No Result
View All Result
IBM and Yotta Announce Plans to Deliver Agentic AI Platform for Indian Enterprises
English Articles

IBM and Yotta Announce Plans to Deliver Agentic AI Platform for Indian Enterprises

by ಕಲ್ಪ ನ್ಯೂಸ್
May 9, 2026
0

Kalpa Media House  |  Bengaluru | IBM (NYSE: IBM) and Yotta Data Services Private Limited ("Yotta") today announced plans to...

Read moreDetails
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
  • Advertise With Us
  • Grievances
  • About Us
  • Contact Us
Sunday, May 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕಪ್ಪುಚುಕ್ಕೆ ರಿಮೂವಡ್ ಫ್ರಮ್ ವೈಟ್ನರ್: ಸಿದ್ದರಾಮಯ್ಯಗೆ ಕುಮಾರಸ್ವಾಮಿ ಟಾಂಗ್

ಬೇಲಿಕೇರಿಯಲ್ಲಿ ಅದಿರು ಕದ್ದ ಅಸಾಮಿಗಳ ಜತೆ 'ಸಿದ್ಧಹಸ್ತ' ಶಾಮೀಲು ಆರೋಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 23, 2024
in ಬೆಂಗಳೂರು ನಗರ
0
ವಿದೇಶಕ್ಕೆ ನಿಮ್ಮ ಮಗ ಸಾಯಲಿ ಅಂತಲೇ ಕಳಿಸಿದ್ಧಿರಾ? ಸಿಎಂ ವಿರುದ್ಧ ಹೆಚ್‌ಡಿಕೆ ತೀಕ್ಷ್ಣ ವಾಗ್ದಾಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ತಮ್ಮ 40 ವರ್ಷಗಳ ರಾಜಕೀಯ ಜೀವನದಲ್ಲಿ ನನ್ನ ಮೇಲೆ ಒಂದೇ ಒಂದು ಕಪ್ಪುಚುಕ್ಕೆ ಇಲ್ಲವೆನ್ನುವ ನೀವು, ವೈಟ್ನರ್ ಉಜ್ಜಿ ಕಪ್ಪುಚುಕ್ಕೆ ತೆಗೆಯುವ ವ್ಯರ್ಥ ಪ್ರಯತ್ನ ಮಾಡಿದ್ದೇಕೆ? ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ #H D Kumaraswamy ಅವರು ಸಿಎಂ ಸಿದ್ದರಾಮಯ್ಯ #CM Siddaramaiah ಅವರಿಗೆ ನೇರ ಪ್ರಶ್ನೆ ಹಾಕಿದ್ದಾರೆ.

ತಮ್ಮ ಬಗ್ಗೆ ಎಕ್ಸ್ ಖಾತೆಯಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಸಿದ್ದರಾಮಯ್ಯ ಅವರಿಗೆ ತಿರುಗೇಟು ಕೊಟ್ಟಿರುವ ಸಚಿವರು; ಕಳ್ಳನ ಜಾಗದಲ್ಲಿ ನಿಂತು ಊರಿಗೆಲ್ಲ ಗೀತೆ ಬೋಧಿಸುತ್ತಿದ್ದೀರಿ ಎಂದು ಲೇವಡಿ ಮಾಡಿದರು.
ನಿಮ್ಮ ವಿರುದ್ಧ ಬಂದ ಮೂಡಾ ಕೊಚ್ಚೆಯ ಗಮನ ಬೇರೆಡೆಗೆ ಸೆಳೆಯುವ ನಿಮ್ಮ ಹುನ್ನಾರ ನನಗೆ ಅರ್ಥವಾಗುತ್ತದೆ. ಹೇಗಾದರೂ ಅಧಿಕಾರದಲ್ಲೇ ಉಳಿದು ಲೂಟಿ ಹೊಡೆಯಬೇಕೆನ್ನುವ ನಿಮ್ಮ ಧನದಾಹದ ಹಪಾಹಪಿಯನ್ನೂ ಅರ್ಥ ಮಾಡಿಕೊಳ್ಳಬಲ್ಲೆ. ಕಳ್ಳನ ಜಾಗದಲ್ಲಿ ನಿಂತು ಊರಿಗೆಲ್ಲ ಗೀತೆ ಬೋಧಿಸುವ ನಿಮ್ಮ ಪ್ರಾರಬ್ಧ ಎಂಥಾ ಕೀಳುಮಟ್ಟಕ್ಕೆ ಇಳಿದಿದೆ ಎನ್ನುವುದನ್ನೂ ಅರ್ಥ ಮಾಡಿಕೊಂಡಿದ್ದೇನೆ. ಎಷ್ಟೇ ಆದರೂ ನೀವು ಸಕಲ ಕಲೆಗಳ ಸಿದ್ದಕರ್ಮಿ, ಇಂಥ ಗಲೀಜು ಕೆಲಸ ನಿಮಗೆ ಬೆಣ್ಣೆಯಿಂದ ಬಂದ ವಿದ್ಯೆ! ಎಂದು ಸಚಿವರು ಕಿಡಿಕಾರಿದ್ದಾರೆ.

Also read: ಅಪಘಾತದಲ್ಲಿ ಕೈ-ಕಾಲು ತುಂಡಾಗಿದ್ದರೆ ಭಯಪಡದೆ ಹೀಗೆ ಮಾಡಿ

ಸಾಯಿ ವೆಂಕಟೇಶ್ವರಕ್ಕೆ 550 ಎಕರೆ ಮಂಜೂರು ಮಾಡಿದ್ದೇನೆ ಎಂದು ಬೊಗಳೆ ಬಿಟ್ಟಿದ್ದೀರಿ. ನನ್ನ ಬರವಣಿಗೆ ಪೋರ್ಜರಿ ಆಗಿದೆ. ಪತ್ರಿಕೆಗಳ ವರದಿಗೆ ನಾನು ಉತ್ತರ ಕೊಡುತ್ತೇನೆ, ಪಲಾಯನ ನನ್ನ ಜಾಯಮಾನವಲ್ಲ. ಆದರೆ, ಆ ವರದಿಯನ್ನೇ ನೆತ್ತಿ ಮೇಲಿಟ್ಟುಕೊಂಡು ಉಪ್ಪಿನಕಾಯಿ ಚಪ್ಪರಿಸುವ ದೈನೇಸಿ ಸ್ಥಿತಿ ನಿಮಗೇಕೆ? 40 ವರ್ಷಗಳ ರಾಜಕೀಯ ಜೀವನದಲ್ಲಿ ನನ್ನ ಮೇಲೆ ಒಂದೇ ಒಂದು ಕಪ್ಪುಚುಕ್ಕೆ ಇಲ್ಲವೆನ್ನುವ ನೀವು, ವೈಟ್ನರ್ ಉಜ್ಜಿ ಕಪ್ಪುಚುಕ್ಕೆ ತೆಗೆಯುವ ವ್ಯರ್ಥ ಪ್ರಯತ್ನ ಮಾಡಿದ್ದೇಕೆ? ಎಂದಿರುವ ಸಚಿವರು; Kappu chukke removed from whitener!! ಎಂದು ಕುಟುಕಿದ್ದಾರೆ.

ಮೂಡದಲ್ಲಿ ನೀವು, ನಿಮ್ಮ ಸಕುಟುಂಬ ಪರಿವಾರ ಸರಕಾರಿ ಭೂಮಿಯನ್ನು ಹೇಗೆಲ್ಲಾ ಮುಕ್ಕಿತು ಎನ್ನುವುದಕ್ಕೆ ದಂಡಿದಂಡಿ ದಾಖಲೆಗಳೇ ಇವೆ. ನಿಮ್ಮ ಪಟಾಲಂ ಹೆಲಿಕಾಪ್ಟರ್ ನಲ್ಲಿ ಕದ್ದು ಸಾಗಿಸಿದ ದಾಖಲೆಗಳು ಸುಳ್ಳಾ? ಕಪ್ಪುಚುಕ್ಕೆಯನ್ನು ನಿಮ್ಮ ವೈಟ್ನರ್ ಅಳಿಸೀತಾ ಸಿದ್ದರಾಮಯ್ಯನವರೇ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

ನನ್ನ ಸಹಿ ಇಲ್ಲ, ಟಿಪ್ಪಣಿಯೂ ಇಲ್ಲ ಅಂತೀರಿ. ಅಪ್ಪಣೆಯನ್ನಷ್ಟೇ ಕೊಟ್ಟಿದ್ದೀರಿ! 14 ಸೈಟಿಗೆ ₹62 ಕೋಟಿ ಪರಿಹಾರ ಕೇಳಲು ಹೇಳಿದ್ದು ಯಾವ ಟಿಪ್ಪಣಿ? ನಿಮ್ಮದು ನಾಲಿಗೆಯೋ.. ಇನ್ನೇನೋ.. ಆಚಾರವಿಲ್ಲದ ನಾಲಿಗೆ ನನ್ನ ತಟ್ಟೆಯತ್ತ ಚಾಚಿದೆ ಸತ್ತ ಜೀವದ ರುಚಿ ನೆಕ್ಕಲು.. ಎಂದು ಟೆಕಿಸಿರುವ ಅವರು; ಸಿದ್ದರಾಮಯ್ಯನವರೇ.. ನಾನು ಕಾನೂನು ಪಂಡಿತ, ವಕೀಲ ಎನ್ನುತ್ತೀರಿ. 2011ರಲ್ಲಿ ಸುಪ್ರೀಂ ಕೋರ್ಟ್ SITಗೆ ಕೊಟ್ಟ ಆದೇಶವೇನು ಎಂದು ನಿಮಗೆ ಗೊತ್ತಿಲ್ಲವೇ? ನಾನು ವಕೀಲ.. ನಾನು ವಕೀಲ.. ಎಂದು ಪದೇಪದೆ ಹೇಳಬೇಡಿ ಎಂದು ಹಿಂದೆಯೇ ಸಲಹೆ ಮಾಡಿದ್ದೆ. ಬುದ್ಧಿಗೇಡಿಗಳಿಗೆ ಬುದ್ಧಿವಾದ ರುಚಿಸದು ಎಂದು ಹೇಳಿದ್ದಾರೆ.

http://kalpa.news/wp-content/uploads/2024/04/VID-20240426-WA0008.mp4

ರಾಜ್ಯಪಾಲರಿಗೆ SIT ಬರೆದ ಪತ್ರ ಇಟ್ಟುಕೊಂಡು ಹಾರಾಟ ಮಾಡುತ್ತಿದ್ದೀರಿ ನೀವು. ಪತಂಗದ ಹಾರಾಟ ನೋಡಲಿಕ್ಕೆ ಚೆಂದ, ಕೆಳಗಿರುವ ಬೆಂಕಿಜ್ವಾಲೆ ಅದಕ್ಕೆ ಅರಿವಿರುವುದಿಲ್ಲ. ನಿಮ್ಮ ಬಗ್ಗೆ ನನಗೆ ಕನಿಕರವಿದೆ. ನಿಮ್ಮ ಆನಂದ ತಾತ್ಕಾಲಿಕ ಸಿದ್ದರಾಮಯ್ಯನವರೇ.. ಎಂದು ಕೇಂದ್ರ ಸಚಿವರು ಪ್ರಶ್ನೆ ಮಾಡಿದ್ದಾರೆ.

ಸುತ್ತಲೂ ಪಟಾಲಂ ಕಟ್ಟಿಕೊಂಡು, ಹೈಕಮಾಂಡ್ ಅನ್ನೇ ಕಾಲಕಸ ಮಾಡಿಕೊಂಡು, ನಂಬಿ ಕೈಹಿಡಿದವರ ಬೆನ್ನಿಗೆ ಚೂರಿ ಹಾಕಿ ಕುರ್ಚಿಗಾಗಿ ಪಾಲಿಟಿಕ್ಸ್ ಮಾಡುವ ನಿಮ್ಮ ದಿಕ್ಕೆಟ್ಟ ದುಸ್ಥಿತಿ ನನಗಿಲ್ಲ ಸಿದ್ದರಾಮಯ್ಯನವರೇ..

ನನ್ನ ರಾಜಕಾರಣ ನಿಮ್ಮಂತೆಯೇ ಹಣಕ್ಕೆ, ಅಧಿಕಾರಕ್ಕೆ ಅಲ್ಲ. ಅಧಿಕಾರ ಇದ್ದರೂ, ಇಲ್ಲದಿದ್ದರೂ ನಾನು ನಾನೇ… ‘ಸೋತರೆ ಸೋಲಬೇಕು ಬಾಹುಬಲಿಯಂತೆ..’ ಆ ಮಹಾನ್ ವಿರಾಗಿಯೇ ನನ್ನ ಆದರ್ಶ. 20 ತಿಂಗಳ ಅಧಿಕಾರ,14 ತಿಂಗಳ ಸರಕಾರ ತ್ಯಜಿಸುವಾಗಲೂ ನಾನು ನಿರ್ಭಾವುಕ. ಇದು ನಿಮಗೆ ಸಾಧ್ಯವೇ? ಎಂದು ಕುಮಾರಸ್ವಾಮಿ ಅವರು ಕೇಳಿದ್ದಾರೆ.

ಪ್ರಧಾನಮಂತ್ರಿಗಳ ರಕ್ಷಣೆ ಪಡೆದುಕೊಳ್ಳುವ, ಅವರ ಗೌರವಕ್ಕೆ ಧಕ್ಕೆ ತರುವ ಕೆಲಸ ನಾನೆಂದೂ ಮಾಡಲಾರೆ. ನನ್ನನ್ನು ನಾನು ರಕ್ಷಣೆ ಮಾಡಿಕೊಳ್ಳುವುದೂ ಗೊತ್ತು. ನಿಮ್ಮ ದುಷ್ಟತನದ ಭಕ್ಷಣೆಯೂ ಗೊತ್ತು. ನನ್ನ ಪುರಾಣ ಕಂತುಗಳಲ್ಲಿ ಬರುತ್ತದೆ ಎನ್ನುವ ಸಿದ್ದರಾಮಯ್ಯನವರೇ.. ನಿಮ್ಮ ಹೆಣೆಬರಹ ನಿರ್ಧರಿಸುವ ನೂರಾರು ಪುರಾಣಗಳು ನನ್ನಲ್ಲಿವೆ. ಸಾವಿರಾರು ಚಾಪ್ಟರುಗಳ ಪ್ಯಾನ್ ಇಂಡಿಯಾ ಸಿನಿಮಾವನ್ನೇ ಮಾಡಬಹುದು ಎಂದು ಸಿದ್ದರಾಮಯ್ಯ ಅವರಿಗೆ ಎಚ್ಚರಿಕೆ ನೀಡಿದ್ದಾರೆ ಕುಮಾರಸ್ವಾಮಿ ಅವರು.
ಬೇಲಿಕೇರಿಯಲ್ಲಿ ಅದಿರು ಕದ್ದ ಅಸಾಮಿಗಳ ಜತೆ ನಿಮ್ಮ ‘ಸಿದ್ಧಹಸ್ತ’ ಶಾಮೀಲಾಗಿರುವ ಗಣಿಪುರಾಣ ಬಿಚ್ಚಿದರೆ ನಿಮ್ಮ ಮನೆಯ ಮುಂದೆ ಕಾನ್ಸ್ ಟೇಬಲ್ ಗಳು ಸಾಲುಗಟ್ಟಬೇಕಾಗುತ್ತದೆ ಅವರು ಎಚ್ಚರಿಕೆ ನೀಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

Tags: BangaloreCM SiddaramaiahH D KumaraswamyKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರುಸಿಎಂ ಸಿದ್ದರಾಮಯ್ಯಹೆಚ್.ಡಿ. ಕುಮಾರಸ್ವಾಮಿ
Share196Tweet123Send
Previous Post

ಹೆಣ್ಣುಮಕ್ಕಳ ಸ್ವಯಂ ರಕ್ಷಣೆಗೆ ಕರಾಟೆ ಕಲಿಕೆ ಅತ್ಯಂತ ಪ್ರಯೋಜನಕಾರಿ: ಪ್ರೇಮಾ ಟೋಕಪ್ಪ ಅಭಿಪ್ರಾಯ

Next Post

Precautionary steps discussed to prevent the spread of Mpox: Minister Dr. Sharan Prakash Patil

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Precautionary steps discussed to prevent the spread of Mpox: Minister Dr. Sharan Prakash Patil

Precautionary steps discussed to prevent the spread of Mpox: Minister Dr. Sharan Prakash Patil

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ದಳಪತಿ ಯುಗಾರಂಭ | ತಮಿಳುನಾಡು ಸಿಎಂ ಆಗಿ ವಿಜಯ್ ಪ್ರಮಾಣ ವಚನ | ತ್ರಿಶಾ ಮಿಂಚಿಂಗ್

ದಳಪತಿ ಯುಗಾರಂಭ | ತಮಿಳುನಾಡು ಸಿಎಂ ಆಗಿ ವಿಜಯ್ ಪ್ರಮಾಣ ವಚನ | ತ್ರಿಶಾ ಮಿಂಚಿಂಗ್

May 10, 2026
ಹಿರಿಯ ರಾಜಕಾರಣಿ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್ ವಿಧಿವಶ

ಹಿರಿಯ ರಾಜಕಾರಣಿ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್ ವಿಧಿವಶ

May 10, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಿದ್ಧಾರ್ಥಗೆ ಉತ್ತಮ ಅಂಕ | ಮಾಜಿ ಡಿಸಿಎಂ ಈಶ್ವರಪ್ಪ ಅಭಿನಂದನೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಿದ್ಧಾರ್ಥಗೆ ಉತ್ತಮ ಅಂಕ | ಮಾಜಿ ಡಿಸಿಎಂ ಈಶ್ವರಪ್ಪ ಅಭಿನಂದನೆ

May 9, 2026
ನೈರುತ್ಯ ರೈಲ್ವೆ | ಮೂರು ಜೋಡಿ ಡೆಮು ವಿಶೇಷ ರೈಲುಗಳ ಸಂಚಾರ ಕಾಯಂ

ನೈರುತ್ಯ ರೈಲ್ವೆ | ಮೂರು ಜೋಡಿ ಡೆಮು ವಿಶೇಷ ರೈಲುಗಳ ಸಂಚಾರ ಕಾಯಂ

May 9, 2026
ತೆರೆ ಮೇಲೆ ರಾಜ್‌ಕುಮಾರ್‌, ಅಂತರಂಗದಲ್ಲಿ ಮುತ್ತುರಾಜ್‌ ಇದ್ದರು: ಮಂಜುನಾಥ್‌ ಚವಾಣ್‌

ತೆರೆ ಮೇಲೆ ರಾಜ್‌ಕುಮಾರ್‌, ಅಂತರಂಗದಲ್ಲಿ ಮುತ್ತುರಾಜ್‌ ಇದ್ದರು: ಮಂಜುನಾಥ್‌ ಚವಾಣ್‌

May 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL