ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತುಂಗಾ ಜಲಾಶಯವು #Tunga Reservoir ಸಂಪೂರ್ಣ ಭತಿಯಾಗಿ ಜಲಾಶಯದಿಂದ ಕ್ರಸ್ಟ್ಗಳ ಮೂಲಕ ನೀರು ಹೊರಬಿಡಲಾಗುತ್ತಿದ್ದು, ತುಂಗಾ ಜಲಾಶಯ ಪ್ರದೇಶದ ಸುತ್ತಮುತ್ತ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ #DC Gurudatta Hegade ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಇನ್ನೂ ಕೆಲವು ದಿನ ಮಳೆಯ ತೀವ್ರತೆ ಹೆಚ್ಚಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಾರ್ವಜನಿಕರ ಹಿತದೃಷ್ಟಿ ಮತ್ತು ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 3ರಿಂದ ಸೆಪ್ಟೆಂಬರ್ 2ರವರೆಗೆ ತುಂಗಾ ಜಲಾಶಯ ಪ್ರದೇಶದ ಸುತ್ತಮುತ್ತ 500ಮೀ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.
Also read: ಶೀಘ್ರ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಶಾಸಕ ಚನ್ನಬಸಪ್ಪ ಸೂಚನೆ
ನಿರ್ಬಂಧಗಳು ಹೀಗಿವೆ:
- ಐದು ಮತ್ತು ಐದಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವುದನ್ನು ನಿರ್ಬಂಧಿಸಿದೆ.
- ತುಂಗಾ ನದಿಯಲ್ಲಿ ನೀರಿಗೆ ಇಳಿಯುವುದನ್ನು, ಫೋಟೋ ತೆಗೆಯುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಿದೆ.
- ಜಲಾಶಯವು ಸಂರಕ್ಷಿತಾ ಪ್ರದೇಶವಾಗಿರುವುದರಿಂದ, ಸದರಿ ಗೇಟಿನಲ್ಲಿ ಗುಂಪುಗೂಡುವುದು, ಡ್ಯಾಂನ ಮೇಲೆ ಹೋಗುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.
- ಜಲಾಶಯದ ಸೆಕ್ಯೂರಿಟಿ, ಸಿಬ್ಬಂದಿಗಳಿಗೆ ಯಾವುದೇ ತೊಂದರೆ ಉಂಟು ಮಾಡುವಂತಿಲ್ಲ
- ಬಾಗಿನ ನೀಡಲು ಬರುವವರು ನೀರಿನಲ್ಲಿ ಇಳಿಯುವಂತಿಲ್ಲ ಹಾಗೂ ಈಜಾಡುವಂತಿಲ್ಲ
- ನಿಷೇಧಾಜ್ಞೆ ಸಮಯದಲ್ಲಿ ಆಯುಧ, ಶಸ್ತ್ರಾಸ್ತ್ರಗಳು ಮತ್ತು ಮಾರಕಾಸ್ತ್ರಗಳನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ತಿರುಗಾಡುವುದನ್ನು ನಿಷೇಧಿಸಿದೆ.
- ಯಾವುದೇ ರೀತಿಯ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿ ಉಂಟು ಮಾಡತಕ್ಕದ್ದಲ್ಲ.
- ಸಾರ್ವಜನಿಕ ಗಾಂಭಿರ್ಯ ಹಾಗೂ ನೈತಿಕತೆಗೆ ಭಂಘ ತರುವಂತಹ ಅಥವಾ ಕಾನೂನು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post