ಟೈಟಲ್ ಕಾರ್ಡ್ ಸೇರಿ 5 ರಿಂದ 7 ನಿಮಿಷಗಳ ಕಿರುಚಿತ್ರಗಳನ್ನು ಸ್ಪರ್ಧೆಗೆ ಕಳುಹಿಸಬಹುದು ಎಂದರು.
ಮೊಬೈಲ್ ಸೇರಿದಂತೆ ಯಾವುದೇ ಕ್ಯಾಮರಾವನ್ನು ಬಳಸಿ ಚಿತ್ರೀಕರಿಸ ಬಹುದಾಗಿದ್ದು, ಸಾಮಾಜಿಕ ಜಾಲತಾಣಗಳೂ ಸೇರಿದಂತೆ ಯಾವುದೇ ಮಾಧ್ಯಮಗಳಿಗಿಂದ ದೃಶ್ಯಗಳನ್ನು ಕಟ್ ಅಂಡ್ ಪೇಸ್ಟ್ ಆಗಲೀ, ಸಾಕ್ಷ್ಯ ಚಿತ್ರವನ್ನಾಗಲೀ ಅಥವಾ ಸಂಪೂರ್ಣ ಎನಿಮೇಷನ್ ಚಿತ್ರಗಳನ್ನಾಗಲೀ ಸ್ಪರ್ಧೆಗೆ ಕಳಿಸುವಂತಿಲ್ಲ. ಸಂಪೂರ್ಣವಾಗಿ ಸ್ವಂತಿಕೆಯ ನಿರ್ದೇಶನದ ಯಾವುದೇ ವಿಷಯವನ್ನು ಕುರಿತು ಕಿರು ಚಿತ್ರ ನಿರ್ಮಿಸಬಹುದು. ಹಾಸ್ಯ ಕಥಾನಕವುಳ್ಳ ಕಿರುಚಿತ್ರಗಳಿಗೆ ವಿಶೇಷ ಆದ್ಯತೆಯಿದೆ ಎಂದರು.

Also read: ವಿಶ್ವದಲ್ಲಿ ಮಾನವಶಕ್ತಿ ಉತ್ಪಾದಿಸುವ ಕೇಂದ್ರ ಭಾರತ: ಎಮ್‌ಎಲ್‌ಸಿ ಡಾ. ಧನಂಜಯ ಸರ್ಜಿ ಅಭಿಪ್ರಾಯ

ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕರು, ಕಲಾವಿದರು ತೀರ್ಪುಗಾರರಾಗಿ ಪಾಲ್ಗೊಳ್ಳಲಿದ್ದು, ಈ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ರೂ. 50,000 ರೂಗಳ ಪ್ರಥಮ ಬಹುಮಾನ, ರೂ. 30,000.00 ರೂ.ಗಳ ದ್ವಿತೀಯ ಬಹುಮಾನ ಜೊತೆಗೆ ಶ್ರೇಷ್ಟ ನಟ, ಶ್ರೇಷ್ಟ ನಟಿ, ಶ್ರೇಷ್ಟ ನಿರ್ದೇಶಕ, ಶ್ರೇಷ್ಟ ಕಥೆ-ಚಿತ್ರಕಥೆ, ಶ್ರೇಷ್ಟ ಛಾಯಾಗ್ರಹಣ, ಶ್ರೇಷ್ಟ ಸಂಗೀತ, ಶ್ರೇಷ್ಟ ಸಂಗೀತ ವಿಭಾಗಗಳಲ್ಲಿ ಹತ್ತು ಮಂದಿಗೆ ತಲಾ 5,000 ನಗದು ಆಕರ್ಷಣೀಯ ಸ್ಮರಣಿಕೆಗಳಿವೆ ಎಂದರು.

ಪ್ರಶಸ್ತಿ ಪುರಸ್ಕೃತರಿಗೆ ಅಕ್ಟೋಬರ್ ಮಾಸಾಂತ್ಯದಲ್ಲಿ, ನಡೆಯುವ ವರ್ಣರಂಜಿತ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು. ಕಿರು ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು 1,000.00 ರೂ.ಗಳ ಪ್ರವೇಶ ಶುಲ್ಕವಿದ್ದು, ಅರ್ಜಿಗಳನ್ನು ಬಿ.ಹೆಚ್. ರಸ್ತೆಯ ದೀಪಕ್ ಪೆಟ್ರೋಲ್ ಬಂಕ್‍ನಲ್ಲಿ ಪಡೆದು, ಭರ್ತಿ ಮಾಡಿ ಜುಲೈ 31ರ ಒಳಗಾಗಿ, ಕಿರು ಚಿತ್ರಗಳನ್ನು ನಾಲ್ಕು ಹೆಚ್‍ಡಿ ಶ್ರೇಣಿಯ ಡಿವಿಡಿ ಸಹಿತ ಆಗಸ್ಟ್ 30, 2024 ಒಳಗಾಗಿ ಸಲ್ಲಿಸಬಹುದು. ಸ್ಪರ್ಧೆಯ ವಿವರಗಳಿಗೆ ವೈದ್ಯ – 98444 56505, 94492 84495, 96865 59950 ಸಂಪರ್ಕಿಸಬಹುದು ಎಂದರು.

ಬೆಳ್ಳಿ ಮಂಡಲದ ವೈದ್ಯ ಮಾತನಾಡಿ, ಶಿವಮೊಗ್ಗದಲ್ಲಿ ಚಲನಚಿತ್ರಕ್ಕೆ ಸಂಬಂಧಿಸಿದಂತೆ ರಸಗ್ರಹಣ ಕಾರ್ಯಾಗಾರ ಹಾಗೂ ಅಂತರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಏರ್ಪಡಿಸಲು ಚಿಂತನೆ ನಡೆಸಲಾಗಿದೆ. ಅಕ್ಟೋಬರ್ ಅಥವಾ ನವಂಬರ್‍ನಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಹಮ್ಮಿಕೊಳ್ಳಲಾಗುವುದು. ಹಾಗೆಯೇ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸುವ ಹಿನ್ನಲೆಯಲ್ಲಿ ಮತ್ತು ಶಿವಮೊಗ್ಗವನ್ನು ಒಂದು ಚಲನಚಿತ್ರ ಚಟುವಟಿಕೆಗಳ ಕೇಂದ್ರವನ್ನಾಗಿಸುವ ದೃಷ್ಟಿಯಿಂದ ಕಾರ್ಯಗಾರವನ್ನು ಆಯೋಜಿಸಲಾಗುವುದು ಎಂದರು.
ಪತ್ರಿಕಾಗೋಷ್ಟಿಯಲ್ಲಿ ಪ್ರಮುಖರಾದ ಡಾ. ನಾಗಭೂಷಣ, ಜಿ.ವಿಜಯಕುಮಾರ್, ಚೇತನ್, ಆನಂದ, ಚಂದ್ರಶೇಖರ್, ಶಿವಾನಂದ್, ಸುಕುಮಾರ್, ಸಂತೋಷ್, ಮಂಜುನಾಥ್, ಶ್ರೀನಿಧಿ ಚೇತನ್, ರಘುನಂದನ್, ಶಿವು, ಎನ್.ಬಿ.ರವೀಶ, ಮೊದಲಾದವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
 

Tags: Ambegalu Shortfilm CompitionD S ArunKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಅಂಬೆಗಾಲು-6 ಕಿರುಚಿತ್ರ ಸ್ಪರ್ಧೆಡಿ.ಎಸ್. ಅರುಣ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ವಿಶ್ವದಲ್ಲಿ ಮಾನವಶಕ್ತಿ ಉತ್ಪಾದಿಸುವ ಕೇಂದ್ರ ಭಾರತ: ಎಮ್‌ಎಲ್‌ಸಿ ಡಾ. ಧನಂಜಯ ಸರ್ಜಿ ಅಭಿಪ್ರಾಯ

Next Post

ಶಿವಮೊಗ್ಗ: ಸಾರ್ವಜನಿಕ ಶುದ್ದ ಕುಡಿಯುವ ನೀರಿನ ಘಟಕ ಲೋಕಾರ್ಪಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ: ಸಾರ್ವಜನಿಕ ಶುದ್ದ ಕುಡಿಯುವ ನೀರಿನ ಘಟಕ ಲೋಕಾರ್ಪಣೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025

ಜೂನ್ 30ಕ್ಕೆ ಅನ್ವಯಿಸುವಂತೆ ಮೈಸೂರು-ಶಿವಮೊಗ್ಗ-ತಾಳಗುಪ್ಪ ಎಕ್ಸ್’ಪ್ರೆಸ್ ರೈಲಿನ ಬಿಗ್ ಅಪ್ಡೇಟ್

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!