ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ವಾಹನ ಓಡಿಸುವಾಗ ಸರಿಯಾದ ದಾಖಲೆಗಳನ್ನು ಇಟ್ಟುಕೊಂಡು ಹೋಗಬೇಕು ಎಂಬುವುದು ಕಾನೂನು, ಆ ಕಾನೂನನ್ನು ಪ್ರತಿಯೊಬ್ಬರು ಚಾಚು ತಪ್ಪದೆ ಮಾಡಲೇಬೇಕು. ವಾಹನಗಳಲ್ಲಿ ಸರಿಯಾದ ದಾಖಲಾತಿ ಇಟ್ಟುಕೊಳ್ಳದೆ ಹೋದರೆ ದಂಡ ಕಟ್ಟಬೇಕಾಗುತ್ತದೆ.
ಹೀಗೆ ಸಾರ್ವಜನಿಕರ ವಾಹನಗಳನ್ನು ತಡೆದು ದಾಖಲಾತಿಗಳನ್ನು ಪರಿಶೀಲನೆ ಮಾಡುವುದು ಸರಿ. ಆದರೆ ಸರ್ಕಾರಿ ವಾಹನಗಳಲ್ಲೇ ದಾಖಲೆ ಸರಿಯಿಲ್ಲದಿದ್ದರೆ ಅದಕ್ಕೆ ಹೊಣೆ ಯಾರು? ದಂಡ ಯಾರಿಗೆ ಎಂಬ ಪ್ರಶ್ನೆಯನ್ನು ಸಾರ್ವಜನಿಕರು ಕೇಳುತ್ತಿದ್ದಾರೆ.
Also read: ಭದ್ರಾವತಿ | ಕೂಡ್ಲಿಗೆರೆಯಲ್ಲಿ ಕರಡಿ ದಾಳಿ | ವ್ಯಕ್ತಿಗೆ ಗಾಯ | ಬಾರದ ಅರಣ್ಯಾಧಿಕಾರಿಗಳು | ಗ್ರಾಮಸ್ಥರ ಆಕ್ರೋಶ

ವಿಷಯ ತಿಳಿದು ತಾಲೂಕು ಕಚೇರಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಬಳಿ ಕೇಳಿದಾಗ ಇನ್ಶೂರೆನ್ಸ್ ಹಣವನ್ನು ಕಟ್ಟಿದ್ದೇವೆ. ಆದರೆ ಬಾಂಡ್ ಬಂದಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಅದೇನೇ ಆಗಲಿ ಸರ್ಕಾರಿ ವಾಹನಗಳಿಗೆ ಒಂದು ನ್ಯಾಯ ಸಾರ್ವಜನಿಕರ ವಾಹನಗಳಿಗೆ ಒಂದು ನ್ಯಾಯವೇ? ಅದಕ್ಕೆ ದಂಡ ಇಲ್ಲವೇ? ಹೀಗೆ ಮಾಡುವುದು ಸರಿಯೇ ಎಂದು ಸಾರ್ವಜನಿಕರು ಮಾತನಾಡುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post