ಕಲ್ಪ ಮೀಡಿಯಾ ಹೌಸ್ | ಚಂಡೀಗಢ |
ನಿಗದಿಕ್ಕಿಂತಲೂ ಹೆಚ್ಚಿನ ಮಕ್ಕಳನ್ನು ತುಂಬಿದ ಪರಿಣಾಮ ಶಾಲಾ ಬಸ್ ಅಪಫಾತಕ್ಕೀಡಾಗಿದ್ದು, 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹರಿಯಾಣದ ಪಂಚಕುಲದಲ್ಲಿ ನಡೆದಿದೆ.
ಇಲ್ಲಿನ ಪಿಂಜೋರ್ ಬಳಿಯ ಗುಡ್ಡಗಾಡು ಪ್ರದೇಶದಲ್ಲಿ ಹರಿಯಾಣ ರೇಡ್ ವೇಸ್ ಬಸ್ ಪಲ್ಟಿಯಾಗಿದ್ದು, 40ಕ್ಕೂ ಅಧಿಕ ಮಕ್ಕಳಿಗೆ ಗಾಯವಾಗಿದೆ.
Also read: ಎಂಜಿನಿಯರಿಂಗ್ ಪ್ರವೇಶಾತಿ ಆಪ್ಷನ್ ಎಂಟ್ರಿ ವೇಳೆ ಜಾಗೃತರಾಗಿರಿ
ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ಮತ್ತು ಪಂಚಕುಲದ ಸೆಕ್ಟರ್ 6 ಸಿವಿಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತಕ್ಕೆ ನಿಗದಿಗಿಂತಲೂ ಹೆಚ್ಚು ಪ್ರಯಾಣಿಕರನ್ನು ಹಾಕಿದ್ದು ಹಾಗೂ ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಇನ್ನೊಂದೆಡೆ ಕಳಪೆ ಗುಣಮಟ್ಟದ ರಸ್ತೆಯೂ ಸಹ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದ್ದು, ಸ್ಪಷ್ಟ ಕಾರಣ ತಿಳಿದುಬಂದಿಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news






















