ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಸ್ಕೌಟ್ ಮತ್ತು ಗೈಡ್ಸ್ ಕೇವಲ ಸಂಸ್ಥೆಯಲ್ಲ, ಅದು ಒಂದು ಜೀವನದ ಪದ್ಧತಿ, ಸೇವಾ ಮನೋಭಾವ ಗುಣಗಳನ್ನು ವಿದ್ಯಾರ್ಥಿಗಳಿಗೆ ಎಳವೆಯಿಂದಲೇ ಶಿಕ್ಷಕರು ಕಲಿಸಬೇಕಿದೆ. ಬದುಕಿನ ಸಾರ್ಥಕತೆಗೆ ಮಾನವೀಯ ಮೌಲ್ಯಗಳು ಭೂಷಣವಾಗಿವೆ ಎಂದು ಭಾರತ್ ಸ್ಕೌಟ್ಸ್ ಗೈಡ್ಸ್ ರಾಜ್ಯ ಸಂಸ್ಥೆಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್ ಸಿಂಧ್ಯಾ ಹೇಳಿದರು.
ಇಲ್ಲಿನ ಕ್ರೈಸ್ಟ್ಕಿಂಗ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ರೋವರ್ಸ್ ಮತ್ತು ರೇಂಜರ್ಸ್ ನೂತನ ಘಟಕಕ್ಕೆ ದೀಪ ಬೆಳಗುವ ಮೂಲಕ ಚಾಲನೆ ನೀಡಿ, ಅವರು ಮಾತನಾಡಿದರು.

Also read: ಶಿವಮೊಗ್ಗ | ಪುನೀತ್ ಕೆರೆಹಳ್ಳಿ ಮೇಲೆ ದೌರ್ಜನ್ಯ | ಎಸಿಪಿ ಚಂದನ್ ಕುಮಾರ್ ಅಮಾನತಿಗೆ ಆಗ್ರಹ
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕ್ರೈಸ್ಟ್ಕಿಂಗ್ ಎಜುಕೇಷನ್ ಟ್ರಸ್ಟ್ನ ಸದಸ್ಯರಾದ ಡಾ. ಪೀಟರ್ ಫೆರ್ನಾಂಡಿಸ್ ಅವರು ಮಾತನಾಡಿ ತರಗತಿ ಶಿಕ್ಷಣಕ್ಕಿಂತ ಬಯಲು ಶಿಕ್ಷಣ ವಿದ್ಯಾರ್ಥಿಗಳ ಜೀವನ ನಿರ್ಮಾಣದಲ್ಲಿ ಸಹಾಯಕವಾಗಿದೆ, ಸದೃಢ ದೇಶ ನಿರ್ಮಾಣದಲ್ಲಿ ವಿದ್ಯಾವಂತ ಹಾಗೂ ಬುದ್ಧಿವಂತರ ಜೊತೆಗೆ ಪ್ರಜ್ಞಾವಂತ ಯುವಕರನ್ನು ತಯಾರಿಸುವಲ್ಲಿ ಹಾಗೂ ಸಾಮಾಜಿಕ ಕಳಕಳಿ ಮೂಡಿಸುವಲ್ಲಿ ಈ ಸ್ಕೌಟ್ಸ್ ಗೈಡ್ಸ್ ಸಂಸ್ಥೆ ಮುಂಚೂಣಿಯಲ್ಲಿದೆ. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗುವ ಯಾವುದೇ ರೀತಿಯ ಕಾರ್ಯ ಚಟುವಟಿಕೆಗಳನ್ನು ನಮ್ಮ ಸಂಸ್ಥೆಯು ನಡೆಸಿಕೊಂಡು ಬರುತ್ತಿದೆ ಎಂದು ಹೇಳಿದರು.

ಸಮಾರಂಭದಲ್ಲಿ ರಾಜ್ಯ ಸಂಸ್ಥೆಯ ಸಂಘಟನಾ ಆಯುಕ್ತ ಪ್ರಭಾಕರ್ ಭಟ್, ಜಿಲ್ಲಾ ಸಹ ಆಯುಕ್ತರಾದ ಜ್ಯೋತಿ ಪೈ, ಕಾರ್ಯದರ್ಶಿ ಆನಂದ ಅಡಿಗ, ಸಂಸ್ಥೆಯ ಪದವಿ ಪೂರ್ವ ವಿಭಾಗದ ಪ್ರಾಂಶುಪಾಲರಾದ ಲಕ್ಷ್ಮೀನಾರಾಯಣ ಕಾಮತ್, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕರಾದ ಡೊಮಿನಿಕ್ ಅಂದ್ರಾದೆ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕರಾದ ರುಢಾಲ್ಫ್ ಕಿಶೋರ್ ಲೋಬೊ, ಆಡಳಿತಾಧಿಕಾರಿಯಾದ ವಿನಯ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









Discussion about this post