ಕಲ್ಪ ಮೀಡಿಯಾ ಹೌಸ್ | ದಕ್ಷಿಣಕನ್ನಡ/ಶಿವಮೊಗ್ಗ |
ಕಳೆದ ವಾರ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದ ವರುಣ ನಿನ್ನೆಯಿಂದ ಕೊಂಚ ಶಾಂತವಾಗಿದ್ದಾನೆ.
ಕರಾವಳಿ ಮಳೆ ಮುನ್ಸೂಚನೆ:
ಹವಾಮಾನ ಇಲಾಖೆಯ ವರದಿಯಂತೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಆರೆಂಜ್ ಹಾಗೂ ಜುಲೈ 27ರವೆರಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇನ್ನು, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಇಂದು ಆರೆಂಜ್ ಹಾಗೂ ಕೊಡಗು, ಹಾಸನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಇಂದು ಮುಂಜಾನೆಯ ವರದಿಯಂತೆ ನಾಳೆಯಿಂದ ಜುಲೈ 27ರವರೆಗೂ ಈ ನಾಲ್ಕೂ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇಲ್ಲ.
ಬೆಳಗಾವಿ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ನಾಳೆಯಿಂದ ಮಳೆಯ ಸಾಧ್ಯತೆಯಿಲ್ಲ ಎಂದು ವರದಿ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 











Discussion about this post