ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸೋಗಾನೆ ವಿಮಾನ ನಿಲ್ದಾಣ #Shivamogga Airport ಆರಂಭವಾಗಿ ನಿರಂತರವಾಗಿ ವಿಮಾನ ಹಾರಾಟ ಯಶಸ್ವಿಯಾಗಿ ಎರಡು ವರ್ಷ ಕಳೆಯುವುದರ ಒಳಗಾಗಲೇ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರಿನಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ #MP B Y Raghavendra ಪ್ರಯತ್ನ ನಡೆಸಿದ್ದಾರೆ.
ಹೌದು… ಕರಾವಳಿ ವ್ಯಾಪ್ತಿಯ ಪ್ರದೇಶದ ಸಮಗ್ರ ಅಭಿವೃದ್ಧಿಯನ್ನು ದೃಷ್ಠಿಯಲ್ಲಿಟ್ಟುಕೊಂಡು ಈ ಪ್ರಯತ್ನ ಆರಂಭಿಸಿರುವ ಸಂಸದರು, ಈ ಕುರಿತಂತೆ ಮಂಜೂರಾತಿಗಾಗಿ ಕೇಂದ್ರ ವಿಮಾನಯಾನ ಸಚಿವರಿಗೆ ಮನವಿ ಸಹ ಸಲ್ಲಿಸಿದ್ದಾರೆ.
Also read: ಪ್ರಕೃತಿಯ ಮುನಿಸಿಗೆ ನೂರಾರು ಜನರ ಬದುಕು ನಾಶ | ಸಮೃದ್ಧ ಊರಿನ ದುರಂತ ಅಂತ್ಯ
ಕೇಂದ್ರ ವಿಮಾನಯಾನ ಸಚಿವರಾದ ಕಿಂಜರಾಪು ರಾಮ ಮೋಹನ ನಾಯ್ಡು ಅವರನ್ನು ಭೇಟಿಯಾಗಿರುವ ಅವರು, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಒತ್ತಿನೆಣೆಯಲ್ಲಿ ಮೂಕಾಂಬಿಕಾ ವಿಮಾನ ನಿಲ್ದಾಣ ಮಂಜೂರು ಮಾಡಲು ಮನವಿ ಮಾಡಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಉಡುಪಿ ಜಿ¯್ಲೆಯ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನವು ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕೇಂದ್ರಗಳಲ್ಲಿ ಒಂದಾಗಿದೆ. ಭಾರತದ ವಿವಿಧ ರಾಜ್ಯಗಳಿಂದ ಹಾಗೂ ಹೊರದೇಶಗಳಿಂದ ಪ್ರತಿದಿನ 10,000 ಕ್ಕೂ ಹೆಚ್ಚು ಯಾತ್ರಾರ್ಥಿಗಳು ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ ಎಂದು ಸಚಿವರಿಗೆ ಮಾಹಿತಿ ನೀಡಿದ್ದಾರೆ.
ಬೈಂದೂರು ಮೂಕಾಂಬಿಕಾ ರೋಡ್ ರೈಲ್ವೆ ನಿಲ್ದಾಣ ಹಾಗೂ ಬಸ್ ನಿಲ್ದಾಣದ ಅತೀ ಸಮೀಪವಿರುವ ಒತ್ತಿನೆಣೆಯಲ್ಲಿ ಸುಮಾರು 500 ಎಕರೆಗೂ ಅಧಿಕ ಸ್ಥಳ ಲಭ್ಯವಿದೆ. ಅಲ್ಲಿ ವಿಮಾನ ನಿಲ್ದಾಣ ನಿರ್ಮಿಸಿದರೆ ಭಕ್ತಾಧಿಗಳಿಗೆ ಸಾಕಷ್ಟು ಅನುಕೂಲವಾಗಲಿದೆ. ಆದ್ದರಿಂದ ಮೂಕಾಂಬಿಕಾ ವಿಮಾನ ನಿಲ್ದಾಣಕ್ಕೆ ಮಂಜೂರಾತಿ ನೀಡುವಂತೆ ಮನವಿ ಮಾಡಿದ್ದಾರೆ.
ಮನವಿಯ ಬಗ್ಗೆ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದ್ದು, ಆದಷ್ಟು ಶೀಘ್ರವಾಗಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಸಂಸದರೊAದಿಗೆ ತೆರಳಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post