Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಉತ್ತರ ಕನ್ನಡ

ದೇವರು ನೀಡುವ ಆಶೀರ್ವಾದ ಗುರು: ರಾಘವೇಶ್ವರ ಶ್ರೀ

August 26, 2024
in ಉತ್ತರ ಕನ್ನಡ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಗುರುಗಳು ನಮ್ಮನ್ನು ಉದ್ಧರಿಸಲು ಲೋಕದಲ್ಲಿ ಪ್ರಕಟಗೊಳ್ಳುತ್ತಾರೆ. ಗುರು ದೇವರು ನೀಡುವ ಆಶೀರ್ವಾದ. ಪಾಪದ ಕುಂಡದಲ್ಲಿರುವ ನಮ್ಮನ್ನು ಅನುಗ್ರಹಿಸಲು ಗುರು ಅವತಾರವೆತ್ತಿ ಬರುತ್ತಾರೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ #Raghaveshwara Shri ನುಡಿದರು.

ಅಶೋಕೆಯ ಗುರುದೃಷ್ಟಿಯಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 35ನೇ ದಿನವಾದ ಶನಿವಾರ ಆತ್ಮವಿದ್ಯಾ ಆಖ್ಯಾಯಿಕಾ ಪ್ರವಚನದ ಎಂಪಿ3 ಅವತರಣಿಕೆ ಅನಾವರಣಗೊಳಿಸಿ ಆಶೀರ್ವಚನ ನೀಡಿದರು. ಗುರು ಇಲ್ಲದಿದ್ದರೆ ನಮ್ಮ ಬದುಕು ಅರ್ಥಹೀನ ಎಂದು ಬಣ್ಣಿಸಿದರು.
ರಾಮಾಯಣದಲ್ಲಿ ದಶರಥನ ಧ್ವನಿ ಬಗ್ಗೆ ದುಂದುಬಿಯ ನಾದಕ್ಕೆ ಸದೃಶವಾದ ನಾದ; ಗಂಭೀರ, ಮಾತುಗಳು ಮತ್ತೆ ಮತ್ತೆ ಅನುರಣಿಸುವಂಥದ್ದು; ಗುಡುಗಿನ ಧ್ವನಿ, ರಾಜಲಕ್ಷಣದ ಧ್ವನಿ, ಕೇಳಿದ ತಕ್ಷಣವೇ ಆಪ್ಯಾಯಮಾನವಾಗುವ, ಉಪಮೆ ಇಲ್ಲದ ಧ್ವನಿ ಎಂಬ ಉಲ್ಲೇಖ ವಾಲ್ಮೀಕಿ ರಾಮಾಯಣದಲ್ಲಿದೆ. ದೊಡ್ಡ ಗುರುಗಳ ಧ್ವನಿಯೂ ಅಂಥದ್ದೇ ಆಪ್ಯಾಯಮಾನ ಧ್ವನಿ ಎಂದು ಬಣ್ಣಿಸಿದರು.

ಅಶೋಕೆಗೆ ಬರಲು ದೊಡ್ಡಗುರುಗಳು ಆಶಿಸಿದ್ದರು. ಆದರೆ ಸಾಧ್ಯವಾಗಿರಲಿಲ್ಲ. ಇಂದು ಅವರ ಪ್ರವಚನದ ಧ್ವನಿಯನ್ನು ಎಲ್ಲರೂ ಕೇಳುವುದು ಸಾಧ್ಯವಾಯಿತು. ಅವರ ಶುಭಾಗಮನದ ಪ್ರತೀಕ ಇದಾಗಿದೆ. ದೊಡ್ಡಗುರುಗಳ ಭಾವಪ್ರಕಾಶ, ಅಂತರಂಗ ಆ ಕೃತಿಯ ರೂಪದಲ್ಲಿ ಪ್ರಕಟಗೊಂಡಿದೆ. ಇಂಥ ಅಪೂರ್ವ ಕೃತಿ ಅನಾವರಣಗೊಂಡಿರುವುದು ಅರ್ಥಪೂರ್ಣ ಎಂದು ಬಣ್ಣಿಸಿದರು.

ದೊಡ್ಡಗುರುಗಳ ವಿದ್ಯೆ, ಶಾಸ್ತ್ರಜ್ಞಾನ, ವ್ಯವಹಾರ ಜ್ಞಾನ ಅತ್ಯಪೂರ್ವ. ನಮ್ಮ ಆತ್ಮ, ಹೃದಯದಲ್ಲಿ ಗುರುವಾಣಿ ತುಂಬಿರಲಿ ಎಂದು ಹಾರೈಸಿದರು.
ಇಂದು ಮೂಲದತ್ತ ಶಿಷ್ಯಗಂಗೆ ಮಂಗಳೂರಿನಿಂದ ಹರಿದು ಬಂದಿದೆ. ಬೃಹತ್ ಸಂಖ್ಯೆಯಲ್ಲಿ ಶಿಷ್ಯಭಕ್ತರು ಆಗಮಿಸಿದ್ದಾರೆ. ಈ ಭಕ್ತಿಗೆ ಉಭಯ ಗುರುಗಳ ಆಶೀರ್ವಾದ ಲಭಿಸಿದೆ. ಗುರುವಿನೆಡೆಗೆ ಸದಾ ಹರಿಯುವ ಈ ಶಿಷ್ಯವರ್ಗ ಸಂತೋಷ ತರುವಂಥದ್ದು. ಈ ಚಾತುರ್ಮಾಸ್ಯದ ಶುಭಸಂದರ್ಭದಲ್ಲಿ ಎಲ್ಲ ಶಿಷ್ಯರಿಗೆ ಪುಣ್ಯಸಂಚಯನವಾಗಲಿ ಎಂದು ಆಶಿಸಿದರು.

ಕಾಲ ಪ್ರವಚನ ಸರಣಿ ಮುಂದುವರಿಸಿದ ಶ್ರೀಗಳು, “ಛಂದಸ್ಸು ವೇದಬ್ರಹ್ಮನ ಪಾದಗಳಾದರೆ, ಕಣ್ಣು ಜ್ಯೌತಿಷವಾಯಿತು. ವೇದಪುರುಷನ ಸಾನ್ನಿಧ್ಯ ಎಲ್ಲರ ಆತ್ಮದಲ್ಲಿದೆ. ನಮಗೆ ಇರುವ ಎಲ್ಲ ಜ್ಞಾನಗಳೂ ವೇದಪುರುಷನ ಕೃಪೆ. ಜ್ಯೌತಿಷವೆಂಬ ಕಣ್ಣು ನಮ್ಮ ಬದುಕನ್ನು ಕಾಣಲೂ ಸಹಕಾರಿ. ಎಲ್ಲ ಶಾಸ್ತ್ರಗಳೂ ಜೀವಕ್ಕೆ, ಜೀವನಕ್ಕೆ, ಜೀವನವನ್ನು ಮೀರಲು ಉಪಯೋಗವಾಗಬೇಕು” ಎಂದು ಹೇಳಿದರು.

ಆಯುರ್ವೇದಕ್ಕೆ ಜ್ಯೋತಿಷ್ಯ ಕಡ್ಡಾಯವಾಗಬೇಕು. ಆಯುರ್ವೇದದಲ್ಲಿ ಜ್ಯೋತಿಷ್ಯಕ್ಕೆ ದೊಡ್ಡ ಸ್ಥಾನವಿದೆ. ಜಾತಕದಿಂದ ಆರೋಗ್ಯ, ರೋಗ, ಯಾವ ಅಂಗದಲ್ಲಿ ರೋಗವಿದೆ, ಯಾವ ಧಾತು ರೋಗಕ್ಕೆ ಕಾರಣವಾಗಿದೆ ಎನ್ನುವುದನ್ನು ತಿಳಿಯಬಹುದು. ಕಾಯಿಲೆಕಾರಕ ಗ್ರಹದ ದಶಾಭುಕ್ತಿಯಲ್ಲಿ ಆ ರೋಗ ಬರಬಹುದು. ಜ್ಯೋತಿಷ್ಯದ ಮೂಲಕ ಆರೋಗ್ಯದ ಬಗ್ಗೆ ತಿಳಿದುಕೊಳ್ಳಲು ಅವಕಾಶವಿದೆ ಎಂದರು.

ರೋಗಜ್ಯೋತಿಷ ಬಗ್ಗೆ ಉಲ್ಲೇಖಿಸಿ, ಜ್ಯೋತಿಷ್ಯದ ಪ್ರಕಾರ ರೋಗಗಳು ಎರಡು ವಿಧ. ಒಂದು ನಿಜ ಇನ್ನೊಂದು ಆಗಂತುಕ. ನಮ್ಮೊಳಗೇ ವ್ಯಕ್ತವಾಗುವದು ನಿಜ; ಇದರಲ್ಲಿ ಎರಡು ಭಾಗ. ನಿಜದಲ್ಲಿ ಮತ್ತೆರಡು ವಿಭಾಗ; ಒಂದು ಮನೋಜನ್ಯ ಇನ್ನೊಂದು ಶರೀರ ಜನ್ಯ. ಒಂದು ಕಾರಣ ತಿಳಿಯುವಂತದ್ದು, ಇನ್ನೊಂದು ಕಾರಣ ತಿಳಿಯದ ರೋಗಗಳು ಎಂದು ವಿಶ್ಲೇಷಿಸಿದರು.

http://kalpa.news/wp-content/uploads/2024/04/VID-20240426-WA0008.mp4

ಮಂಗಳೂರು ಮಂಡಲದ ಬಾಯಾರು, ಕನ್ಯಾನ, ವಿಟ್ಲ, ಕೇಪು, ಕೋಳ್ಯೂರು ಮತ್ತು ಕಲ್ಲಡ್ಕ ವಲಯಗಳಿಂದ ಸರ್ವಸೇವೆ ನೆರವೇರಿತು. ಶ್ರೀ ರಾಘವೇಂದ್ರಭಾರತೀಸ್ವಾಮೀಜಿಯವರು ರಚಿಸಿದ ಆತ್ಮವಿದ್ಯಾ ಆಖ್ಯಾಯಿಕದ ಬಗ್ಗೆ ಪರಮಪೂಜ್ಯರೇ ಅನುಗ್ರಹಿಸಿದ ಪ್ರವಚನದ ಧ್ವನಿಮುದ್ರಿಕೆಯ ಎಂಪಿ3 ಅವತರಣಿಕೆಯನ್ನು ದೊಡ್ಡಗುರುಗಳ ಕಾಲದಲ್ಲಿ ಶ್ರೀಪರಿವಾರದಲ್ಲಿ ಸೇವೆ ಸಲ್ಲಿಸಿದ ವೇದಮೂರ್ತಿ ತಿಮ್ಮಣ್ಣ ಭಟ್ ನೆರವೇರಿಸಿದರು.

ಬೈಂದೂರು ಮಾಜಿ ಶಾಸಕ ಸುಕುಮಾರ ಶೆಟ್ಟಿ ಆಗಮಿಸಿ ಆಶೀರ್ವಾದ ಪಡೆದರು. ಹವ್ಯಕ ಮಹಾಮಂಡಲ ಪ್ರಧಾನ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು, ವಿದ್ಯಾರ್ಥಿ ಪ್ರಧಾನ ಈಶ್ವರ ಪ್ರಸಾದ್ ಕನ್ಯಾನ, ಮಂಗಳೂರು ಮಂಡಲ ಅಧ್ಯಕ್ಷ ಉದಯಶಂಕರ ನೀರ್ಪಾಜೆ, ಉಪಾಧ್ಯಕ್ಷ ರಾಜಶೇಖರ ಕಾಕುಂಜೆ, ಕಾರ್ಯದರ್ಶಿ ರಮೇಶ್ ಭಟ್ ಸರವು, ಚಾತುರ್ಮಾಸ್ಯ ಸಮಿತಿ ಕಾರ್ಯದರ್ಶಿ ಶ್ರೀಕಾಂತ್ ಪಂಡಿತ್, ಶ್ರೀಕಾರ್ಯದರ್ಶಿ ಜಿ.ಕೆ.ಮಧು, ಶಾಸ್ತ್ರಿಗಳಾದ ಸುಬ್ರಾಯ ಅಗ್ನಿಹೋತ್ರಿ, ಶ್ರೀಶ ಶಾಸ್ತ್ರಿ, ವಿವಿವಿ ಆಡಳಿತಾಧಿಕಾರಿ ಡಾ.ಪ್ರಸನ್ನ ಕುಮಾರ್ ಟಿ.ಜಿ, ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ, ಜಿ.ವಿ.ಹೆಗಡೆ, ಮೋಹನ ಹರಿಹರ ಮತ್ತಿತರರು ಉಪಸ್ಥಿತರಿದ್ದರು. ಸುಧನ್ವ ಶಾಸ್ತ್ರಿ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: GokarnaKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaRaghaveshwara shriUttara Kannadaಗೋಕರ್ಣಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ
Previous Post

ಶಿರಾಳಕೊಪ್ಪ | ಪೊಲೀಸ್ ಕಾರ್ಯಾಚರಣೆ | ಕಳುವಾಗಿದ್ದ ಹಸುಗಳ ಪತ್ತೆ | ಆರೋಪಿ ಬಂಧನ

Next Post

ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ | ಪರಪ್ಪನ ಅಗ್ರಹಾರದ 7 ಮಂದಿ ಅಮಾನತು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ | ಪರಪ್ಪನ ಅಗ್ರಹಾರದ 7 ಮಂದಿ ಅಮಾನತು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

file photo

ಗುತ್ತಿಗೆ ನಂತರ ವಸತಿ ಯೋಜನೆಯಲ್ಲೂ ಮುಸ್ಲಿಮರಿಗೆ ಮೀಸಲಾತಿ ಹೆಚ್ಚಳ?

June 19, 2025

ಕೊಪ್ಪಳ ನೂತನ ಜಿಲ್ಲಾಧಿಕಾರಿಗಳಾಗಿ ಸುರೇಶ ಬಿ. ಇಟ್ನಾಳ ಅಧಿಕಾರ ಸ್ವೀಕಾರ

June 19, 2025
Internet Image

ಗಮನಿಸಿ! ಜೂ.21, 24ರಂದು ಶಿವಮೊಗ್ಗದ ಈ ಕೆಳಕಂಡ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ

June 19, 2025

ಕೂಡಲೇ ಜಾತಿಗಣತಿ ವರದಿ ಜಾರಿಗೆ ತನ್ನಿ ಇಲ್ಲವಾದರೆ ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

file photo

ಗುತ್ತಿಗೆ ನಂತರ ವಸತಿ ಯೋಜನೆಯಲ್ಲೂ ಮುಸ್ಲಿಮರಿಗೆ ಮೀಸಲಾತಿ ಹೆಚ್ಚಳ?

June 19, 2025

ಕೊಪ್ಪಳ ನೂತನ ಜಿಲ್ಲಾಧಿಕಾರಿಗಳಾಗಿ ಸುರೇಶ ಬಿ. ಇಟ್ನಾಳ ಅಧಿಕಾರ ಸ್ವೀಕಾರ

June 19, 2025
Internet Image

ಗಮನಿಸಿ! ಜೂ.21, 24ರಂದು ಶಿವಮೊಗ್ಗದ ಈ ಕೆಳಕಂಡ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!