ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಕ್ಫ್ ಬೋರ್ಡ್ #Waqf Board ಕಾನೂನಿನ ತಿದ್ದುಪಡಿಯಿಂದ ದೇಶದ ಅನೇಕ ಅಲ್ಪಸಂಖ್ಯಾತ ಬಡವರಿಗೆ ನ್ಯಾಯ ಸಿಗಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ #B Y Raghavendra ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ನೆಹರು ಕಾಲದಿಂದ ವಕ್ಫ್ ಕಮಿಟಿ ರಚನೆ ಮಾಡಿ ಕಾನೂನಿನ ಚೌಕಟ್ಟಿನಲ್ಲಿ ವಕ್ಫ್ ಬೋರ್ಡ್ ತೀರ್ಮಾನಕ್ಕೆ ಸುಪ್ರೀಂ ಕೋರ್ಟ್ಕೂಡ ಪ್ರಶ್ನೆ ಮಾಡುವ ಆಗಿಲ್ಲ ಎಂದು ಕಾಂಗ್ರೆಸ್ ಆಡಳಿತಾವಧಿಯಲ್ಲಿ ಅವಕಾಶ ಕಲ್ಪಿಸಿಕೊಟ್ಟಿತ್ತು. ಇದರ ಮರುಪರಿಶೀಲನೆಗೆ ಸಂವಿಧಾನ ಬದ್ಧ ತಿದ್ದುಪಡಿಗೆ ಮತ್ತು ವಕ್ಫ್ ಬೋರ್ಡ್ ತೀರ್ಮಾನವನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನೆ ಮಾಡುವ ಅಧಿಕಾರ ಕಲ್ಪಿಸುವ ಸಂವಿಧಾನಬದ್ಧ ಬಿಲ್ನ್ನು ಸಂಸತ್ನಲ್ಲಿ ಮಂಡಿಸಿದ್ದು, ಇದಕ್ಕೆ ಸಕರಾತ್ಮಕ ಜಯ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Also read: ಬಾಂಗ್ಲಾ ಹಂಗಾಮಿ ಪಿಎಂ ಹೇಳ್ತಾರೆ | ಭಾರತವನ್ನು ಈ ವಿಷಯಕ್ಕೆ ಕ್ಷಮಿಸಲು ಸಾಧ್ಯವಿಲ್ಲವಂತೆ!
ಬಿಜೆಪಿ ಜೆಡಿಎಸ್ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಒಂದೇ ಕುಟುಂಬದೊಳಗೆ ಅನೇಕ ಬಾರಿ ಸಣ್ಣಪುಟ್ಟ ವ್ಯತ್ಯಾಸಗಳು ಇರುತ್ತವೆ. ಅದನ್ನು ಕೂತು ಬಗೆಹರಿಸಿಕೊಳ್ಳುತ್ತೇವೆ ಎಂದರು. ವಿಮಾನ ನಿಲ್ದಾಣ ತರಾತುರಿಯಲ್ಲಿ ಉದ್ಘಾಟನೆಯಾಗಿಲ್ಲ. ಶೇ.99ರಷ್ಟು ಕೆಲಸ ಮುಗಿದಿದೆ. ವಿಮಾನಗಳು ಯಶಸ್ವಿಯಾಗಿ ಹಾರಾಟ ಮಾಡುತ್ತಿವೆ. ಏನಾದರೂ ಶಿವಮೊಗ್ಗದಲ್ಲಿ ವಿಮಾನ ಹಾರಾಟ ನಿಂತರೆ ಅದಕ್ಕೆ ಕಾಂಗ್ರೆಸ್ ಸರ್ಕಾರವೇ ಕಾರಣವಾಗುತ್ತದೆ. ಸರ್ಕಾರ ಗುತ್ತಿಗೆದಾರರಿಗೆ ಬಿಲ್ ಪಾವತಿ ಮಾಡದೇ ವಿಳಂಬವಾಗುತ್ತಿದೆ. ಬಿ.ಎಫ್.ಆರ್.ನಿಂದ ಐಎಫ್ಆರ್ಗೆ ಅನುಮತಿಗೆ ಪತ್ರ ಬರೆದಿದ್ದು, ಸಣ್ಣಪುಟ್ಟ ಕೆಲಸ ರಾಜ್ಯ ಸರ್ಕಾರದಿಂದ ಆಗಬೇಕಿದೆ ಎಂದರು.

ಕೊಲ್ಲೂರು ಮೂಕಾಂಭಿಕಾ ಕಾರಿಡಾರ್’ಗೆ ವಿತ್ತ ಸಚಿವರನ್ನು ಭೇಟಿ ಮಾಡಲಾಗಿದೆ. ಇಎಸ್ಐ ಆಸ್ಪತ್ರೆ ಕಾಮಗಾರಿ ಪೂರ್ಣಗೊಳಿಸಲು ಶೋಭಾ ಕರಂದ್ಲಾಜೆ ಅವರಿಗೆ ಭೇಟಿ ಮಾಡಿ ವಿನಂತಿಸಿದ್ದೇನೆ. ಆರೋಗ್ಯ ಸಚಿವರು ಮತ್ತು ಗಡ್ಕರಿ ಅವರನ್ನು ಭೇಟಿ ಮಾಡಿ ವಿವಿಧ ಕಾಮಗಾರಿಗಳ ಬಗ್ಗೆ ಚರ್ಚಿಸಿದ್ದೇನೆ. ಒಂದೇ ಭಾರತ್ ರೈಲು ಸಂಚಾರ ಒಂದು ವಾರದೊಳಗೆ ಆರಂಭವಾಗುವ ಶುಭ ಸೂಚನೆ ದೊರೆತಿದೆ. ಪ್ರವಾಸಿಗರ ಹಿತದೃಷ್ಠಿಯಿಂದ ಜೋಗದ ಬಳಿ ಸುಸಜ್ಜಿತ ಹೋಟೆಲ್ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕ ಡಾ.ಧನಂಜಯಸರ್ಜಿ, ಮಾಜಿ ಶಾಸಕ ಅಶೋಕ್ ನಾಯ್ಕ್, ಪ್ರಮುಖರಾದ ಮಾಲತೇಶ್, ದಿವಾಕರ್ ಶೆಟ್ಟಿ, ರಾಜೇಶ್ ಕಾಮತ್ ಮತ್ತಿತರರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 







Discussion about this post